ಅದಾನಿ ಪರ ಮಾತನಾಡಿ ಮಿತ್ರ ಪಕ್ಷಗಳಿಗೆ ಅಚ್ಚರಿ ಮೂಡಿಸಿದ ಶರದ್‌ ಪವಾರ್‌

Date:

ಹಿಂಡನ್‌ ಬರ್ಗ್‌ ವರದಿಯನ್ನು ಆಧರಿಸಿ ಕಾಂಗ್ರೆಸ್‌ ಸೇರಿದಂತೆ 19 ವಿಪಕ್ಷಗಳು ಅದಾನಿ ಸಮೂಹದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸಲು ಜಂಟಿ ಸದನ ಸಮಿತಿಯನ್ನು ರಚಿಸುವಂತೆ ಪಟ್ಟು ಹಿಡಿದಿವೆ. ಇದೇ ವೇಳೆ ಕಾಂಗ್ರೆಸ್‌ನ ಮಿತ್ರ ಪಕ್ಷವಾಗಿರುವ ಎನ್‌ಸಿಪಿಯ ಮುಖ್ಯಸ್ಥ ಶರದ್‌ ಪವಾರ್‌, ಉದ್ಯಮಿ ಗೌತಮ್‌ ಅದಾನಿಯನ್ನು ಟಾರ್ಗೇಟ್‌ ಮಾಡಲಾಗುತ್ತಿದೆ ಎನ್ನುವ ಮೂಲಕ ತಮ್ಮ ಮಿತ್ರ ಪಕ್ಷಗಳಿಗೆ ಅಚ್ಚರಿ ಮೂಡಿಸಿದ್ದಾರೆ.

ಶುಕ್ರವಾರ ರಾಷ್ಟ್ರೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಹಿಂಡನ್‌ ಬರ್ಗ್‌ ವರದಿ ಮತ್ತು ಅದಾನಿ ಸಮೂಹದ ಮೇಲಿನ ಆರೋಪಗಳ ಕುರಿತು ಪ್ರತಿಕ್ರಿಯಿಸಿರುವ ಶರದ್‌ ಪವಾರ್‌, “ಅದಾನಿ ಸಮೂಹದಲ್ಲಿ ಅವ್ಯವಹಾರ ನಡೆದಿದೆ ಎಂದು ವರದಿ ಪ್ರಕಟಿಸಿರುವ ಸಂಸ್ಥೆಯ ಹಿನ್ನೆಲೆ ಏನು? ವರದಿಯ ಹಿಂದಿನ ಉದ್ದೇಶವೇನು ಎಂಬುದನ್ನು ಅರಿಯುವ ಅಗತ್ಯವಿದೆ. ಆ ವರದಿಯನ್ನು ಆಧರಿಸಿ ವಿರೋಧ ಪಕ್ಷಗಳು ಉದ್ಯಮಿ ಅದಾನಿಯವರನ್ನು ಗುರಿಯಾಗಿಸಿಕೊಂಡಂತೆ ಕಾಣುತ್ತಿದೆ. ಅದಾನಿ ಮತ್ತು ಅಂಬಾನಿ ಇಬ್ಬರೂ ದೇಶದ ಇಂಧನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಆಡಳಿತರೂಢ ಸರ್ಕಾರವನ್ನು ಟೀಕಿಸುವ ಉದ್ದೇಶದಿಂದ ಅದಾನಿಯನ್ನು ಗುರಿಯಾಗಿಸುವುದು ಸರಿಯಲ್ಲ. ಅದಾನಿ ಸಮೂಹದ ವಿರುದ್ಧ ತನಿಖೆ ನಡೆಸಲು ವಿಪಕ್ಷಗಳು ಸದನ ಸಮಿತಿ ರಚಿಸುವಂತೆ ಆಗ್ರಹಿಸುತ್ತಿರುವುದರಲ್ಲಿ ಯಾವುದೇ ಹುರುಳಿಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಲ ಮುಡಿದ ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ

ಶರದ್‌ ಪವಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, “ಎನ್‌ಸಿಪಿ ನಾಯಕರು ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಮಾನ ಮನಸ್ಕರಿರುವ 19 ವಿರೋಧ ಪಕ್ಷಗಳಿಗೆ ಅದಾನಿ ಸಂಸ್ಥೆ ನಡೆಸಿದ ಅವ್ಯವಹಾರದ ಬಗ್ಗೆ ಯಾವುದೇ ಸಂಶಯವಿಲ್ಲ. ಬಿಜೆಪಿಯ ದಾಳಿಯಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಎನ್‌ಸಿಪಿಯನ್ನು ಒಳಗೊಂಡಂತೆ 20 ವಿಪಕ್ಷಗಳೂ ಒಗ್ಗೂಡಿ ಕೆಲಸ ಮಾಡಲಿವೆ” ಎಂದಿದೆ.

Sanket
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಿಚಾಂಗ್ ಚಂಡಮಾರುತ: ₹5,060 ಕೋಟಿ ಪರಿಹಾರಕ್ಕೆ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯ ನಡುವೆ ಮುಖ್ಯಮಂತ್ರಿ ಎಂ ಕೆ...

ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆಯ ಹೊಣೆ ಹೊತ್ತ ಗೋಲ್ಡಿ ಬ್ರಾರ್ ಗ್ಯಾಂಗ್; ರಾಜಸ್ಥಾನ ಬಂದ್‌ಗೆ ಕರೆ

ಬಲಪಂಥೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖ್‌ದೇವ್ ಸಿಂಗ್ ಗೊಗಮೆಡಿಯನ್ನು ಭೀಕರವಾಗಿ...

ತೆಲಂಗಾಣ: ಎಬಿವಿಪಿಯಿಂದ ಫೈರ್ ಬ್ರಾಂಡ್ ನಾಯಕನವರೆಗೆ; ರೇವಂತ್ ರೆಡ್ಡಿ ನಡೆದುಬಂದ ಹಾದಿ

ಮುಖ್ಯಮಂತ್ರಿ ಕೆಸಿಆರ್ ಸಭೆಗೆ ಅಡ್ಡಿಪಡಿಸಬಹುದು ಎನ್ನುವ ಕಾರಣಕ್ಕೆ 2018ರ ಡಿಸೆಂಬರ್ ನಾಲ್ಕರಂದು...

ತೆಲಂಗಾಣ ಸಿಎಲ್‌ಪಿ ನಾಯಕನಾಗಿ ರೇವಂತ್ ರೆಡ್ಡಿ ಆಯ್ಕೆ: ಡಿ.7ರಂದು ಸಿಎಂ ಆಗಿ ಪ್ರಮಾಣ ವಚನ

ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್...