ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್‌ಗೆ ಸುಪ್ರೀಂನಿಂದ ನಿರೀಕ್ಷಣಾ ಜಾಮೀನು ಮಂಜೂರು

Date:

Advertisements

ಅಸ್ಸಾಂ ಕಾಂಗ್ರೆಸ್‌ ಯುವ ಘಟಕದ ಉಚ್ಚಾಟಿತ ನಾಯಕಿಯೊಬ್ಬರ ಗೌರವಕ್ಕೆ ಧಕ್ಕೆ ತಂದ ಆರೋಪದಲ್ಲಿ ಕರ್ನಾಟಕ ಮೂಲದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್‌ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

ತನಗೆ ಮಾನಸಿಕ ಹಿಂಸೆ ನೀಡಿದ್ದಾರೆಂದು ಆರೋಪಿಸಿ ಅಸ್ಸಾಂ ಕಾಂಗ್ರೆಸ್‌ ಯುವ ಘಟಕದ ಉಚ್ಚಾಟಿತ ನಾಯಕಿ ಶ್ರೀನಿವಾಸ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

ಗೌಹಾಟಿ ಹೈಕೋರ್ಟ್ ತನ್ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಶ್ರೀನಿವಾಸ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಅದಾನಿ ಸಮೂಹದ ತನಿಖೆಗೆ ಸೆಬಿಗೆ ಮೂರು ತಿಂಗಳು ಸಮಯ ನೀಡಿದ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಹಾಗೂ ಸಂಜಯ್‌ ಕರೋಲ್ ಅವರ ಪೀಠವು ಜುಲೈ 10 ರೊಳಗೆ ತಮ್ಮ ಉತ್ತರವನ್ನು ಕೋರಿ ಅಸ್ಸಾಂ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಶ್ರೀನಿವಾಸ್‌ ಅವರನ್ನು ₹50,000 ಬಾಂಡ್ ಮತ್ತು ಒಂದು ಅಥವಾ ಎರಡು ಶ್ಯೂರಿಟಿಗಳನ್ನು ಪಡೆದು ನಿರೀಕ್ಷಣಾ ಜಾಮೀನು ನೀಡುವಂತೆ ನ್ಯಾಯಾಲಯ ಆದೇಶಿಸಿತು. ತನಿಖೆಗೆ ಸಹಕರಿಸುವಂತೆ ಶ್ರೀನಿವಾಸ್‌ ಅವರಿಗೆ ನಿರ್ದೇಶನ ನೀಡಿದ ನ್ಯಾಯಾಲಯ ಈ ಸಂಬಂಧ ಅಸ್ಸಾಂ ಸರ್ಕಾರಕ್ಕೂ ನೋಟಿಸ್‌ ನೀಡಿತು.

“ಎಫ್ಐಆರ್ ದಾಖಲಿಸಲು ಒಂದು ತಿಂಗಳ ವಿಳಂಬವನ್ನು ಪರಿಗಣಿಸಿ, ಅರ್ಜಿದಾರರು ಮಧ್ಯಂತರ ರಕ್ಷಣೆಗೆ ಅರ್ಹರಾಗಿದ್ದಾರೆ” ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.  

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X