ನಮ್ಮ ಬೆನ್ನು ಹತ್ತಿ ಬೇಟೆಯಾಡುವುದನ್ನು ಇನ್ನಾದರೂ ನಿಲ್ಲಿಸಿ: ಪ್ರಧಾನಿ ನಿಂದನೆ ಆರೋಪ ಹೊತ್ತ ಬಾಲೆಯ ತಾಯಿ ಕಳಕಳಿ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ 15 ವರ್ಷದ ಅಪ್ರಾಪ್ತ ಬಾಲಕಿ ಹಾಗೂ ಆಕೆಯ ತಾಯಿ, ನಿರಂತರವಾಗಿ ಬರುತ್ತಿರುವ ಬೆದರಿಕೆ ಮತ್ತು ಕಿರುಕುಳಕ್ಕೆ ಹೆದರಿ ತಮ್ಮ ಮನೆಯನ್ನು ಖಾಲಿ ಮಾಡಿ ತಲೆಮರೆಸಿಕೊಂಡಿದ್ದಾರೆ.

- Advertisement -

ಇತ್ತೀಚೆಗೆ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಈ ಬಾಲಕಿ, ಪ್ರಧಾನಿ ಮೋದಿ ಅವರನ್ನು ನಿಂದಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಉತ್ತರ ಪ್ರದೇಶದ ನೋಯ್ಡಾ ಪೊಲೀಸ್ ಠಾಣೆಯಲ್ಲಿ ‘ಜೀರೋ ಎಫ್‌ಐಆರ್’ ದಾಖಲಿಸಲಾಗಿತ್ತು, ನಂತರ ಅದನ್ನು ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ನಿಂದನೆ ಆರೋಪ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಘರ್ಷಣೆ

ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಾಲಕಿ ಹಾಗೂ ಆಕೆಯ ಕುಟುಂಬದ ಖಾಸಗಿ ವಿವರಗಳು, ಕಾರಿನ ನಂಬರ್ ಹಾಗೂ ಗೃಹ ವಿಳಾಸ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಪ್ರಾರಂಭಿಸಿದವು. ಬಾಲಕಿಯ ಪರ ವಕೀಲರು ನೀಡಿದ ಮಾಹಿತಿಯಂತೆ, “ವಿಳಾಸ ಬಹಿರಂಗವಾದ ನಂತರ ಅಪರಿಚಿತ ವ್ಯಕ್ತಿಗಳು ಮತ್ತು ಕೆಲ ರಾಜಕೀಯ ಬೆಂಬಲಿಗರು ಮನೆಬಾಗಿಲಿಗೆ ಬಂದು ಬೆದರಿಕೆ ಹಾಕಲು ಶುರು ಮಾಡಿದರು. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರತೊಡಗಿದವು”.

ಈ ಕಿರುಕುಳ ಹಾಗೂ ಜೀವಭಯದಿಂದಾಗಿ ಬಾಲಕಿ ಮತ್ತು ಆಕೆಯ ತಾಯಿ ನೋಯ್ಡಾದ ತಮ್ಮ ಮನೆಯನ್ನು ತೊರೆದು, ಈಗಾಗಲೇ ಮೂರು ಬಾರಿ ಬೇರೆ ಬೇರೆ ರಹಸ್ಯ ಸ್ಥಳಗಳಿಗೆ ವಾಸ ಬದಲಾಯಿಸಿದ್ದಾರೆ. ವಿಡಿಯೋ ಹರಿದಾಡಿದ ತಕ್ಷಣವೇ ಬಾಲಕಿ ವಿಡಿಯೋ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಳು. ಆದರೂ ಸಂಘಪರಿವಾರದವರಿಂದ ನಿರಂತರ ಕೊಲೆ ಬೆದರಿಕೆ ಬರುತ್ತಲೇ ಇದೆ.

ಈ ಬಗ್ಗೆ ಮಾತನಾಡಿರುವ ಬಾಲಕಿಯ ತಾಯಿ, “ಪ್ರಧಾನಿಯವರು ನನ್ನ ಮಗಳಿಗೆ ಜೀವದಾನ ನೀಡಿದ್ದಾರೆ. ಆದರೆ ನಮ್ಮ ಬೆನ್ನು ಹತ್ತಿ ಬೇಟೆಯಾಡುವುದನ್ನು ಹಾಗೂ ಕಿರುಕುಳ ನೀಡುವುದನ್ನು ಜನರು ಇನ್ನಾದರೂ ನಿಲ್ಲಿಸಬೇಕು. ನನ್ನ ಮಗಳ ಮೇಲಿರುವ ಎಫ್‌ಐಆರ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಆಕೆ ನೆಮ್ಮದಿಯಿಂದ ಶಿಕ್ಷಣ ಮುಂದುವರಿಸಲು ಅವಕಾಶ ಮಾಡಿಕೊಡಬೇಕು” ಎಂದು ಕಣ್ಣೀರಿಡುತ್ತಾ ವಿನಂತಿಸಿದ್ದಾರೆ.

ಘಟನೆ ನಡೆದ ಸ್ಥಳ ದೆಹಲಿ ವ್ಯಾಪ್ತಿಗೆ ಬರುವುದರಿಂದ ಮತ್ತು ಬಾಲಕಿ ಅಪ್ರಾಪ್ತಳಾಗಿರುವುದರಿಂದ ಆಕೆಯ ವಿರುದ್ಧ ದಂಡನಾತ್ಮಕ ಎಫ್‌ಐಆರ್ ದಾಖಲಿಸದಿರಲು ದೆಹಲಿ ಪೊಲೀಸರು ನಿರ್ಧರಿಸಿದ್ದಾರೆ. ಆದಾಗ್ಯೂ, ಸಾಮಾಜಿಕ ಜಾಲತಾಣಗಳ ಟ್ರೋಲ್ ಹಾಗೂ ಪ್ರತ್ಯಕ್ಷ ಬೆದರಿಕೆಗಳ ಭಯದಿಂದ ಈ ಕುಟುಂಬ ಇನ್ನೂ ತಲೆಮರೆಸಿಕೊಂಡೇ ಕಾಲ ಕಳೆಯಬೇಕಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಜೊತೆ ಮಾತುಕತೆಗೆ ಇರಾನ್‌‌ನ 7 ಷರತ್ತು: ನಿರಾಕರಿಸಿದರೆ ‘ನಿರ್ಣಾಯಕ ಯುದ್ಧ’ದ ಎಚ್ಚರಿಕೆ

ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ-ಇರಾನ್ ನಡುವೆ ಸಂಧಾನ ಮಾತುಕತೆ ಆರಂಭಿಸಲು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...