ಜೆಎನ್‌ಯು ವಿವಿಯಲ್ಲಿ ಅಂಗವಿಕಲ ವಿದ್ಯಾರ್ಥಿಗೆ ಎಬಿವಿಪಿ ಸದಸ್ಯರಿಂದ ಹಲ್ಲೆ  

Date:

Advertisements

ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಅಂಗವಿಕಲ ವಿದ್ಯಾರ್ಥಿಗೆ ಎಬಿವಿಪಿ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಯನ್ನು ಫಾರೂಕ್ ಆಲಂ ಎಂದು ಗುರುತಿಸಲಾಗಿದೆ. ಫಾರೂಕ್ ಅವರು ಎನ್‌ಎಸ್‌ಯುಐ ಹಿರಿಯ ಕಾರ್ಯಕರ್ತರಾಗಿದ್ದಾರೆ.

ಬುಧವಾರದಂದು ಕಾವೇರಿ ಹಾಸ್ಟೆಲ್‌ನಲ್ಲಿ ಎಬಿವಿಪಿಯ ಕೆಲವು ಸದಸ್ಯರು ಫಾರೂಕ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎನ್‌ಎಸ್‌ಯುಐ ಹೇಳಿಕೊಂಡಿದೆ.

Advertisements

ಕಾವೇರಿ ಹಾಸ್ಟೆಲ್‌ನಲ್ಲಿ ಇಂದು ನಡೆದ ಭೀಕರ ಘಟನೆಯಲ್ಲಿ, ಕಾವೇರಿ ಹಾಸ್ಟೆಲ್‌ನ ಹಿರಿಯ ವಾರ್ಡನ್ ಮತ್ತು ಅವರ ಎಬಿವಿಪಿ ಗೂಂಡಾಗಳು ಎನ್‌ಎಸ್‌ಯುಐ ಕಾರ್ಯಕರ್ತ ಮತ್ತು ಜೆಎನ್‌ಯುನಲ್ಲಿ ಅಂಗವಿಕಲ ಸಂಶೋಧನಾ ವಿದ್ಯಾರ್ಥಿಯಾಗಿರುವ ಫಾರೂಕ್ ಆಲಂ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತು ಕ್ರಮ ಕೈಗೊಳ್ಳುವಂತೆ ಎನ್‌ಎಸ್‌ಯುಐ ಟ್ವೀಟ್ ಮೂಲಕ ಒತ್ತಾಯಿಸಿದೆ.

ಗಾಯಗೊಂಡ ಫಾರೂಕ್ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ.

ಜೆಎನ್‌ಯು ಕ್ಯಾಂಪಸ್ ಈಗ ಶಿಕ್ಷಣಕ್ಕಿಂತ ಗಲಭೆಗಳಿಗೆ ಹೆಚ್ಚು ಪ್ರಸಿದ್ಧಿಯಾಗಿದೆ. ಜೆಎನ್‌ಯು ಆಡಳಿತಯು ಬಿಜೆಪಿಯ ರಾಜಕೀಯ ಶಕ್ತಿಯಿಂದ ರಕ್ಷಿಸಲ್ಪಟ್ಟಿದ್ದು, ಅಧೀನ ಸಂಸ್ಥೆ ಎಬಿವಿಪಿ ವಿದ್ಯಾರ್ಥಿಗಳು ಗಲಭೆಯ ಕಾರಣಕರ್ತರಾಗಿದ್ದಾರೆ.

ಜೆಎನ್‌ಯುನಿಂದ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಗಾಯಾಳು ವಿದ್ಯಾರ್ಥಿ ಫಾರೂಕ್ ಇನ್ನೆರಡು ತಿಂಗಳಲ್ಲಿ ಪಿಎಚ್‌ಡಿ ಮುಗಿಸಲಿದ್ದಾರೆ. ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೇರಿ ಹಾಸ್ಟೆಲ್‌ನಲ್ಲಿರುವ ಫಾರೂಕ್ ಅವರ ಕೊಠಡಿಯನ್ನು ಖಾಲಿ ಮಾಡಲು ಜೆಎನ್‌ಯು ಆಡಳಿತವು ಮಧ್ಯಾಹ್ನ ಬಂದಾಗ ಈ ಘಟನೆ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ಅಂಗಿ ಕಳಚಿ ಎಂದರು, ನಾನು ದೇಗುಲದ ಒಳಗೆ ಕಾಲಿಡಲಿಲ್ಲ: ಕೇರಳ ಘಟನೆ ಮೆಲುಕು ಹಾಕಿದ ಸಿದ್ದರಾಮಯ್ಯ

ಫಾರೂಕ್ ಅವರ ಜೊತೆಗಿದ್ದ ಕೆಲವು ಎಬಿವಿಪಿ ವಿದ್ಯಾರ್ಥಿಗಳು ಅವರ ಜೊತೆ ಜಗಳವಾಡಿದ್ದಲ್ಲದೆ ಥಳಿಸಿದ್ದಾರೆ. ಪ್ರಜ್ಞೆ ತಪ್ಪಿ ಬಿದ್ದ ಅವರನ್ನು ನಂತರ ಆಂಬ್ಯುಲೆನ್ಸ್ ಮೂಲಕ ಏಮ್ಸ್‌ಗೆ ಕರೆದೊಯ್ಯಲಾಯಿತು.

ಜೆಎನ್‌ಯು ಕ್ಯಾಂಪಸ್‌ನ ಎಸ್‌ಎಫ್‌ಐ ಸಂಘಟನೆ ಕೂಡ ಇಡೀ ಘಟನೆಯನ್ನು ವಿರೋಧಿಸಿದೆ. ಎಲ್ಲ ವಿದ್ಯಾರ್ಥಿಗಳು ಒಗ್ಗೂಡಿ ಎಬಿವಿಪಿ ವಿರುದ್ಧ ಪ್ರತಿಭಟಿಸುವಂತೆ ಕರೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X