ವಿವಾದಾತ್ಮಕ ಸಿನಿಮಾ ‘ಹಮಾರೆ ಬಾರಹ್’ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Date:

Advertisements

ಇಸ್ಲಾಂ ನಂಬಿಕೆ ಹಾಗೂ ಮುಸ್ಲಿಂ ಮಹಿಳೆಯರ ವಿವಾಹದ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗಿರುವ ಆರೋಪಗಳ ಮೇಲೆ ಜೂನ್‌ 14 ರಂದು ಬಿಡುಗಡೆಯಾಗಬೇಕಿರುವ ಅನ್ನು ಕಪೂರ್‌ ಅವರ ‘ಹಮಾರೆ ಬಾರಹ್’ ಸಿನಿಮಾಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಹಾಗೂ ಸಂದೀಪ್‌ ಮರಹ್ತಾ ಅವರನ್ನೊಳಗೊಂಡ ರಜಾಕಾಲದ ಪೀಠ ವಕೀಲರಾದ ಫೌಜಿಯಾ ಶಕೀಲ್ ಅವರ ಸಲ್ಲಿಸಿದ್ದ ಅರ್ಜಿಯನ್ನು ಗಮನಿಸಿತು. ಹಾಗೆಯೇ ಈ ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಬಾಂಬೆ ಹೈಕೋರ್ಟ್‌ಗೆ ಸೂಚಿಸಿತು.

“ನಾವು ಇಂದು ಮುಂಜಾನೆ ಸಿನಿಮಾದ ಟ್ರೈಲರ್‌ಅನ್ನು ನೋಡಿದ್ದೇವೆ. ಚಿತ್ರದಲ್ಲಿರುವ ಎಲ್ಲ ಪ್ರಚೋದನಾಕಾರಿ ಸಂಭಾಷಣೆಗಳು ಹಾಗೆಯೇ ಮುಂದುವರೆದಿವೆ” ಎಂದು ಗಮನಿಸಿದ ಪೀಠ ಸಿನಿಮಾ ಬಿಡುಗಡೆಗೆ ತಡೆ ನೀಡಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಈ ವಿವಾದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಿಲೇವಾರಿ ಮಾಡುವ ತನಕ ಸುಪ್ರೀಂ ಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ.

ಸೂಕ್ತ ಕಾರಣ ನೀಡದೆ ಬಾಂಬೆ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿದೆ ಎಂದು ತಡೆಯಾಜ್ಞೆಗೆ ಕೋರಿ ಸಲ್ಲಿಸಿದ ಅರ್ಜಿದಾರರಾದ ಅಜರ್‌ ಭಾಷ ತಂಬೊಲೈ ಪರ ವಕೀಲ ಶಕೀಲ್‌ ಅವರು ಕೋರ್ಟ್‌ಗೆ ಮಾಹಿತಿ ನೀಡಿದರು.

“ಪ್ರಕರಣದಲ್ಲಿ ಕೇಂದ್ರೀಯ ಸಿನಿಮಾ ಪ್ರಮಾಣಪತ್ರ ಮಂಡಳಿ(ಸಿಬಿಎಫ್‌ಸಿ) ಕೂಡ ಕಕ್ಷಿದಾರರಾಗಿರುವ ಕಾರಣ ಬಾಂಬೆ ಹೈಕೋರ್ಟ್ ಸಿಬಿಎಫ್‌ಸಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ” ಎಂದು ವಕೀಲರಾದ ಶಕೀಲ್‌ ತಿಳಿಸಿದರು.

ವಿವಾದಿತ ಹಮಾರಾ ಬರಹ್‌ ಸಿನಿಮಾವನ್ನು ಈಗಾಗಲೇ ಕರ್ನಾಟಕದಲ್ಲಿ ನಿಷೇಧಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದೇ ಮೊದಲ ಬಾರಿಗೆ ಭಾರತಕ್ಕೆ ತಾಲಿಬಾನ್ ಸಚಿವರ ಭೇಟಿ; ಐತಿಹಾಸಿಕ ಹೆಜ್ಜೆ

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಖಾನ್ ಮುತ್ತಖಿ...

ದಾವಣಗೆರೆ | ಜಾತಿ ಧರ್ಮ ಭಾಷೆಗಳ ಸಂಘರ್ಷ ತಡೆಗೆ ಗಾಂಧೀಜಿ ದಾರಿ ಮುಖ್ಯ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ

ʼʼಜಾತಿ,ಧರ್ಮಗಳ, ಮಧ್ಯೆ, ಭಾಷೆ ಮತ್ತು ಪ್ರದೇಶಗಳ ಮಧ್ಯೆ ವೈಷಮ್ಯ ಮಾಡಿಕೊಂಡು ಸಂಘರ್ಷ...

ಒಳ ಮೀಸಲಾತಿ | ಎಐಸಿಸಿ ಹಸ್ತಕ್ಷೇಪಕ್ಕೆ ಹೆಚ್ಚಿದ ಆಗ್ರಹ, ದೆಹಲಿ ಬಿಡದಿರಲು ಅಲೆಮಾರಿ ಸಂಸತ್ತು ತೀರ್ಮಾನ

ಒಳ ಮೀಸಲಾತಿ ವಿತರಣೆಯಲ್ಲಿ ಕರ್ನಾಟಕದ ಅಸ್ಪೃಶ್ಯ ದಲಿತ ಅಲೆಮಾರಿ ಸಮುದಾಯಗಳಿಗೆ ಆಗಿರುವ...

Download Eedina App Android / iOS

X