ಅಲಹಾಬಾದ್ ಹೈಕೋರ್ಟ್‌ನ ಕಾರ್ಯನಿರ್ವಹಣೆ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ

Date:

Advertisements

ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿ ಅವರು ತಮ್ಮ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ವಿಚಾರಣೆ ನಡೆಸುತ್ತಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಅಲಹಾಬಾದ್ ಹೈಕೋರ್ಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

“ಈ ಬಗ್ಗೆ ನಾವು ಕಮೆಂಟ್ ಮಾಡಲು ಬಯಸುವುದಿಲ್ಲ. ಕೆಲವು ಹೈಕೋರ್ಟ್‌ಗಳಿಗೆ ಏನಾಗುತ್ತಿದೆ ಎಂಬ ಬಗ್ಗೆ ತಿಳಿದಿಲ್ಲ. ಕೆಲವು ಹೈಕೋರ್ಟ್‌ಗಳ ಪೈಕಿ ಅಲಹಾಬಾದ್ ಹೈಕೋರ್ಟ್ ಬಗ್ಗೆಯೂ ಚಿಂತಿಸಬೇಕಾಗಿದೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಟೀಕಿಸಿದ್ದಾರೆ.

Advertisements

ಹೈಕೋರ್ಟ್‌ನಲ್ಲಿ ಪ್ರಕರಣಗಳ ಪಟ್ಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಲ್ಲೇಖ ಮಾಡಿದ ಅವರು, “ದುರದೃಷ್ಟವಶಾತ್ ಪ್ರಕರಣಗಳ ಪಟ್ಟಿ ಸಲ್ಲಿಕೆ ಕುಸಿದಿದೆ. ಯಾವ ವಿಷಯವನ್ನು ಪಟ್ಟಿ ಮಾಡಲಾಗುತ್ತಿದೆ ಎಂದು ಯಾರಿಗೂ ತಿಳಿದಿಲ್ಲ. ಕಳೆದ ಶನಿವಾರ ನಾನು ಅಲಹಾಬಾದ್ ಹೈಕೋರ್ಟ್‌ಗೆ ಭೇಟಿ ನೀಡಿದಾಗ ಸಂಬಂಧಪಟ್ಟ ನ್ಯಾಯಾಧೀಶರು ಮತ್ತು ರಿಜಿಸ್ಟ್ರಾರ್ ಜತೆಗೆ ದೀರ್ಘ ಸಂವಹನ ನಡೆಸಿದ್ದೇನೆ” ಎಂದು ಹೇಳಿದರು.

ಹಿರಿಯ ವಕೀಲ ಕಪಿಲ್ ಸಿಬಲ್ ಅವರು, “ನಾನು ಕೂಡ ಈ ಬಗ್ಗೆ ಕಮೆಂಟ್ ಮಾಡಲು ಬಯಸುವುದಿಲ್ಲ. ಯಾಕೆಂದರೆ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ” ಎಂದು ಹೇಳಿದ್ದಾರೆ.

ನಂತರ ಹೊರಡಿಸಿದ ಆದೇಶದಲ್ಲಿ, ಅನ್ಸಾರಿ ಅವರ ಅರ್ಜಿಯನ್ನು ಹೈಕೋರ್ಟ್ ಆಲಿಸುವವರೆಗೆ ವಿವಾದಿತ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.

ಈ ವಿಷಯವನ್ನು ಆದಷ್ಟು ಬೇಗ ಹೈಕೋರ್ಟ್ ಮುಂದೆ ವಿಚಾರಣೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ತನ್ನ ಆದೇಶವನ್ನು ಅಲ್ಲಿನ ವಿಭಾಗೀಯ ಪೀಠದ ಗಮನಕ್ಕೆ ತರುವಂತೆಯೂ ನಿರ್ದೇಶಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X