ಮಹಾ ಕುಂಭಮೇಳದಲ್ಲಿ ಕಾಲ್ತುಳಿತ; ಸಾವಿನ ಸಂಖ್ಯೆ 40ಕ್ಕೆ ಏರಿಕೆ

Date:

ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬುಧವಾರ ಉಂಟಾಗಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಸೇರಿದಂತೆ 40 ಮಂದಿ ಮೃತಪಟ್ಟಿರುವ ವರದಿಯಾಗಿದೆ. 60 ಮಂದಿ ಗಾಯಗೊಂಡಿದ್ದು, 25 ಮೃತದೇಹಗಳ ಗುರುತು ಪತ್ತೆಹಚ್ಚಲಾಗಿದೆ ಎಂದು ಕುಂಭಮೇಳದ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ.

- Advertisement -

ಮುಂಜಾನೆ 3ಗಂಟೆಯ ಬ್ರಹ್ಮ ಮುಹೂರ್ತದಲ್ಲಿ ನೀರಿನಲ್ಲಿ ಸ್ನಾನ ಮಾಡಲೆಂದು ಅಖಾಡ ಕ್ಷೇತ್ರದಲ್ಲಿ ಸಾವಿರಾರು ಮಂದಿ ಮಲಗಿದ್ದರು. ಮುಹೂರ್ತದ ಸಮಯವಾಗುತ್ತಿದ್ದಂತೆ ಸಾವಿರಾರು ಸಂಖ್ಯೆಯ ಜನರು ಹಿಂದು ಮುಂದು ನೋಡದೆ ನುಗ್ಗಿದರು. ಬ್ಯಾರಿಕೇಡ್‌ಗಳನ್ನು ನೆಲಕ್ಕುರುಳಿಸಿ ಮಲಗಿದವರನ್ನು ತುಳಿದುಕೊಂಡು ಹೋಗಿದ್ದರಿಂದ ಈ ದುರಂತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ದುರಂತದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಡಿಐಜಿ ವೈಭವ್ ಕೃಷ್ಣ, “ಪ್ರಯಾಗ್‌ರಾಜ್‌ ಕಾಲ್ತುಳಿತದ ಸಹಾಯವಾಣಿ ಸಂಖೆ 1920. ಮಹಾಕುಂಭ ಮೇಳಕ್ಕೆ ಬಂದಿದ್ದ ಕುಟುಂಬದವರು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಇಂದು ಮೌನಿ ಅಮಾವಾಸ್ಯೆಯಾದ್ದರಿಂದ ಮಹಾಕುಂಭ ಮೇಳಕ್ಕೆ ಲಕ್ಷಾಂತರ ಮಂದಿ ಆಗಮಿಸಿದ್ದರು. ಯಾರಿಗೂ ವಿಐಪಿ, ವಿವಿಐಪಿ ವ್ಯವಸ್ಥೆ ಮಾಡಿರಲಿಲ್ಲ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಹಾ ಕುಂಭಮೇಳ ಕಾಲ್ತುಳಿತ | ಕೇಂದ್ರ, ಯೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

“ಮೃತಪಟ್ಟವರ ಪೈಕಿ ಕರ್ನಾಟಕದ ನಾಲ್ವರು, ಅಸ್ಸಾಂನ ಒಬ್ಬರು, ಗುಜರಾತ್‌ನ ಒಬ್ಬರು ಇದ್ದಾರೆ. ಗಾಯಗೊಂಡವರನ್ನು ಅವರ ಸಂಬಂಧಿಕರು ಕರೆದೊಯ್ದಿದ್ದಾರೆ. 36 ಮಂದಿ ಗಾಯಾಳುಗಳು ಸ್ಥಳೀಯ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...