ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ನಾಲ್ವರ ಬಂಧನ

Date:

Advertisements

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಾಲ್ಪಾರೈ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ, ಇಬ್ಬರು ಹಂಗಾಮಿ ಪ್ರಾಧ್ಯಾಪಕರು ಮತ್ತು ಓರ್ವ ಪ್ರಯೋಗಾಲಯ ತಂತ್ರಜ್ಞರನ್ನು ಪೊಲೀಸರು ಬಂಧಿಸಿದ್ದಾರೆ. ಆ ನಾಲ್ವರನ್ನೂ ಸೇವೆಯಿಂದ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕಳೆದ ತಿಂಗಳು (ಆಗಸ್ಟ್‌) 30ರಂದು ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ಆಯೋಗವು ಜಾಗೃತಿ ಕಾರ್ಯಕ್ರಮ ಆಯೋಜಿಸಿತ್ತು. ಈ ವೇಳೆ, ವಿದ್ಯಾರ್ಥಿನಿಯರು ತಮಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದರು. ಪ್ರಾಧ್ಯಾಪಕರು ಮತ್ತು ಲ್ಯಾಬ್ ತಂತ್ರಜ್ಞರ ವಿರುದ್ಧ ಏಳು ಮಂದಿ ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಅವರ ಆರೋಪದ ಆಧಾರದ ಮೇಲೆ ಆಯೋಗದ ಸಂಯೋಜಕಿ ಕೃಷ್ಣವೇಣಿ ಪೊಲ್ಲಾಚಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ದಾಖಲಿಸಿಕೊಂಡಿರುವ ಪೊಲೀಸರು ಕಾಲೇಜಿನ ಪ್ರಾಧ್ಯಾಪಕ ರಾಜಪಾಂಡಿ, ಹಂಗಾಮಿ ಪ್ರಾಧ್ಯಾಪಕರಾದ ಮುರಳಿರಾಜ್ ಮತ್ತು ಸತೀಶ್‌ಕುಮಾರ್, ಪ್ರಯೋಗಾಲಯ ಸಹಾಯಕ ಅನ್ಬರಸು ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೊಯಮತ್ತೂರು ಜಿಲ್ಲಾಧಿಕಾರಿ ಕ್ರಾಂತಿಕುಮಾರ್ ಹೇಳಿದ್ದಾರೆ.

Advertisements

ಈ ವರದಿ ಓದಿದ್ದೀರಾ?: ‘ಅಪರಾಧಿಯ ಆಸ್ತಿಯನ್ನು ಹೇಗೆ ಕೆಡವುತ್ತೀರಿ’; ಸರ್ಕಾರಗಳ ಬುಲ್ಡೋಜರ್ ನ್ಯಾಯದ ವಿರುದ್ಧ ಸುಪ್ರೀಂ ಕಿಡಿ

“ಪ್ರಾಧ್ಯಾಪಕರು ಮತ್ತು ಪ್ರಯೋಗಾಲಯ ತಂತ್ರಜ್ಷರು ವಾಟ್ಸಾಪ್‌ನಲ್ಲಿ ತಮಗೆ ಅಶ್ಲೀಲ ಸಂದೇಶ ಕಳಿಸುತ್ತಿದ್ದಾರೆ. ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ನಮಗೆ ಕಾಲೇಜಿನ ವ್ಯಾಸಂಗ ಮಾಡುವುದೇ ಕಷ್ಟವಾಗುತ್ತಿದೆ” ಎಂದು ವಿದ್ಯಾರ್ಥಿನಿಯರು ಆಯೋಗದ ಮುಖಂಡರ ಎದುರು ತಮ್ಮ ಅಳಲು ತೋಡಿಕೊಂಡಿದ್ದರು ಎಂದು ವರದಿಯಾಗಿದೆ.

“ತರಗತಿಗಳು ಮುಗಿದ ಬಳಿಕವೂ ತಮ್ಮನ್ನು ಲ್ಯಾಬ್‌ನಲ್ಲಿ ಇರುವಂತೆ ಆರೋಪಿಗಳು ಹೇಳುತ್ತಾರೆ. ಅನುಚಿತವಾಗಿ ವರ್ತಿಸುವ ಮೂಲಕ ದೈಹಿಕ ಹಿಂಸೆ ನೀಡುತ್ತಾರೆ. ತಮ್ಮನ್ನು ಅಸಭ್ಯವಾಗಿ ಸ್ಪರ್ಶಿಸುತ್ತಾರೆ” ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X