ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎಂ ಕೆ ಸ್ಟಾಲಿನ್ ಘೋಷಣೆ

Date:

Advertisements

ಹೊಸೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರವನ್ನಾಗಿ ಮಾಡುವ ಪ್ರಯತ್ನದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಇಂದು ವಿಧಾನಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. 2 ಸಾವಿರ ಎಕರೆ ಪ್ರದೇಶದಲ್ಲಿ ಹೊಸೂರಿನಲ್ಲಿ ವಾರ್ಷಿಕ ಮೂರು ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಘೋಷಿಸಿದರು.

ವಿಧಾನಸಭೆಯಲ್ಲಿ ನಿಯಮಾವಳಿ 110ರ ಅಡಿಯಲ್ಲಿ ಘೋಷಿಸಿದ ಸ್ಟಾಲಿನ್, ಇತ್ತೀಚಿನ ವರ್ಷಗಳಲ್ಲಿ ಹೊಸೂರು ಎಲೆಕ್ಟ್ರಾನಿಕ್ಸ್ ಹಾಗೂ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ಹೆಚ್ಚು ಹೂಡಿಕೆಗಳನ್ನು ಆಕರ್ಷಿಸುತ್ತಾ ಬಂದಿದೆ. ಆದ ಕಾರಣ ಹೊಸೂರು ಸುತ್ತಮುತ್ತಲು ಹಲವು ತಯಾರಿಕಾ ಕೇಂದ್ರಗಳು ಹಾಗೂ ಕೈಗಾರಿಕಾ ಘಟಕಗಳನ್ನು ಹೆಚ್ಚಿಸುವ ಅಗತ್ಯವನ್ನು ಇದೇ ಸಂದರ್ಭದಲ್ಲಿ ಒತ್ತಿ ಹೇಳಿದರು.

ರಾಜ್ಯ ಸರ್ಕಾರವು ಹೊಸೂರಿನಲ್ಲಿ ಆಧುನಿಕ ಮೂಲಸೌಕರ್ಯ ನಿರ್ಮಿಸಲು ಹಲವು ದೂರದೃಷ್ಟಿಯುಳ್ಳ ಕ್ರಮಗಳನ್ನು ಕೈಗೊಳ್ಳಲಿದೆ. ಹೊಸೂರಿಗಾಗಿ ನೂತನ ಕ್ರಿಯಾ ಯೋಜನೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಸ್ಟಾಲಿನ್‌ ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ

ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದರಿಂದ ಕೃಷ್ಣಗಿರಿ ಹಾಗೂ ಧರ್ಮಪುರಿ ಪ್ರದೇಶಗಳಲ್ಲಿ ಆರ್ಥಿಕ ಸಾಮಾಜಿಕ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದು ಸರ್ಕಾರ ಭಾವಿಸಿದೆ ಎಂದು ಸ್ಟಾಲಿನ್‌ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೈಗಾರಿಕಾ ಸಚಿವ ಟಿಆರ್‌ಬಿ ರಾಜ, “ನೂತನ ವಿಮಾನ ನಿಲ್ದಾಣವು ಬೆಂಗಳೂರಿನ ಜೊತೆಗೆ ಅವಳಿ ನಗರ ಪರಿಸರ ವ್ಯವಸ್ಥೆಗೆ ಉತ್ತೇಜನ ಹೊಂದಲಿದೆ. ಕರ್ನಾಟಕ ಹಾಗೂ ತಮಿಳುನಾಡು ಅಭಿವೃದ್ಧಿ ಹೊಂದುತ್ತದೆ. ಈ ಯೋಜನೆಯು ಸಂಪರ್ಕ ವೃದ್ಧಿ ಹಾಗೂ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ. ಹೊಸೂರಿನ ಜೊತೆ ನೆರೆಯ ಜಿಲ್ಲೆಗಳಾದ ಧರ್ಮಪುರಿ ಹಾಗೂ ಸೇಲಂ ಜಿಲ್ಲೆಗಳಿಗೂ ಅನುಕೂಲವಾಗಲಿದೆ. ಹಾಗೆಯೇ ಬೆಂಗಳೂರಿನ ಹಲವು ಭಾಗಗಳಿಗೆ ಪ್ರಯೋಜನವಾಗಲಿದೆ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ | ತನ್ನ 6 ವರ್ಷದ ಮಗನನ್ನು ಎತ್ತಿ ನೆಲಕ್ಕೆ ಎಸೆದು ಕೊಂದ ತಂದೆ: ಪರಾರಿ

ಹೋಟೆಲ್‌ ಕೋಣೆಯಲ್ಲಿ ತನ್ನ 6 ವರ್ಷದ ಮಗನನ್ನು ಥಳಿಸಿ ಕೊಂದು ತಂದೆ...

ಬಿಜೆಪಿಗೆ ವೇದಾಂತ ನೀಡಿದ ದೇಣಿಗೆ ನಾಲ್ಕು ಪಟ್ಟು ಹೆಚ್ಚಳ: 97 ಕೋಟಿ ರೂ. ನೀಡಿದ ಗಣಿಗಾರಿಕೆ ಸಂಸ್ಥೆ

ಬಿಲಿಯನೇರ್ ಅನಿಲ್ ಅಗರ್ವಾಲ್ ಅವರ ಗಣಿಗಾರಿಕೆ ಸಂಸ್ಥೆ ವೇದಾಂತ ಲಿಮಿಟೆಡ್, ಆಡಳಿತಾರೂಢ...

ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ‘ಕೈಗೊಂಬೆ’ಯಾಗಿದೆ: ಕಪಿಲ್ ಸಿಬಲ್

ಚುನಾವಣಾ ಆಯೋಗವು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೈಯಲ್ಲಿ 'ಕೈಗೊಂಬೆ'ಯಾಗಿದೆ...

ದೆಹಲಿ ವಿವಿ ವಿದ್ಯಾರ್ಥಿನಿ ನಾಪತ್ತೆ; ಪ್ರಶ್ನೆಯ ಕೇಂದ್ರವಾಗಿವೆ ಪ್ರಮುಖ ಬ್ರಿಡ್ಜ್‌ನಲ್ಲಿ ಸಿಸಿ ಕ್ಯಾಮೆರಾಗಳು

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಸ್ನೇಹಾ ದೇಬ್ನಾಥ್ (19 ವರ್ಷ) ನಾಪತ್ತೆಯಾಗಿದ್ದಾರೆ. ಅವರು...

Download Eedina App Android / iOS

X