ರಾಮ ಪ್ರಾಣ ಪ್ರತಿಷ್ಠಾಪನೆ | ಉತ್ತರ ಭಾರತದಲ್ಲಿ ಮಾಂಸಾಹಾರ ವಿತರಣೆ ಬಂದ್ ಮಾಡಿದ್ದ ಝೊಮ್ಯಾಟೊ

Date:

Advertisements

ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ನಡೆದ ದಿನ, ಝೊಮ್ಯಾಟೊ ಉತ್ತರ ಭಾರತದಲ್ಲಿ ಮಾಂಸಾಹಾರ ವಿತರಣೆಯನ್ನು ಸ್ಥಗಿತಗೊಳಿಸಿತ್ತು.

ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಕೆಲವು ರಾಜ್ಯಗಳಲ್ಲಿ ಮಾಂಸದ ಅಂಗಡಿ ಹಾಗೂ ಮದ್ಯ ಮಾರಾಟ ಬಂದ್ ಮಾಡಲಾಗಿತ್ತು. ಸರ್ಕಾರದ ಆದೇಶದ ಮೇರೆಗೆ ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಮಾಂಸಾಹಾರ ವಿತರಣೆಯನ್ನು ಝೊಮ್ಯಾಟೊ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಝೊಮ್ಯಾಟೊನಿಂದ ಏಕಾಏಕಿ ಮಾಂಸಾಹಾರ ವಸ್ತುಗಳ ಆಯ್ಕೆಗಳ ಪಟ್ಟಿ ಕಾಣೆಯಾಗಿದೆ ಎಂದು ಹಲವರು ಟ್ವೀಟ್ ಮಾಡಿದ್ದಾರೆ. ಝೊಮ್ಯಾಟೊದಲ್ಲಿ ಮಾಂಸಾಹಾರ ಆಯ್ಕೆ ಪಟ್ಟಿ ಇಲ್ಲದ ಬಗ್ಗೆ ನಾನಾ ರೀತಿಯಲ್ಲಿ ಚರ್ಚೆಗಳು ನಡೆದಿವೆ.

Advertisements

ಈ ಬಗ್ಗೆ ಟ್ವೀಟ್ ಮಾಡಿರುವ ಝೊಮ್ಯಾಟೊ, “ಸರ್ಕಾರದ ಸೂಚನೆಯಂತೆ ಉತ್ತರ ಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಾಂಸಾಹಾರ ಆಹಾರ ವಿತರಣೆಯನ್ನು ಸ್ಥಗಿತಗೊಳಿಸಿದ್ದೇವೆ. ಈ ಸ್ಪಷ್ಟೀಕರಣವು ಝೊಮ್ಯಾಟೊ ಬಳಕೆದಾರರಿಗೆ ಸಹಾಯ ಮಾಡುತ್ತದೆ ಎಂದು ಭಾವಿಸುತ್ತೇವೆ” ಎಂದು ಹೇಳಿದೆ.

ಉತ್ತರ ಪ್ರದೇಶದ ನ್ಯಾಷನಲ್ ರೆಸ್ಟೊರೆಂಟ್ ಅಸೋಸಿಯೇಶನ್ ಆಫ್ ಇಂಡಿಯಾದ ಮುಖ್ಯಸ್ಥ ವರುಣ್ ಖೇರಾ ಅವರು, “ಜನವರಿ 22 ರಂದು ರಾಜ್ಯದಾದ್ಯಂತ ರೆಸ್ಟೋರೆಂಟ್‌ಗಳು ಒಟ್ಟಾಗಿ ಸಸ್ಯಾಹಾರ ಆಹಾರವನ್ನು ಮಾತ್ರ ನೀಡಲು ನಿರ್ಧರಿಸಿದ್ದವು. ಸರ್ಕಾರದ ಆದೇಶವನ್ನು ಗೌರವಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ಹೇಳಿದರು.

“ಭಾನುವಾರದಂದು ಅಂಗಡಿಗಳನ್ನು ಮುಚ್ಚಲು ಸರ್ಕಾರ ಹೇಳಿಲ್ಲ. ಸರ್ಕಾರದ ಆದೇಶವು ಸೋಮವಾರ ಮಾತ್ರ ಅಂಗಡಿ ಮುಚ್ಚಲು ತಿಳಿಸಿತ್ತು. ಅನೇಕ ಜನರು ಈಗಾಗಲೇ ಈ ಸಂದರ್ಭವನ್ನು ಆಚರಿಸುತ್ತಿರುವುದರಿಂದ, ಎಲ್ಲ ಸಂಭ್ರಮದ ನಡುವೆ ಮಾಂಸ ಮಾರಾಟ ಮಾಡುವುದು ಅನುಚಿತವೆಂದು ಭಾವಿಸಿ, ಸ್ವಯಂಪ್ರೇರಣೆಯಿಂದ ಅಂಗಡಿಗಳನ್ನು ಮುಚ್ಚಿದ್ದೆವು” ಎಂದು ಗಾಜಿಯಾಬಾದ್‌ನ ಮಾಂಸದ ಅಂಗಡಿಯ ಮಾಲೀಕ ಮೊಹಮ್ಮದ್ ಎಹ್ಸಾನುಲ್ಲಾ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದೀರ್ಘಕಾಲದ ಪ್ರಕರಣ: ರಾಜ್ಯದಲ್ಲಿ 200 ಮಂದಿ ಆರೋಪಿಗಳ ಬಂಧನ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭಕ್ಕೆ ಅನುಗುಣವಾಗಿ ಜನವರಿ 22 ರಂದು ಸಂಜೆ 4 ಗಂಟೆಯವರೆಗೆ ಮಾಂಸದ ಅಂಗಡಿಗಳು ಮತ್ತು ಕಸಾಯಿಖಾನೆಗಳನ್ನು ಮುಚ್ಚುವುದಾಗಿ ಘೋಷಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X