ಬಿಹಾರ ಸರ್ಕಾರದ ಶೇ.65 ಮೀಸಲಾತಿ ರದ್ದು: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರಿಂ ನಕಾರ

Date:

Advertisements

ಬಿಹಾರ ಸರ್ಕಾರವು ಹಿಂದುಳಿದ ವರ್ಗ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ ನೀಡಿದ್ದ ಶೇ 65 ರಷ್ಟು ಮೀಸಲಾತಿಯ ಆದೇಶವನ್ನು ರದ್ದುಗೊಳಿಸಿದ್ದ ಪಾಟ್ನಾ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. 

ಬಿಹಾರ ಸರ್ಕಾರ ಶೇ.50 ರಷ್ಟಿದ್ದ ಮೀಸಲಾತಿ ಮಿತಿಯನ್ನು ಶೇ. 65ಕ್ಕೆ ಹೆಚ್ಚಿಸಿದ್ದ ಆದೇಶವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿ ಬಿಹಾರ ಸರ್ಕಾರ ಸುಪ್ರಿಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಬಿಹಾರ ವಿಧಾನಸಭೆಯು 2023ರಲ್ಲಿ ಅಂಗೀಕರಿಸಿದ್ದ ಮಸೂದೆಯನ್ನು ಪಾಟ್ನಾ ಹೈಕೋರ್ಟ್‌ನ ವಿಭಾಗೀಯ ಪೀಠ ಜೂನ್ 20ರಂದು ರದ್ದುಗೊಳಿಸಿತ್ತು. ರಾಜ್ಯ ಸರ್ಕಾರದ ನಿರ್ಧಾರವು ಸಂವಿಧಾನದ ವಿಧಿ 14,15 ಹಾಗೂ 16 ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು.

Advertisements

ಬಿಹಾರ ಸರ್ಕಾರ ಮಂಡಿಸಿದ್ದ ಮಸೂದೆಯನ್ವಯ ಪರಿಶಿಷ್ಟ ಜಾತಿ ಸಮುದಾಯ ಶೇ.20, ಒಬಿಸಿ ಮತ್ತು ಅತೀ ಹಿಂದುಳಿದ ಸಮುದಾಯ ಶೇ.43 ಮೀಸಲಾತಿ, ಎಸ್ಟಿ ಸಮುದಾಯ ಶೇ.2 ಮೀಸಲಾತಿಗೆ ಅರ್ಹರಾಗಿದ್ದರು. ಈ ಹೆಚ್ಚಳದಿಂದ ಒಬಿಸಿ ಮತ್ತು ಅತೀ ಹಿಂದುಳಿದ ಅಭ್ಯರ್ಥಿಗಳು(ಇಬಿಸಿ) ಶೇ.30 ಮೀಸಲಾತಿ ಹೆಚ್ಚಿಗೆ ಪಡೆಯಲಿದ್ದಾರೆ ಎಂದು ತಿಳಿಸಲಾಗಿತ್ತು.

ಈ ಮೊದಲು ಇಬಿಸಿ ಶೇ.18, ಒಬಿಸಿ ಶೇ.12, ಎಸ್ಸಿ ಶೇ.16 ಹಾಗೂ ಎಸ್ಟಿ ಸಮುದಾಯ ಶೇ.1 ಮೀಸಲಾತಿ ಪಡೆಯುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?

ರಾಜ್ಯದ ಮಸೂದೆಯಲ್ಲಿ ಈ ಹಿಂದೆ ಹಿಂದುಳಿದ ಮಹಿಳೆಯರಿಗೆ ಕಲ್ಪಿಸಲಾಗಿದ್ದ ಶೇ.3 ಮೀಸಲಾತಿಯನ್ನು ರದ್ದುಪಡಿಸಲಾಗಿತ್ತು. ಹಾಗೆಯೇ ಕೇಂದ್ರ ಸರ್ಕಾರ ಆರ್ಥಿಕ ದುರ್ಬಲ ವರ್ಗಗಳಿಗೆ ನೀಡಿದ್ದ ಶೇ.10 ಮೀಸಲಾತಿಯನ್ನು ಹೊರತುಪಡಿಸಲಾಗಿತ್ತು.

ಬಿಹಾರ ರಾಜ್ಯಾದ್ಯಂತ ನಡೆಸಿದ ಜಾತಿ ಸಮೀಕ್ಷೆಯ ಸಂಪೂರ್ಣ ವರದಿಯನ್ನು ಸರ್ಕಾರ ಮಂಡಿಸಿದ ಕೆಲವೇ ಗಂಟೆಗಳ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಸೂದೆಯನ್ನು ಪ್ರಸ್ತಾಪಿಸಿದ್ದರು. ಬಿಹಾರದ 13.1 ಕೋಟಿ ಜನರಲ್ಲಿ ಶೇ. 36 ಜನರು ಇಬಿಸಿ ಮತ್ತು ಶೇ. 27.1 ಮಂದಿ ಒಬಿಸಿ ಸಮುದಾಯಕ್ಕೆ ಸೇರಿದ್ದಾರೆ ಎಂದು ವರದಿ ಹೇಳಿತ್ತು.

ಉಳಿದವರಲ್ಲಿ ಶೇ.19.7ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ.1.7 ರಷ್ಟಿದೆ. ಸಾಮಾನ್ಯ ವರ್ಗದ ಜನಸಂಖ್ಯೆ 15.5 ಪ್ರತಿಶತವನ್ನು ಹೊಂದಿದೆ ಎಂದು ವರದಿ ಹೇಳಿತ್ತು.

ಇದರರ್ಥ ಬಿಹಾರದ ಶೇಕಡ 60 ಕ್ಕಿಂತ ಹೆಚ್ಚು ಜನರು ಒಬಿಸಿ ಅಥವಾ ಇಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸರ್ಕಾರದ ವರದಿಯಲ್ಲಿ ಶೇ.42 ಎಸ್ಸಿ ಮತ್ತು ಎಸ್ಟಿ ಸಮುದಾಯ ಬಡತನ ರೇಖೆಗಿಂತ ಕೆಳಗಿದ್ದಾರೆ. ಈ ಸಮುದಾಯದ ಶೇ. 34 ಮಂದಿಯ ಮಾಸಿಕ ಆದಾಯ 6 ಸಾವಿರ ರೂ.ಕ್ಕಿಂತ ಕಡಿಮೆಯಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X