ತನ್ನ ಮಹಿಳಾ ಉದ್ಯೋಗಿಗಳಿಗೆ ‘ಮುಟ್ಟಿನ ರಜೆ’ ಘೋಷಿಸಿದ ಸಿಕ್ಕಿಂ ಹೈಕೋರ್ಟ್

Date:

Advertisements

ಸಿಕ್ಕಿಂ ಹೈಕೋರ್ಟ್ ತನ್ನ ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆ ಪಾಲಿಸಿಯನ್ನು ಪರಿಚಯಿಸಿದ್ದು ಮುಟ್ಟಿನ ರಜೆ ಘೋಷಿಸಿದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮೇ 27ರಂದು ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಸಿಕ್ಕಿಂ ಹೈಕೋರ್ಟ್ ರಿಜಿಸ್ಟ್ರಿ ಮಹಿಳಾ ಉದ್ಯೋಗಿಗಳು ಒಂದು ತಿಂಗಳಲ್ಲಿ ‘2-3 ದಿನಗಳ ಮುಟ್ಟಿನ ರಜೆ’ ಪಡೆಯಬಹುದು ಎಂದು ಹೇಳಿದೆ.

ಆದರೆ ಹೈಕೋರ್ಟ್‌ನ ವೈದ್ಯಕೀಯ ಅಧಿಕಾರಿಯ ಪೂರ್ವ ಶಿಫಾರಸಿನ ಮೇರೆಗೆ ಮಾತ್ರ ಈ ರಜೆಗಳನ್ನು ಪಡೆಯಲು ಅವಕಾಶವಿದೆ ಎಂದು ಹೇಳಿದೆ. ‘ಈ ರಜೆಯನ್ನು ಉದ್ಯೋಗಿಯ ಒಟ್ಟಾರೆ ರಜೆಯಲ್ಲಿ ಸೇರಿಸಿ ಲೆಕ್ಕಾಚಾರ ಮಾಡಲಾಗುವುದಿಲ್ಲ’ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ?  ಈ ದಿನ ಸಂಪಾದಕೀಯ | ಮುಟ್ಟು ಅಂಗವೈಕಲ್ಯವಲ್ಲ; ಸ್ಮೃತಿ ಇರಾನಿ ಹೇಳಿಕೆ ಯಾರನ್ನು ಮೆಚ್ಚಿಸಲು?

Advertisements

ದೇಶದ ಅತ್ಯಂತ ಚಿಕ್ಕ ಹೈಕೋರ್ಟ್ ಸಿಕ್ಕಿಂ ಹೈಕೋರ್ಟ್ ಆಗಿದ್ದು ಮೂರು ನ್ಯಾಯಾಧೀಶರನ್ನು ಈ ಹೈಕೋರ್ಟ್ ಹೊಂದಿದೆ. ಹೈಕೋರ್ಟ್ ವೆಬ್‌ಸೈಟ್ ಪ್ರಕಾರ, ಒಬ್ಬ ಮಹಿಳಾ ಅಧಿಕಾರಿ ಸೇರಿದಂತೆ ನೋಂದಾವಣೆಯಲ್ಲಿ ಕೇವಲ 9 ಅಧಿಕಾರಿಗಳು ಇದ್ದಾರೆ.

ಮುಟ್ಟಿನ ರಜೆ ಪಾಲಿಸಿಯನ್ನು ಪರಿಚಯಿಸಿದ ದೇಶದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಯನ್ನು ಸಿಕ್ಕಿಂ ಹೈಕೋರ್ಟ್ ಪಡೆದುಕೊಂಡಿದೆ. ಪ್ರಸ್ತುತ, ಮುಟ್ಟಿನ ರಜೆಗೆ ಯಾವುದೇ ರಾಷ್ಟ್ರೀಯ ನೀತಿ ಅಥವಾ ಕಾನೂನು ಇಲ್ಲ.

ದೇಶದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಘೋಷಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಫೆಬ್ರವರಿ 2023ರಲ್ಲಿ ನಿರಾಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಅರ್ಜಿದಾರರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಈ ಅರ್ಜಿಯನ್ನು ಸಲ್ಲಿಸಲು ಶಿಫಾರಸು ಮಾಡಿದೆ.

ಇದನ್ನು ಓದಿದ್ದೀರಾ?  ಮುಟ್ಟಿನ ರಜೆ | ಮಹಿಳಾ ಸಮಸ್ಯೆಗಳ ಕುರಿತ ವಿ’ಸ್ಮೃತಿ’ಗೆ ಕೊನೆಯೆಲ್ಲಿ?

ಮುಟ್ಟಿನ ರಜೆ ವಿರೋಧಿಸಿದ್ದ ಸ್ಮೃತಿ ಇರಾನಿ

ಇನ್ನು ಡಿಸೆಂಬರ್ 2023 ರಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಈ ಮುಟ್ಟಿನ ರಜೆ ಪಾಲಿಸಿಯನ್ನು ವಿರೋಧಿಸಿದ್ದರು. “ಮುಟ್ಟು ಒಂದು ಅಂಗವೈಕಲ್ಯವಲ್ಲ ಎಂದು ನಾನು ನಂಬುತ್ತೇನೆ” ಎಂದು ಇರಾನಿ ಹೇಳಿದ್ದರು. ಈ ಮೂಲಕ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಅದೇ ತಿಂಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಟ್ಟಿನ ನೈರ್ಮಲ್ಯದ ಕರಡು ನೀತಿಯನ್ನು ರೂಪಿಸಿದೆ. ಈ ಪಾಲಿಸಿ ಮಹಿಳೆಯರಿಗೆ ಯಾವುದೇ ತಾರತಮ್ಯವಾಗದಂತೆ ಮನೆಯಿಂದ ಕೆಲಸ ಅಥವಾ ಬೆಂಬಲ ರಜೆಗಳು ಲಭ್ಯವಿರಬೇಕು ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X