ಹೆಚ್ಚುತ್ತಿವೆ ‘ನೀಟ್’ ಆಕಾಂಕ್ಷಿಗಳ ಆತ್ಮಹತ್ಯೆ: ಕೋಟಾದಲ್ಲಿ ಮತ್ತೋರ್ವ ಯುವಕ ಸಾವು

Date:

Advertisements

ತರಬೇತಿ ಕೇಂದ್ರಗಳ ಹಬ್‌ ಎಂದೇ ಗುರುತಿಸಿಕೊಂಡಿರುವ ರಾಜಸ್ಥಾನದ ಕೋಟಾದಲ್ಲಿ ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳಿಗಾಗಿ ಸಿದ್ದತೆ ನಡೆಸಲು ಕೋಟಾಗೆ ಬರುವ ಹಲವಾರು ಆಕಾಂಕ್ಷಿಗಳು ಫೇಲ್‌ ಆಗುವ ಭಯ, ಮಾನಸಿಕ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದೀಗ, ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಇದು ಈ ತಿಂಗಳಲ್ಲಿ ನಡೆದ 3ನೇ ಪ್ರಕರಣವಾಗಿದೆ.

18 ವರ್ಷದ ವಿದ್ಯಾರ್ಥಿಯೊಬ್ಬರು ತಾವು ವಾಸಿಸುತ್ತಿದ್ದ ಪಿಜಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಡಿಶಾ ಮೂಲದ ವಿದ್ಯಾರ್ಥಿ ನೀಟ್ ತಯಾರಿಗಾಗಿ ಕೋಟಾಗೆ ಬಂದಿದ್ದರು. ವಿಜ್ಞಾನ ನಗರದಲ್ಲಿ ವಾಸಿಸುತ್ತಿದ್ದರು. ಆದರೆ, ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳ್ಕೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Advertisements

ಕಳೆದ ವಾರ ಕೋಟಾದಲ್ಲಿಯೇ ಜೆಇಇಗಾಗಿ ತಯಾರಿ ನಡೆಸುತ್ತಿದ್ದ ಇಬ್ಬರು ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಜನವರಿ 8 ರಂದು, ಜೆಇಇ ಆಕಾಂಕ್ಷಿ ಮಧ್ಯಪ್ರದೇಶದ ಮೂಲಕ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಜನವರಿ 7 ರಂದು, ಹರಿಯಾಣದ ಮತ್ತೊಬ್ಬ ಜೆಇಇ ಆಕಾಂಕ್ಷಿ ನೀರಜ್ (19) ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಅಲ್ಲದೆ, 2024ರಲ್ಲಿಯೂ ಹಲವಾರು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2024ರಲ್ಲಿ ಕೋಟಾದಲ್ಲಿಯೇ 19 ಮಂದಿ ಸಾವನ್ನಪ್ಪಿದ್ದರೆ, 2023ರಲ್ಲಿ 29 ಮಂದಿ ಸಾವನ್ನಪ್ಪಿದ್ದರು. ಈ ವರ್ಷದ ಆರಂಭದಲ್ಲಿಯೇ 3 ಮಂದಿ ತಮ್ಮ ಜೀವನವನ್ನು ಅಂತ್ಯಗೊಳಿಸಿಕೊಂಡಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 5

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X