ಉತ್ತರ ಪ್ರದೇಶ: ಕನ್ವರ್ ಯಾತ್ರೆಯಲ್ಲಿ ಅಂಗಡಿ ಮಾಲೀಕರ ಧರ್ಮ ದಾಖಲಿಸಲು ಸರ್ಕಾರದ ಹೈಟೆಕ್ ತಂತ್ರ

Date:

Advertisements

ಕನ್ವರ್ ಯಾತ್ರೆ ನಡೆಯುವ ಮಾರ್ಗದ ಬದಿಯ ಎಲ್ಲ ಅಂಗಡಿ ಮತ್ತು ಡಾಬಾ ಮಾಲೀಕರು ತಮ್ಮ ಹೆಸರು ಹಾಗೂ ಆ ಮೂಲಕ ಧರ್ಮವನ್ನು ವಿವರಿಸುವ ಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂಬ ಯೋಗಿ ಆದಿತ್ಯನಾಥ್ ಸರ್ಕಾರದ ಸೂಚನೆಗೆ ಕಳೆದ ವರ್ಷ ಸುಪ್ರೀಂಕೋರ್ಟ್ ತಡೆಯಾಜ್ಞೆ ವಿಧಿಸಿತ್ತು. ಆದ್ದರಿಂದ ಈ ಬಾರಿ ರಾಜ್ಯ ಸರ್ಕಾರ ಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ಪಕ್ಕಕ್ಕಿಟ್ಟು ತಮ್ಮ ಗುರಿ ಸಾಧನೆಗೆ ತಂತ್ರಜ್ಞಾನದ ಮೊರೆ ಹೋಗಿದೆ.

ಉತ್ತರ ಪ್ರದೇಶ ಸರ್ಕಾರದ ಆಹಾರ ಸುರಕ್ಷೆ ಮತ್ತು ಔಷಧ ನಿರ್ವಹಣಾ ಇಲಾಖೆ, ಕನ್ವರ್ ಯಾತ್ರೆಯ ಮಾರ್ಗದ ಎಲ್ಲ ಡಾಬಾ ಮತ್ತು ಅಂಗಡಿಗಳ ಮಾಲೀಕರು ಮಂಡಳಿಯಲ್ಲಿ ನೋಂದಾಯಿಸಿರುವ ತಮ್ಮ ಹೆಸರುಗಳನ್ನು ಮತ್ತು ಅವರಿಗೆ ಹಂಚಿಕೆ ಮಾಡಿರುವ ಕ್ಯೂಆರ್ ಕೋಡ್ ಪ್ರದರ್ಶಿಸಬೇಕು ಎಂದು ಕಡ್ಡಾಯಪಡಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

Advertisements

ಮೇಲ್ನೋಟಕ್ಕೆ ಈ ವಿನೂತನ ಕ್ಯೂಆರ್ ಕೋಡ್ ಗುಣಮಟ್ಟ ನಿಯಂತ್ರಣದ ಉದ್ದೇಶ ಹೊಂದಿದೆ. ಗ್ರಾಹಕರು ಈ ಕ್ಯೂಆರ್ ಕೋಡ್ ಬಳಸಿ ಅಲ್ಲಿನ ಆಹಾರ ಅಥವಾ ಸೇವೆಗಳ ಬಗ್ಗೆ ಪುರಾವೆಗಳ ಚಿತ್ರಗಳನ್ನು ಅಪ್ಲೋಡ್ ಮಾಡಿ ಅಭಿಪ್ರಾಯಗಳನ್ನು ತಿಳಿಸಲು ಅಥವಾ ದೂರುಗಳನ್ನು ದಾಖಲಿಸಲು ಅವಕಾಶವಿರುತ್ತದೆ. ಆದರೆ ಈ ಕ್ಯೂಆರ್ ಕೋಡ್, ಮಾಲೀಕರ ಹೆಸರು ಹಾಗೂ ಅವರ ಧರ್ಮವನ್ನು ಬಹಿರಂಗಪಡಿಸುತ್ತದೆ.

“ಅಂಗಡಿ ಮತ್ತು ಡಾಬಾ ಮಾಲೀಕರ ವಿವರಗಳನ್ನು ತಿಳಿಯಬಯಸುವವರು ಇಲಾಖೆಯ ಡಿಜಿಟಲ್ ಅಪ್ಲಿಕೇಶನ್ ಮೂಲಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಮಾಲೀಕರ ಗುರುತನ್ನು ತಿಳಿದುಕೊಳ್ಳಬಹುದು” ಎಂದು ಇಲಾಖೆಯ ಆದೇಶ ಸ್ಪಷ್ಟಪಡಿಸಿದೆ. “ಅಂಗಡಿ ಮತ್ತು ಹೋಟಲ್ ಮಾಲೀಕರು ನೋಂದಾಯಿತ ಹೆಸರು ಮತ್ತು ಸಂಖ್ಯೆಯನ್ನು ಹೊಂದಿರುತ್ತಾರೆ. ನಾವು ಕ್ಯೂಆರ್ ಕೋಡ್ ನೀಡುವ ಮೂಲಕ ಪ್ರತಿಯೊಬ್ಬರು ತಮ್ಮ ಫಲಕಗಳಲ್ಲಿ ಈ ಕ್ಯೂಆರ್ ಕೋರ್ಡ್ ಮುದ್ರಿಸುವುದನ್ನು ಕಡ್ಡಾಯಪಡಿಸಿದ್ದೇವೆ” ಎಂದು ಇಲಾಖೆ ಮೂಲಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X