ಸ್ಪೇನ್ ಪ್ರವಾಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್; 10 ಲಕ್ಷ ರೂ. ಪರಿಹಾರ

Date:

Advertisements

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಸ್ಪ್ಯಾನಿಷ್ ಪ್ರವಾಸಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ನಡೆದ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಪತಿಗೆ ಜಾರ್ಖಂಡ್‌ ಪೊಲೀಸರು ಸೋಮವಾರ ಹತ್ತು ಲಕ್ಷ ರೂಪಾಯಿ ಚೆಕ್ ಅನ್ನು ಪರಿಹಾರವಾಗಿ ನೀಡಿದ್ದಾರೆ.

ಜಾರ್ಖಂಡ್‌ನ ರಾಜಧಾನಿ ರಾಂಚಿಯಿಂದ ಸುಮಾರು 300 ಕಿಮೀ ದೂರದಲ್ಲಿರುವ ಹನ್ಸ್‌ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಮಹತ್‌ನಲ್ಲಿ ಶುಕ್ರವಾರ ಸ್ಪೇನ್‌ನ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಈ ಹಿಂದೆ ಪೊಲೀಸರು ತಿಳಿಸಿದ್ದಾರೆ.

“ನಾವು ಶೀಘ್ರವಾಗಿ ತನಿಖೆಯನ್ನು ಮಾಡಿದ್ದೇವೆ. ಸಂತ್ರಸ್ತೆ ಮತ್ತು ಆಕೆಯ ಪತಿಗೆ ನಮ್ಮ ಜಿಲ್ಲಾ ಆಡಳಿತದಿಂದ ಎಲ್ಲಾ ಅಗತ್ಯ ಸಹಾಯವನ್ನು ಮಾಡಿದ್ದೇವೆ. ಸಂತ್ರಸ್ತರಿಗೆ ನೀಡಲಾಗುವ ಪರಿಹಾರ ಧನ ಯೋಜನೆಯಡಿಯಲ್ಲಿ ನಾವು ಸಂತ್ರಸ್ತರಿಗೆ ಹತ್ತು ಲಕ್ಷ ರೂಪಾಯಿ ನೀಡಿದ್ದೇವೆ. ನಾವು ಶೀಘ್ರವೇ ವಿಚಾರಣೆಯನ್ನು ಪೂರ್ಣಗೊಳಿಸಿ, ತಪ್ಪಿತಸ್ಥರಿಗೆ ಶಿಕ್ಷೆ ದೊರೆಯುವಂತೆ ಮಾಡುತ್ತೇವೆ,” ಎಂದು ಜಿಲ್ಲಾಧಿಕಾರಿ ಆಂಜನೇಯುಲು ದೊಡ್ಡೆ ತಿಳಿಸಿದ್ದಾರೆ.

Advertisements

ಸುಮಾರು 28 ವರ್ಷದ ಮಹಿಳೆ ಮತ್ತು ಆಕೆಯ 64 ವರ್ಷದ ಪತಿ ಎರಡು ಬೈಕ್‌ನಲ್ಲಿ ಬಾಂಗ್ಲಾದೇಶದಿಂದ ದುಮ್ಕಾ ತಲುಪಿ ಬಿಹಾರ ಮೂಲಕ ನೇಪಾಳಕ್ಕೆ ತೆರಳುತ್ತಿದ್ದರು. ಮಾರ್ಗ ಮಧ್ಯದಲ್ಲಿ ಟೆಂಟ್‌ನಲ್ಲಿ ನೆಲೆಸಿದ್ದು, ಈ ವೇಳೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಅತೀ ಶೀಘ್ರವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರಿಗೆ ಅತ್ಯಾಚಾರ ಸಂತ್ರಸ್ತೆಯ ಪತಿ ಧನ್ಯವಾದ ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಈ ಪ್ರಕರಣದಲ್ಲಿ ಒಟ್ಟು ಏಳು ಮಂದಿ ಭಾಗಿಯಾಗಿದ್ದು, ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಇನ್ನು ಪೊಲೀಸರು ನವದೆಹಲಿಯಲ್ಲಿರುವ ಸ್ಪೇನ್ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದು ಎಲ್ಲ ಬೆಳವಣಿಗೆಯ ಮಾಹಿತಿಯನ್ನು ರಾಯಭಾರ ಕಚೇರಿಗೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಈ ದಂಪತಿಯನ್ನು ಸ್ಪೇನ್‌ಗೆ ಯಾವಾಗ ಕಳುಹಿಸಲಾಗುವುದು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪೊಲೀಸರು ಪ್ರಸ್ತುತ ಕಾನೂನು ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

“ಶುಕ್ರವಾರ ರಾತ್ರಿ ಸುಮಾರು 11 ಗಂಟೆಗೆ ಹಂಸಡೀಹಾ ಠಾಣೆಯ ಪೊಲೀಸ್ ಗಸ್ತು ತಂಡವು ರಸ್ತೆ ಬದಿಯಲ್ಲಿದ್ದ ಈ ಸ್ಪೇನ್ ದಂಪತಿಯನ್ನು ನೋಡಿದ್ದಾರೆ. ಈ ದಂಪತಿ ಸ್ಪ್ಯಾನಿಷ್ ಭಾಷೆ ಮಾತ್ರ ಮಾತನಾಡುತ್ತಿದ್ದು, ಆರಂಭದಲ್ಲಿ ಇವರು ಏನು ಹೇಳುತ್ತಿದ್ದಾರೆ ಎಂದು ಅರ್ಥವಾಗಲಿಲ್ಲ. ಪೊಲೀಸರು ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅತ್ಯಾಚಾರ ನಡೆದಿರುವುದನ್ನು ದಂಪತಿಯು ವೈದ್ಯರಿಗೆ ತಿಳಿಸಿದ್ದಾರೆ,” ಎಂದು ಎಸ್‌ಪಿ ಪೀತಾಂಬರ ಸಿಂಗ್ ಮಾಹಿತಿ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X