ಮಸೂದೆಗಳ ಅಂಗೀಕಾರ ವಿಳಂಬ: ಕೇರಳ ರಾಜ್ಯಪಾಲರಿಗೆ ಸುಪ್ರೀಂ ನೋಟಿಸ್

Date:

Advertisements

ವಿಧಾನಸಭೆ ಅಂಗೀಕರಿಸಿದ ಮಸೂದೆಗಳ ಪರಿಗಣನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ  ಸರ್ಕಾರ ಸಲ್ಲಿಸಿದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರಿಗೆ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ನ್ಯಾಯಾಲಯವು ರಾಜ್ಯಪಾಲರ ಮುಖ್ಯ ಕಾರ್ಯದರ್ಶಿ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.

ಕೇಂದ್ರ ಹಾಗೂ ರಾಜ್ಯಪಾಲರ ಕಚೇರಿಯ ಜತೆಗೆ, ವಿಚಾರಣೆ ಸಂಬಂಧ ನೀವು ಅಥವಾ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಹಾಯ ಮಾಡಬೇಕು ಎಂದು ಅಟಾರ್ನಿ ಜನರಲ್ ವಿ. ವೆಂಕಟರಮಣಿ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತು. ವಿಚಾರಣೆಯನ್ನು ನ.24ಕ್ಕೆ ಮುಂದೂಡಿತು.

Advertisements

ಕೇರಳ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿ, ಹಿರಿಯ ವಕೀಲ ಕೆ ಕೆ ವೇಣುಗೋಪಾಲ್ ಅವರು ಸುಪ್ರೀಂ ಕೋರ್ಟ್‌ಗೆ ಮೂರು ಸಲ್ಲಿಕೆಗಳನ್ನು ಸಲ್ಲಿಸಿದ್ದರು.

ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಸೂದೆಗಳನ್ನು ಪರಿಗಣಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’

ರಾಜ್ಯಪಾಲರು ಬಾಕಿ ಇರುವ  8 ಮಸೂದೆಗಳನ್ನು ಅಂಗೀಕರಿಸಲು ವಿನಾಕಾರಣ ವಿಳಂಬ ಮಾಡುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯಗಳಲ್ಲಿ ವಿಫಲರಾಗಿದ್ದಾರೆ ಎಂದು ರಾಜ್ಯ ಸರ್ಕಾರ ವಾದಿಸಿತ್ತು.

ತಮಿಳುನಾಡು ರಾಜ್ಯಪಾಲ ಆರ್‌ ಎನ್ ರವಿ ಅವರು ಮಸೂದೆಗಳನ್ನು ಅಂಗೀಕರಿಸದೆ ಅಥವಾ ಹಿಂದಿರುಗಿಸದೆ ನಾಗರಿಕರ ಕಲ್ಯಾಣದ ಆದೇಶದೊಂದಿಗೆ ಆಟವಾಡುತ್ತಿದ್ದಾರೆ ಎಂದು ತಮಿಳುನಾಡನ್ನು ಪ್ರತಿನಿಧಿಸಿದ್ದ ವಕೀಲರು ಆರೋಪಿಸಿದರು.

ರಾಜ್ಯಪಾಲರು ತನ್ನನ್ನು ತಾನು “ರಾಜಕೀಯ ಪ್ರತಿಸ್ಪರ್ಧಿ” ಎಂದು ಬಿಂಬಿಸಿಕೊಂಡಿದ್ದಾರೆ ಎಂದು ತಮಿಳುನಾಡು ಸರ್ಕಾರ ಆರೋಪಿಸಿದೆ.

ಪಂಜಾಬ್ ರಾಜ್ಯಪಾಲರು ಏಳು ಮಸೂದೆಗಳನ್ನು ಜೂನ್‌ನಿಂದ ಅಂಗೀಕರಿಸದೆ ತನ್ನ ಬಳಿಯೇ ಇಟ್ಟುಕೊಂಡಿದ್ದಾರೆ.

ತೆಲಂಗಾಣ ರಾಜ್ಯಪಾಲರು ಸೆಪ್ಟೆಂಬರ್ 2022 ರಿಂದ ಬಾಕಿ ಉಳಿಸಿಕೊಂಡಿದ್ದ ಮಸೂದೆಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಏಪ್ರಿಲ್‌ನಲ್ಲಿ ಮಧ್ಯ ಪ್ರವೇಶಿಸಬೇಕಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X