ಮೋದಿ ಸೋಲಿನಿಂದ ಮಾತ್ರ ಹಿಂದೂ ರಾಷ್ಟ್ರ ಸಾಧ್ಯ: ಸುಬ್ರಮಣಿಯನ್ ಸ್ವಾಮಿ

Date:

Advertisements

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ಬರೆದುಕೊಂಡಿರುವ ಸುಬ್ರಮಣಿಯನ್ ಸ್ವಾಮಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

Advertisements

ಎಕ್ಸ್‌ನಲ್ಲಿ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಮತ್ತೆ ಭೋಪಾಲ್‌ನಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲ. ಆರ್‌ಎಸ್‌ಎಸ್‌ ಅನ್ನು ಟೀಕಿಸಿದ ವ್ಯಕ್ತಿಗೆ ಅವಕಾಶ ನೀಡಲಾಗಿದೆ ಎಂದು ವ್ಯಕ್ತಿಯೊಬ್ಬರು ಟೀಕಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ, ವಾರಣಾಸಿಯಲ್ಲಿ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗುವುದು ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತಪ್ಪುಗಳನ್ನು ಕಟುವಾಗಿಯೇ ಟೀಕಿಸುವ ಸುಬ್ರಮಣಿಯನ್ ಸ್ವಾಮಿ, ಬಿಜೆಪಿಗರಿಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ.

ಹಿಂದೂ ಹೆಮ್ಮೆಯ ಉಲ್ಬಣವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಿದ್ದು ಮೋದಿ ಮೋಡಿಯಿಂದ ಅಲ್ಲ ಎಂದು ಟೀಕಿಸಿದ್ದ ಬಿಜೆಪಿಯ ಹಿರಿಯ ನಾಯಕ ಮತ್ತೊಮ್ಮೆ ಪ್ರಧಾನಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮೋದಿ ನನ್ನನ್ನು ಕ್ಷಿಮಿಸುವುದಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್ 

ಇತ್ತೀಚಿಗೆ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ವಂಚಿತರಾದ ಸಂಸದೆ ಪ್ರಜ್ಞಾ ಠಾಕೂರ್ ಅವರು ಪ್ರಧಾನಿ ಮೋದಿ ನನ್ನನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದರು.

“ನಾನು ಈ ಹಿಂದೆಯೂ ಟಿಕೆಟ್ ಬಯಸಿರಲಿಲ್ಲ ಹಾಗೂ ಮುಂದೆಯೂ ಟಿಕೆಟ್ ಬಯಸುವುದಿಲ್ಲ. ನನ್ನ ಈ ಹಿಂದಿನ ಕೆಲವು ಹೇಳಿ ನನ್ನ ಈ ಹಿಂದಿನ ಕೆಲವು ಹೇಳಿಕೆಗಳಲ್ಲಿನ ಪದಗಳು ಪ್ರಧಾನಿ ನರೇಂದ್ರ ಮೋದಿಗೆ ಇಷ್ಟವಾಗಿರಲಿಕ್ಕಿಲ್ಲ. ನನ್ನನ್ನು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರೂ ಕೂಡಾ. ಹೀಗಿದ್ದೂ,ನಾನು ಈ ಹಿಂದೆಯೆ ನನ್ನ ಹೇಳಿಕೆಗಳಿಗೆ ಕ್ಷಮೆ ಯಾಚಿಸಿದ್ದೇನೆ” ಎಂದಿದ್ದರು.

ಮುಂದಿನ ಲೋಕಸಭಾ ಚುನಾವಣೆಗಾಗಿ ಶನಿವಾರ ಬಿಜೆಪಿ ಬಿಡುಗಡೆ ಮಾಡಿರುವ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡಿರುವ ಹಾಲಿ 33 ಸಂಸದರ ಪೈಕಿ ಪ್ರಜ್ಞಾ ಠಾಕೂರ್ ಕೂಡಾ ಸೇರಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X