‘ತಪ್ಪಾಗಿದ್ದರೆ ಕ್ಷಮೆ ಇರಲಿ’; ಸಿಜೆಐ ಆಗಿ ಅಂತಿಮ ಭಾಷಣದಲ್ಲಿ ಕ್ಷಮೆ ಕೋರಿದ ಚಂದ್ರಚೂಡ್

Date:

Advertisements

“ನಾಳೆಯಿಂದ ನನಗೆ ನ್ಯಾಯ ನೀಡಲು ಸಾಧ್ಯವಾಗುವುದಿಲ್ಲ. ಆದರೆ ನಾನು ನನ್ನ ಸೇವೆಯಿಂದ ತೃಪ್ತನಾಗಿದ್ದೇನೆ” ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಚಂದ್ರಚೂಡ್‌ ಅವರ ಅಧಿಕಾರವಾಧಿಯ ಅಂತಿಮ ದಿನ ‘ಶುಕ್ರವಾರ’ ಅವರು ವಿಧ್ಯುಕ್ತ ಪೀಠದಲ್ಲಿ ಮಾತನಾಡಿದರು. “ನಾನು ಜೀವನದ ಬಗ್ಗೆ ತುಂಬಾ ಕಲಿತಿದ್ದೇನೆ. ನ್ಯಾಯಾಲಯದಲ್ಲಿ ನಾನು ಯಾರಿಗಾದರೂ ನೋವುಂಟು ಮಾಡಿದ್ದರೆ, ದಯವಿಟ್ಟು ನನ್ನನ್ನು ಕ್ಷಮಿಸಿ. ನನ್ನಿಂದ ತಪ್ಪಾಗಿದ್ದರೆ, ಆ ಎಲ್ಲ ತಪ್ಪುಗಳಿಗೂ ಕ್ಷಮೆ ಇರಲಿ” ಎಂದು ಹೇಳಿದ್ದಾರೆ.

“ನ್ಯಾಯಾಲಯದ ಸಿಬ್ಬಂದಿಗಳು ವಿಧ್ಯುಕ್ತ ಪೀಠವನ್ನು ಯಾವಾಗ ಕೊನೆಗೊಳಿಸಬೇಕು ಎಂದು ಗುರುವಾರ ನನ್ನನ್ನು ಕೇಳಿದರು. ನಾನು ಸಾಧ್ಯವಾದಷ್ಟು ಕೆಲಸ ಮಾಡುತ್ತೇನೆ ಎಂದಿದ್ದೆ. ಕೊನೆಯ ಸಮಯದವರೆಗೆ ನ್ಯಾಯ ಸಲ್ಲಿಸುವ ಅವಕಾಶವನ್ನು ನಾನು ಕೊಳೆದುಕೊಳ್ಳಲಾರೆ” ಎಂದಿದ್ದಾರೆ.

Advertisements

ನಾವು ಮಾಡುವ ಕೆಲಸವು ಪ್ರಕರಣಗಳನ್ನು ಇತ್ಯರ್ಥಪಡಿಸಬಹುದು ಅಥವಾ ಮುರಿಯಬಹುದು” ಎಂದು ಅವರು ಹೇಳಿದರು.

2022ರ ನವೆಂಬರ್ 9ರಂದು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡಿದ್ದ ಡಿ.ವೈ ಚಂದ್ರಚೂಡ್ ಅವರು ತಮ್ಮ ಎರಡು ವರ್ಷಗಳ ಅಧಿಕಾರವಧಿಯ ಬಳಿಕ, ಶುಕ್ರವಾರ ತಮ್ಮ ಹುದ್ದೆಗೆ ವಿದಾಯ ಹೇಳಿದ್ದಾರೆ.

ಅವರ ಉತ್ತರಾಧಿಕಾರಿಯಾಗಿ ಸಂಜೀವ್ ಖನ್ನಾ ಆಯ್ಕೆಯಾಗಿದ್ದಾರೆ. ಅವರು ನವೆಂಬರ್ 11ರಂದು ಭಾರತದ 51ನೇ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X