ಶಿವಸೇನೆ ಸಂಸ್ಥಾಪಕ ಬಾಳ್‌ ಠಾಕ್ರೆಗೆ ಭಾರತ ರತ್ನ ನೀಡಿ; ಸಂಜಯ್ ರಾವತ್ ಆಗ್ರಹ

Date:

Advertisements

ಶಿವಸೇನೆ ಸಂಸ್ಥಾಪಕ ಬಾಳ್‌ ಠಾಕ್ರೆ ಅವರಿಗೆ ಭಾರತ ರತ್ನ ನೀಡಬೇಕು ಎಂದು ಶಿವಸೇನೆ (ಯುಬಿಟಿ) ಗುರುವಾರ ಆಗ್ರಹಿಸಿದೆ. ಠಾಕ್ರೆ ಅವರ 99ನೇ ಜಯಂತಿಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಿವಸೇನೆ ನಾಯಕ ಸಂಜಯ್ ರಾವತ್ ಈ ಬೇಡಿಕೆ ಮುಂದಿಟ್ಟಿದ್ದಾರೆ,

“ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಯಾರು ಅರ್ಹರಲ್ಲವೋ ಅವರಿಗೂ ಭಾರತದ ಅತೀ ದೊಡ್ಡ ಪ್ರಶಸ್ತಿಯಾದ ಭಾರತ್ ರತ್ನವನ್ನು ನೀಡಿದ್ದಾರೆ. ಆದರೆ ಭಾರತದಲ್ಲಿ ಹಿಂದುತ್ವದ ಬೀಜವನ್ನು ಬಿತ್ತಿದ ವ್ಯಕ್ತಿಯೂ ಭಾರತ ರತ್ನವನ್ನು ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ದಕ್ಕದ ಸಚಿವ ಸ್ಥಾನ; ಶಿವಸೇನೆ ಶಾಸಕ ರಾಜೀನಾಮೆ

Advertisements

“ಅವರಿಗೆ (ಬಾಳ್ ಠಾಕ್ರೆ) ಈವರೆಗೂ ಭಾರತ ರತ್ನ ಯಾಕೆ ನೀಡಿಲ್ಲ? ‘ಹಿಂದೂ-ಹೃದಯ ಸಾಮ್ರಾಟ್‌’ ಬಾಳ್ ಠಾಕ್ರೆ ಅವರಿಗೆ ಈ ಗೌರವವನ್ನು ಸಲ್ಲಿಸಲೇಬೇಕು. ಇದು ಶಿವಸೇನೆ (ಯುಬಿಟಿ) ಆಗ್ರಹವಾಗಿದೆ” ಎಂದು ತಿಳಿಸಿದ್ದಾರೆ.

“ಇನ್ನೊಂದು ವರ್ಷದಲ್ಲಿ ಠಾಕ್ರೆ ಅವರ ನೂರನೇ ಜನ್ಮದಿನ ಆಚರಿಸಲಾಗುತ್ತದೆ. ಅದಕ್ಕೂ ಮೊದಲು ಅವರಿಗೆ ಭಾರತ ರತ್ನ ನೀಡಬೇಕು. ನೀವು ವೀರ ಸಾವರ್ಕರ್‌ಗೆ ಭಾರತ ರತ್ನವನ್ನು ನೀಡಿಲ್ಲ. ಬಾಲ ಸಾಹೇಬ್‌ಗೆ ನೀವು ಭಾರತ ರತ್ನ ನೀಡಿದರೆ ವೀರ ಸಾವರ್ಕರ್ ಅವರಿಗೆ ಗೌರವ ಸಲ್ಲಿಸಿದಂತೆಯೇ ಆಗುತ್ತದೆ” ಎಂದು ಅಭಿಪ್ರಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X