ಕಾವಡ್ ಯಾತ್ರೆ ವಿವಾದ | ಅಂಗಡಿಗಳಲ್ಲಿ ನಾಮಫಲಕ ಪ್ರದರ್ಶಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Date:

Advertisements

ಉತ್ತರ ಪ್ರದೇಶದ ಕಾವಡ್ ಯಾತ್ರೆಯ ಮಾರ್ಗದುದ್ದಕ್ಕೂ ಅಂಗಡಿಗಳ ಮಾಲೀಕರ ಮತ್ತು ನೌಕರರ ಹೆಸರನ್ನು ಪ್ರದರ್ಶಿಸಲು ಸೂಚಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ಆದೇಶವನ್ನು ಹೊರಡಿಸಿದ್ದು, “ಮಾಲೀಕರು ತಮ್ಮ ಅಂಗಡಿಯಲ್ಲಿ ಯಾವ ರೀತಿಯ ಆಹಾರ ಲಭ್ಯವಿದೆ ಎಂಬುವುದನ್ನು ಮಾತ್ರ ಪ್ರದರ್ಶಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

ಉತ್ತರ ಪ್ರದೇಶ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಅಸೋಸಿಯೇಷನ್ ​​ಆಫ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಎಂಬ ಎನ್‌ಜಿಒ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ನಡೆಸಿದ್ದು ‘ನಾಮಫಲಕ ಆದೇಶ’ ಹೊರಡಿಸಿದ ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ವಿಚಾರಣೆಯ ಸಂದರ್ಭದಲ್ಲಿ, ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದು, “ಯಾವುದೇ ಕಾನೂನಿನ ಅಧಿಕಾರವಿಲ್ಲದೆ ಆದೇಶವನ್ನು ಹೊರಡಿಸಲಾಗಿದೆ” ಎಂದು ಹೇಳಿದ್ದು, ನಾಮಫಲಕ ಪ್ರದರ್ಶಿಸುವ ಆದೇಶವನ್ನು ‘ಕಣ್ಣಿಗೆ ಮಣ್ಣೆರಚುವ’ ಆದೇಶ ಎಂದು ಕರೆದಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಕಾವಡ್ ಯಾತ್ರೆ ವಿವಾದ | ಸುಪ್ರೀಂ ಕೋರ್ಟ್ ಕದ ತಟ್ಟಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

“ಇದು ಕಾವಡ್ ಯಾತ್ರೆ ನೆಪದಲ್ಲಿ ಕಣ್ಣಿಗೆ ಮಣ್ಣೆರಚುವ ಆದೇಶವಾಗಿದೆ. ಯಾವ ಅಂಗಡಿ ಮಾಲೀಕರು ತಮ್ಮ ಮತ್ತು ತಮ್ಮ ನೌಕರರ ಹೆಸರನ್ನು ಪ್ರದರ್ಶಿಸುವುದಿಲ್ಲವೊ ಅವರಿಗೆ ದಂಡವನ್ನು ವಿಧಿಸಲಾಗುತ್ತದೆ. ನಾವು ಸಾವಿರಾರು ಕಿಲೋಮೀಟರ್‌ಗಳಿಗೆ ಅನ್ವಯವಾಗುವ ಆದೇಶದ ಬಗ್ಗೆ ಮಾತನಾಡುತ್ತಿದ್ದೇವೆ. ಈ ಅಂಗಡಿಗಳಲ್ಲಿ ಹೆಚ್ಚಿನವು ಟೀ ಅಂಗಡಿಗಳು ಮತ್ತು ಕೆಲವು ಹಣ್ಣಿನ ಅಂಗಡಿಗಳಾಗಿವೆ. ಇದು ಆರ್ಥಿಕ ಸಾವು” ಎಂದು ಹೇಳಿದರು.

“ಈ ವಿಷಯವು ಹೆಚ್ಚು ಮುಖ್ಯವಾಗಿದೆ. ಜನರು ಹೋಟೆಲ್‌ಗಳಲ್ಲಿರುವ ಮೆನುವನ್ನು ನೋಡಿಕೊಂಡು ಆ ಹೋಟೆಲ್, ರೆಸ್ಟೋರೆಂಟ್‌ಗೆ ಭೇಟಿ ನೀಡುತ್ತಾರೆಯೇ ಹೊರತು ಅಲ್ಲಿ ಯಾರೆಲ್ಲ ಸೇವೆ ಸಲ್ಲಿಸುತ್ತಿದ್ದಾರೆ ಎಂದು ನೋಡಿಕೊಂಡು ಭೇಟಿ ನೀಡುವುದಿಲ್ಲ. ಜನರ ಗುರುತನ್ನು ಬಹಿರಂಗಪಡಿಸುವುದೇ ಈ ಆದೇಶದ ಹಿಂದಿರುವ ಉದ್ದೇಶವಾಗಿದೆ. ಇದು ನಾವು ಸಂವಿಧಾನದಲ್ಲಿ ಕಲ್ಪಿಸಿದ ಗಣರಾಜ್ಯವಲ್ಲ” ಎಂದು ವಾದಿಸಿದ್ದಾರೆ.

“ಯಾತ್ರೆಗಳು ದಶಕಗಳಿಂದ ನಡೆಯುತ್ತಿದ್ದು, ಎಲ್ಲಾ ಧರ್ಮದ ಜನರು ತಮ್ಮ ಯಾತ್ರೆಯಲ್ಲಿ ಕನ್ವರಿ ಯಾರಿಗೆ ಸಹಾಯ ಮಾಡುತ್ತಿದ್ದಾರೆ. ಈ ಆದೇಶ ಇದು ಗುರುತಿನ ಸೇರ್ಪಡೆಗೆ ಸಂಬಂಧಿಸಿದೆ. ಕಾನೂನಿನ ಯಾವುದೇ ಅಧಿಕಾರವಿಲ್ಲದೆ ಆದೇಶವನ್ನು ಹೊರಡಿಸಲಾಗಿದೆ. ರೆಸ್ಟೋರೆಂಟ್‌ಗೆ ನೀಡುವ ಹೆಸರಿಗೂ ಅಲ್ಲಿರುವ ಆಹಾರ ಖಾದ್ಯ ಅಥವಾ ವಸ್ತುಗಳಿಗೂ ಏನೂ ಸಂಬಂಧ, ಈ ಸಂಬಂಧದ ಹಿಂದಿನ ತಾರ್ಕಿಕತೆ ಏನು” ಎಂದು ಪ್ರಶ್ನಿಸಿದರು.

ಈ ಕಾವಡ್ ಯಾತ್ರೆ ನಡೆಯುವ ಮಾರ್ಗದಲ್ಲಿರುವ ಎಲ್ಲಾ ಅಂಗಡಿಗಳ ಮಾಲೀಕರ ಹೆಸರನ್ನು ಪ್ರದರ್ಶಿಸಲು ಮುಜಫರ್‌ನಗರ ಪೊಲೀಸರು ಆದೇಶ ನೀಡಿದ ಕೆಲವು ದಿನಗಳ ನಂತರ, ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ರಾಜ್ಯಾದ್ಯಂತ ಈ ವಿವಾದಾತ್ಮಕ ಆದೇಶವನ್ನು ವಿಸ್ತರಿಸಿದೆ. ಈ ಆದೇಶಕ್ಕೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳ ಈ ಆದೇಶದ ವಿರುದ್ಧವಾಗಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X