ಅಮೃತ್‌ಪಾಲ್‌ ಆಪ್ತರ ಬಂಧನಕ್ಕೆ ಬ್ರಿಟಿಷ್‌ ಸಂಸದ ಮೃದು ಧೋರಣೆ; ಸಿಂಘ್ವಿ ಖಂಡನೆ

Date:

  • ಅಮೃತ್‌ಪಾಲ್‌ ಸಿಂಗ್‌ನ 112 ಬೆಂಬಲಿಗರ ಬಂಧನ
  • ಪೊಲೀಸರಿಂದ ತಲೆಮರೆಸಿಕೊಂಡಿರುವ ಅಮೃತ್‌ಪಾಲ್

ಪಂಜಾಬ್‌ನಲ್ಲಿ ಸಿಖ್‌ ಮೂಲಭೂತವಾದಿ ಮತ್ತು ಧರ್ಮ ಪ್ರಚಾರಕ ಅಮೃತ್‌ಪಾಲ್‌ ಸಿಂಗ್‌ ಆಪ್ತರ ಬಂಧನದ ಬಗ್ಗೆ ಬ್ರಿಟಿಷ್‌ ಸಂಸತ್‌ನ ಲೇಬರ್‌ ಪಕ್ಷದ ಸಿಖ್‌ ಸಂಸದ ತನ್‌ಮನ್ಜೀತ್‌ ಸಿಂಗ್‌ ದೇಸಾಯಿ ಭಾನುವಾರ (ಮಾರ್ಚ್ 19) ಮೃದು ಧೋರಣೆ ತಾಳಿದ್ದಾರೆ. ಇದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಭಾರತದ ಪಂಜಾಬ್‌ ರಾಜ್ಯದಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಂಡಿರುವುದು, ಖಲಿಸ್ತಾನ್‌ ಸಂಬಂಧಿತ ಬಂಧನಗಳು, ಗುಂಪು ಸೇರದಂತೆ ವಿಧಿಸಿರುವ ನಿರ್ಬಂಧಗಳಂತಹ ಕಳವಳಕಾರಿ ವರದಿಗಳು ಬರುತ್ತಿವೆ. ಈ ಉದ್ವಿಗ್ನ ಪರಿಸ್ಥಿತಿ ಶೀಘ್ರ ಕೊನೆಗೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಸಿಖ್ ಸಮುದಾಯದ ಬ್ರಿಟಿಷ್‌ ಸಂಸದನ ಈ ಹೇಳಿಕೆಯನ್ನು ಕಾಂಗ್ರೆಸ್‌ ವಕ್ತಾರ ಹಾಗೂ ಹಿರಿಯ ನ್ಯಾಯವಾದಿ ಅಭಿಷೇಕ್‌ ಮನು ಸಿಂಘ್ವಿ ಖಂಡಿಸಿದ್ದಾರೆ.

“ಖಲಿಸ್ತಾನಿಗಳ ಪರವಾದ ಬ್ರಿಟಿಷ್‌ ಸಂಸದನ ಈ ಮಾತುಗಳಿಂದ ಅವರಿಗೆ ಹೆಚ್ಚು ಮತಗಳು ದೊರೆಯುವುದಿಲ್ಲ. ಈ ಮೂಲಕ ಅವರು ಇಂಗ್ಲೆಂಡ್‌ನಲ್ಲಿ ಹೊಸ ಖಲಿಸ್ತಾನ್ ರೂಪಿಸಲು ಹೊರಟಿದಿದ್ದಾರೆ? ನೀವು ಇಂಗ್ಲೆಂಡ್‌ನಲ್ಲಿ ಖಾಲಿಸ್ತಾನಿಗಳ ಪರ ಭಾವನೆಗಳನ್ನು ಪೋಷಿಸಲು ಮುಂದಾಗಿದ್ದೀರಿ” ಎಂದು ಅಣಕವಾಡಿದ್ದಾರೆ.

ಪಂಜಾಬ್‌ನಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿ, ಪೊಲೀಸರು ಕೈಗೊಂಡ ಕಾರ್ಯಾಚರಣೆಯಲ್ಲಿ ಅಮೃತ್‌ಪಾಲ್‌ ಸಿಂಗ್‌ನ 112 ಬೆಂಬಲಿಗರನ್ನು ಭಾನುವಾರ (ಮಾರ್ಚ್‌ 19) ತಡರಾತ್ರಿ ಬಂಧಿಸಿದ್ದಾರೆ. ಆ ನಂತರದಲ್ಲಿ ಬ್ರಿಟಿಷ್‌ ಸಂಸದ ಈ ಟ್ವೀಟ್‌ ಮಾಡಿದ್ದಾರೆ.

ಅಮೃತ್‌ಪಾಲ್‌ ಸಿಂಗ್‌ ಇನ್ನೂ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 45 ದಿನಗಳ ನಂತರ ಈಗೇಕೆ ನೋಟಿಸ್? ಕೇಂದ್ರದ ನಡೆಗೆ ಕಾಂಗ್ರೆಸ್ ಆಕ್ರೋಶ

ಇತ್ತೀಚಿನ ತಿಂಗಳುಗಳಲ್ಲಿ ಸಿಖ್ಖರಿಗಾಗಿ ಪ್ರತ್ಯೇಕ ರಾಜ್ಯ ಖಲಿಸ್ತಾನ ರಚನೆಗೆ ಸಿಖ್‌ ಮೂಲಭೂತವಾದಿ ಅಮೃತ್‌ಪಾಲ್‌ ಸಿಂಗ್‌ ತನ್ನ ಬೆಂಬಲಿಗರ ನೇತೃತ್ವದಲ್ಲಿ ಪಂಜಾಬ್‌ನಲ್ಲಿ ಚಳವಳಿ ಆರಂಭಿಸಿದ್ದಾನೆ.

ಪ್ರತ್ಯೇಕತಾವಾದಿ ಅಂಶಗಳ ಆಧಾರದಲ್ಲಿ ಪೊಲೀಸರು ಅಮೃತ್‌ಪಾಲ್‌ ಸಿಂಗ್‌ ಪರ ಬೆಂಬಲಿಗರ ಬಂಧಿಸಿದ ನಂತರ ಇಂಗ್ಲೆಂಡ್‌ನಲ್ಲಿಯ ಖಲಿಸ್ತಾನಿ ಪರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಕೆಲವರು ಲಂಡನ್‌ನಲ್ಲಿ ಭಾರತದ ರಾಷ್ಟ್ರಧ್ವಜವನ್ನು ಕೆಳಗೆ ಎಳೆದರು. ಇದು ಮತ್ತಷ್ಟು ವಿವಾದಕ್ಕೆ ಕಾರಣವಾಯಿತು.

Suprabha
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಿಚಾಂಗ್ ಚಂಡಮಾರುತ: ₹5,060 ಕೋಟಿ ಪರಿಹಾರಕ್ಕೆ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯ ನಡುವೆ ಮುಖ್ಯಮಂತ್ರಿ ಎಂ ಕೆ...

ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆಯ ಹೊಣೆ ಹೊತ್ತ ಗೋಲ್ಡಿ ಬ್ರಾರ್ ಗ್ಯಾಂಗ್; ರಾಜಸ್ಥಾನ ಬಂದ್‌ಗೆ ಕರೆ

ಬಲಪಂಥೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖ್‌ದೇವ್ ಸಿಂಗ್ ಗೊಗಮೆಡಿಯನ್ನು ಭೀಕರವಾಗಿ...

ತೆಲಂಗಾಣ: ಎಬಿವಿಪಿಯಿಂದ ಫೈರ್ ಬ್ರಾಂಡ್ ನಾಯಕನವರೆಗೆ; ರೇವಂತ್ ರೆಡ್ಡಿ ನಡೆದುಬಂದ ಹಾದಿ

ಮುಖ್ಯಮಂತ್ರಿ ಕೆಸಿಆರ್ ಸಭೆಗೆ ಅಡ್ಡಿಪಡಿಸಬಹುದು ಎನ್ನುವ ಕಾರಣಕ್ಕೆ 2018ರ ಡಿಸೆಂಬರ್ ನಾಲ್ಕರಂದು...

ತೆಲಂಗಾಣ ಸಿಎಲ್‌ಪಿ ನಾಯಕನಾಗಿ ರೇವಂತ್ ರೆಡ್ಡಿ ಆಯ್ಕೆ: ಡಿ.7ರಂದು ಸಿಎಂ ಆಗಿ ಪ್ರಮಾಣ ವಚನ

ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್...