‘ಏಕತಾ ಪ್ರತಿಮೆ’ | 2 ವರ್ಷದಲ್ಲಿ 38 ಪ್ರಾಣಿಗಳು, ಪಕ್ಷಿಗಳು ಸಾವು

Date:

Advertisements

‘ಸ್ಟ್ಯಾಚ್ಯೂ ಆಫ್ ಯೂನಿಟಿ’ (ಏಕತಾ ಪ್ರತಿಮೆ) ಕಾಂಪ್ಲೆಕ್ಸ್‌ನಲ್ಲಿರುವ ಜಂಗಲ್ ಸಫಾರಿ ಎಂದು ಜನಪ್ರಿಯವಾಗಿರುವ ಸರ್ದಾರ್ ಪಟೇಲ್ ಝೂಲಾಜಿಕಲ್ ಪಾರ್ಕ್‌ನಲ್ಲಿ ಇತರ ರಾಜ್ಯಗಳು ಮತ್ತು ವಿದೇಶಗಳಿಂದ ತರಲಾದ 38 ಪ್ರಾಣಿಗಳು ಮತ್ತು ಪಕ್ಷಿಗಳು ಸಾವನ್ನಪ್ಪಿವೆ ಎಂದು ಗುಜರಾತ್ ಸರ್ಕಾರ ವಿಧಾನಸಭೆಯಲ್ಲಿ ಬಹಿರಂಗಪಡಿಸಿದೆ.

ಕಾಂಗ್ರೆಸ್ ಶಾಸಕ ಗುಲಾಬ್ ಸಿಂಗ್ ಚೌಹಾಣ್ ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ರಾಜ್ಯ ಸರ್ಕಾರ, ಪ್ರಾಣಿ-ಪಕ್ಷಿಗಳ ಸಾವಿನ ಬಗ್ಗೆ ಒಪ್ಪಿಕೊಂಡಿದೆ. “ಇತರ ರಾಜ್ಯಗಳು ಮತ್ತು ವಿದೇಶಗಳಿಂದ ಝೂಲಾಜಿಕಲ್ ಪಾರ್ಕ್‌ಗೆ ಸ್ಥಳಾಂತರಗೊಂಡ 295 ಪ್ರಾಣಿಗಳು ಮತ್ತು ಪಕ್ಷಿಗಳಲ್ಲಿ 2023ರ ಡಿಸೆಂಬರ್ 31ರವರೆಗೆ 38 ಸಾವನ್ನಪ್ಪಿವೆ” ಎಂದು ಹೇಳಿದೆ. ಪಾರ್ಕ್‌ ಒಟ್ಟು 940 ಪ್ರಾಣಿ-ಪಕ್ಷಿಗಳಿದ್ದವು.

ಪ್ರಾಣಿಗಳ ಸಾವಿನ ಬಗ್ಗೆ ವಿಧಾನಸಭೆಯಲ್ಲಿ ಉತ್ತರಿಸಿದ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, “ಪಾರ್ಕ್‌ನಲ್ಲಿದ್ದ ಐದು ಅಲ್ಪಕಾಗಳಲ್ಲಿ ಮೂವರು ಸಾವನ್ನಪ್ಪಿದರೆ, ನಾಲ್ಕು ವಾಲಬಿಗಳಲ್ಲಿ ಎರಡು ಸಾವನ್ನಪ್ಪಿವೆ. ನಾಲ್ಕು ಸನ್ ಕೋನರ್‌ಗಳು, ಮೂರು ಹಸಿರು ಕೆನ್ನೆಯ ಕೋನರ್‌ಗಳು, ಏಳು ನೀಲಿ ಫೆಸೆಂಟ್‌ಗಳು, ಮೂರು ಸಿಲ್ವರ್ ಫೆಸೆಂಟ್‌ಗಳು, ಮೂರು ಕೆಂಪು ಕೊಕ್ಕಿನ ಟೌಕನ್‌ಗಳು, ಮೂರು ಥಯಾಮಿನ್ ಜಿಂಕೆಗಳು, ಮೂರು ಅಳಿಲು ಕೋತಿಗಳು ಹಾಗೂ ಒಂದು ಜವುಗು ಮೊಸಳೆ ಸಾವನ್ನಪ್ಪಿವೆ” ಎಂದು ತಿಳಿಸಿದ್ದಾರೆ.

Advertisements

ಹಂಚಿಕೊಂಡಿರುವ ವಿವರಗಳ ಪ್ರಕಾರ ಕಳೆದ ಎರಡು ವರ್ಷಗಳಲ್ಲಿ ಇಂತಹ ವಿದೇಶಿ ಪಕ್ಷಿಗಳು ಮತ್ತು ಪ್ರಾಣಿಗಳಿಗೆ 34 ಲಕ್ಷ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ.

2023ರ ಮಾರ್ಚ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಗುಜರಾತ್ ಸರ್ಕಾರ, 2021ರ ಫೆಬ್ರವರಿ 1ರಿಂದ 2023ರ ಜನವರಿ 31ರವರೆಗೆ 12 ಪ್ರಾಣಿಗಳು ಮತ್ತು ಪಕ್ಷಿಗಳು ಮೃಗಾಲಯದಲ್ಲಿ ಸಾವನ್ನಪ್ಪಿವೆ ಎಂದು ಹೇಳಿತ್ತು. ಇದೀಗ, ವಿಧಾನಸಭೆಯಲ್ಲಿ ನೀಡಿದ ಉತ್ತರದಲ್ಲಿ 38 ಪ್ರಾಣಿ-ಪಕ್ಷಿಗಳು ಸಾವನ್ನಪ್ಪಿವೆ ಎಂದು ಹೇಳಿದೆ. ಅದಾಗ್ಯೂ, ಅಂತಹ ಸಾವುಗಳಿಗೆ ಕಾರಣಗಳನ್ನು ವಿವರಿಸಲಾಗಿಲ್ಲವಾದರೂ, ಕಳೆದ ವರ್ಷ ನೀಡಿದ್ದ ಕಾರಣಗಳಲ್ಲಿ ಉಸಿರಾಟದ ಸಮಸ್ಯೆ ಮತ್ತು ಕಾರ್ಡಿಯೋ-ಪಲ್ಮನರಿ ಅರೆಸ್ಟ್ ಪ್ರಮುಖ ಕಾರಣಗಳೆಂದು ಹೇಳಲಾಗಿತ್ತು.

ಪಕ್ಷಿಗಳು ಮತ್ತು ಪ್ರಾಣಿಗಳ ರಕ್ಷಣೆಯಲ್ಲಿ ಗುಜರಾತ್ ಸರ್ಕಾರ ಅಸಮರ್ಥವಾಗಿದೆ ಎಂದು ಕಾಂಗ್ರೆಸ್ ಶಾಸಕ ಮತ್ತು ಪರಿಸರವಾದಿ ಪಾರ್ಥಿವ್ ಕಥವಾಡಿಯಾ ಆರೋಪಿಸಿದ್ದಾರೆ. “ಮಧ್ಯಪ್ರದೇಶದ ಕುನೊದಲ್ಲಿ ಚಿರತೆಗಳು ಸತ್ತಿವೆ ಮತ್ತು ಈಗ ಗುಜರಾತ್‌ನಲ್ಲಿ ವಿದೇಶದಿಂದ ತಂದ ಪಕ್ಷಿಗಳು ಮತ್ತು ಪ್ರಾಣಿಗಳು ಸಾಯುತ್ತಿವೆ. ಪ್ರಾಣಿಗಳು ಮತ್ತು ಪಕ್ಷಿಗಳಿಗೆ ಸರಿಯಾದ ವಾತಾವರಣವನ್ನು ಒದಗಿಸಲು ಸರ್ಕಾರ ವಿಫಲವಾಗಿದೆ ಎಂಬುದು ವಿಮರ್ಶಾತ್ಮಕ; ಈ ಪ್ರಾಣಿಗಳು ಮತ್ತು ಪಕ್ಷಿಗಳನ್ನು ಜನರ ಹಣದಲ್ಲಿ ತರಲಾಯಿತು; ಅವುಗಳ ಸಾವಿನ ಹೊಣೆಯನ್ನು ಸರಕಾರವೇ ಹೊರಬೇಕು” ಎಂದು ಹೇಳಿದ್ದಾರೆ.

“ಈ ಎಲ್ಲಾ ಪಕ್ಷಿಗಳು ಮತ್ತು ಪ್ರಾಣಿಗಳು ಏಕೆ ಸತ್ತವು ಎಂಬುದನ್ನು ನಿರ್ಧರಿಸಲು ಮರಣೋತ್ತರ ಪರೀಕ್ಷೆಯನ್ನು ನಡೆಸಬೇಕು. ವೈಜ್ಞಾನಿಕ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಸ್ಟ್ಯಾಚ್ಯೂ ಆಫ್ ಯೂನಿಟಿ ಕಾಂಪ್ಲೆಕ್ಸ್‌ನಲ್ಲಿರುವ ಸರ್ದಾರ್ ಪಟೇಲ್ ಝೂಲಾಜಿಕಲ್ ಪಾರ್ಕ್ ಮತ್ತು ಜಿಯೋಡೆಸಿಕ್ ಏವಿಯರಿ ಡೋಮ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು 2020ರ ಅಕ್ಟೋಬರ್ 30 ರಂದು ಉದ್ಘಾಟಿಸಿದರು. ಉದ್ಘಾಟನೆಗೆ ಮುಂಚೆಯೇ, ಝೂಲಾಜಿಕಲ್ ಪಾರ್ಕ್‌ನಲ್ಲಿ ವಿದೇಶದಿಂದ ತಂದ ಪ್ರಾಣಿಗಳು ಸಾವನ್ನಪ್ಪಿದ ಬಗ್ಗೆ ಟೀಕೆಗೆ ಗುರಿಯಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X