ವಿಚಾರಣಾಧೀನ ಕೈದಿಗಳ ಬಟ್ಟೆ ಬಿಚ್ಚಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ: ಮುಂಬೈ ನ್ಯಾಯಾಲಯ

Date:

Advertisements

ವಿಚಾರಣಾಧೀನ ಕೈದಿಗಳ ಬಟ್ಟೆ ಬಿಚ್ಚಿ ತಪಾಸಣೆ ನಡೆಸುವುದು ಅವರ ಖಾಸಗಿತನದ ಮೂಲಭೂತ ಹಕ್ಕಿನ ಉಲ್ಲಂಘನೆ ಹಾಗೂ ಅಪಮಾನಕಾರಿ ಎಂದು ಮುಂಬೈ ವಿಶೇಷ ನ್ಯಾಯಾಲಯವೊಂದು ಅಭಿಪ್ರಾಯಪಟ್ಟಿದೆ.

“ವಿಚಾರಣಾಧೀನ ಕೈದಿಯ ವಿರುದ್ಧ ಅಸಂಸದೀಯ ಅಥವಾ ಅಶ್ಲೀಲ ಭಾಷೆ ಬಳಸುವುದೂ ಕೂಡಾ ಅಪಮಾನಕಾರಿ. ಆದ ಕಾರಣ ಅಧೀಕ್ಷಕರು ಹಾಗೂ ಸಂಬಂಧಿತ ಭದ್ರತಾ ಸಿಬ್ಬಂದಿಗೆ ಅಗತ್ಯ ನಿರ್ದೇಶನಗಳನ್ನು ನೀಡಬೇಕಿದೆ” ಎಂದು ವಿಶೇಷ ನ್ಯಾಯಾಧೀಶ ಬಿ ಡಿ ಶೆಲ್ಕೆ ಅಭಿಪ್ರಾಯ ಪಟ್ಟಿದ್ದಾರೆ.

1993ರ ಮುಂಬೈ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿ ಮೂರನೆ ಹಂತದ ವಿಚಾರಣಾಧೀನ ಕೈದಿಯಾಗಿರುವ ಅಹ್ಮದ್ ಕಮಾಲ್ ಶೇಖ್ ಎಂಬ ಆರೋಪಿಯು, ನ್ಯಾಯಾಲಯದ ವಿಚಾರಣೆಯ ನಂತರ ಕಾರಾಗೃಹಕ್ಕೆ ವಾಪಸು ಕರೆ ತಂದಾಗ, ತನ್ನನ್ನು ಕಾರಾಗೃಹದ ಪ್ರವೇಶ ದ್ವಾರದ ಬಳಿ ಬೆತ್ತಲೆಯಾಗಿ ನಿಲ್ಲಿಸಲಾಗಿತ್ತು ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

Advertisements

ಒಂದು ವೇಳೆ ವಿದ್ಯುನ್ಮಾನ ಶೋಧಕಗಳು ಲಭ್ಯವಿಲ್ಲದಿದ್ದರೆ ವಿಚಾರಣಾಧೀನ ಕೈದಿಗಳ ವೈಯಕ್ತಿಕ ಶೋಧವನ್ನು ದೈಹಿಕವಾಗಿ ನಡೆಸಬೇಕು. ಆದರೆ ಯಾವುದೇ ಕಾರಣಕ್ಕೂ ಅವರನ್ನು ಬೆತ್ತಲೆ ಮಾಡಬಾರದು. ಅವರ ವಿರುದ್ಧ ಅವಾಚ್ಯ ಅಥವಾ ಅಸಂಸದೀಯ ಭಾಷೆಯನ್ನು ಬಳಸಬಾರದು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.

ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಫಿರ್ಯಾದುದಾರರ ಪರ ಸಾಕ್ಷಿಯಾಗಿ ಪರಿವರ್ತನೆಗೊಂಡಿದ್ದ ವಿಚಾರಣಾಧೀನ ಕೈದಿಯೊಬ್ಬರು ತನ್ನನ್ನು ಆರ್ಥರ್ ರಸ್ತೆ ಕಾರಾಗೃಹದ ಅಧೀಕ್ಷಕರು ಹಾಗೂ ಭದ್ರತಾ ಸಿಬ್ಬಂದಿ ಬೆತ್ತಲೆಗೊಳಿಸಿ ತಪಾಸಣೆ ನಡೆಸಿದ್ದಾರೆ ಎಂದು ನ್ಯಾಯಾಲಯಕ್ಕೆ ನೀಡಿದ್ದ ದೂರಿನಲ್ಲಿ ಹುರುಳಿರುವುದನ್ನು ಕಳೆದ ಫೆಬ್ರವರಿಯಲ್ಲಿ ನ್ಯಾಯಾಲಯ ಗಮನಿಸಿತ್ತು.

ವಿಚಾರಣಾಧೀನ ಕೈದಿಗಳ ತಪಾಸಣೆಯನ್ನು ವಿದ್ಯುನ್ಮಾನ ಶೋಧಕ ಹಾಗೂ ಗ್ಯಾಡ್ಜೆಟ್‌ಗಳನ್ನು ಮಾತ್ರ ಬಳಸಿ ಮಾಡಬೇಕು ಎಂದು ಆರ್ಥರ್ ರಸ್ತೆ ಕಾರಾಗೃಹದ ಅಧೀಕ್ಷಕ ಹಾಗೂ ಭದ್ರತಾ ಸಿಬ್ಬಂದಿಗೆ ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X