ವಿದ್ಯಾರ್ಥಿಯನ್ನು ವಿವಸ್ತ್ರಗೊಳಿಸಿ, ಚಪ್ಪಲಿಯಿಂದ ಹೊಡೆದು ಹಲ್ಲೆ; ಮೂವರು ಸಹಪಾಠಿಗಳ ಬಂಧನ

Date:

Advertisements

ಸರ್ಕಾರಿ ಹಾಸ್ಟೆಲ್‌ನಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯ (ಐಟಿಐ) ವಿದ್ಯಾರ್ಥಿಯೊಬ್ಬನನ್ನು ಆತನ ಸಹಪಾಠಿಗಳು ವಿವಸ್ತ್ರಗೊಳಿಸಿ, ಚಪ್ಪಲಿಯಿಂದ ಹೊಡೆದು ದೌರ್ಜನ್ಯ ಎಸಗಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಪ್ರಕರಣದಲ್ಲಿ ಮೂವರು ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದು, ಬಾಲಾಪರಾಧಿ ಗೃಹಕ್ಕೆ ಕಳಿಸಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಸಂತ್ರಸ್ತ ವಿದ್ಯಾರ್ಥಿ ವಿವಸ್ತ್ರನಾಗಿರುವುದು ಮತ್ತು ಆತನಿಗೆ ಕೆಲವು ವಿದ್ಯಾರ್ಥಿಗಳು ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ.

ಸಂತ್ರಸ್ತ ವಿದ್ಯಾರ್ಥಿಯು ತನ್ನ ಪ್ಯಾಂಟ್‌ ಧರಿಸಲು ಅವಕಾಶ ನೀಡುವಂತೆ ಸಹಪಾಠಿಗಳ ಬಳಿ ಬೇಡಿಕೊಂಡರೂ, ಆರೋಪಿ ಬಾಲಕರು ಆತನ ಮೇಲೆ ದೌರ್ಜನ್ಯ ಮುಂದುವರೆಸಿದ್ದಾರೆ. ಆರೋಪಿತ ಮೂವರು ಬಾಲಕರಲ್ಲಿ ಓರ್ವ ಘಟನೆಯನ್ನು ಚಿತ್ರೀಕಸಿದ್ದು, ಇಬ್ಬರ ಸಂತ್ರಸ್ತ ವಿದ್ಯಾರ್ಥಿಗೆ ಚಪ್ಪಲಿಯಲ್ಲಿ ಹೊಡೆತ್ತಿರುವುದು ಹಾಗೂ ಮೂರನೇ ಬಾಲಕ ಸಂತ್ರಸ್ತ ಖಾಸಗಿ ಅಂಗಗಳ ಕುರಿತು ಅಶ್ಲೀಲವಾಗಿ ಮಾತನಾಡುವುದು ವಿಡಿಯೋದಲ್ಲಿ ಸೆರೆಯಾಗಿದೆ.

“ವಿದ್ಯಾರ್ಥಿಗಳು ಐಟಿಐನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಚೆಕ್ಕನೂರಾನಿಯಲ್ಲಿರುವ ಕಲ್ಲಾರ್ ರಿಕ್ಲಮೇಷನ್ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದೆ. ಆರೋಪಿ ಬಾಲಕರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X