25 ಸಾವಿರ ಶಿಕ್ಷಕರ ವಜಾಗೊಳಿಸಿ ಸುಪ್ರೀಂ ಕೋರ್ಟ್‌ ಆದೇಶ, ಪಶ್ಚಿಮ ಬಂಗಾಳ ಸರ್ಕಾರಕ್ಕೆ ಆಘಾತ

Date:

Advertisements

ಶಿಕ್ಷಕರ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೇ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆಘಾತ ನೀಡಿದ್ದು, ಗುರುವಾರ 25,000 ಶಿಕ್ಷಕರನ್ನು ವಜಾಗೊಳಿಸಿ ಆದೇಶಿಸಿದೆ.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,000 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ರದ್ದುಗೊಳಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸುಪ್ರೀಂ ಕೋರ್ಟ್ ನಿರ್ಧಾರ ಇದೀಗ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಶಾಕ್ ನೀಡಿದಂತಾಗಿದೆ.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,753 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಕ ಮಾಡಿದ್ದ ಶಾಲಾ ಸೇವಾ ಆಯೋಗದ(ಎಸ್ಎಸ್‌ಸಿ) ಪ್ರಕ್ರಿಯೆಯನ್ನು ಕೋಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ದೀದಿ ಸರ್ಕಾರಕ್ಕೆ ಹಿನ್ನಡೆಯಾಗಿದೆ.

Advertisements

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠ, ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ ಅಡಿಯಲ್ಲಿ ನೇಮಕಗೊಂಡ 25,000ಕ್ಕೂ ಅಧಿಕ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ವಂಚನೆಯಿಂದ ಕೂಡಿದೆ ಎಂದು ಹೇಳಿದ ಪೀಠ ಇಡೀ ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸಿದೆ. ಅಲ್ಲದೆ ಈಗಾಗಲೇ ನೇಮಕವಾಗಿದ್ದ ಎಲ್ಲ 25 ಸಾವಿರ ಶಿಕ್ಷಕರು ಮತ್ತು ಸಿಬ್ಬಂದಿಗಳನ್ನು ವಜಾ ಮಾಡಿದೆ.

ಹೈಕೋರ್ಟ್ ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಸೂಕ್ತ ಕಾರಣ ನಮಗೆ ಕಂಡು ಬಂದಿಲ್ಲ ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿದ್ದು, ಮೂರು ತಿಂಗಳೊಳಗೆ ಹೊಸ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X