ಸಿಎಎ ಜಾರಿ | ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

Date:

Advertisements

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ವಿರುದ್ಧ ಸಲ್ಲಿಕೆಯಾಗಿರುವ ಸುಮಾರು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀ ಕೋರ್ಟ್, ಮಧ್ಯಂತರ ತಡೆ ನೀಡಲು ನಿರಾಕರಿಸಿದೆ. ಆದರೆ, ಸಿಎಎ ಕಾಯ್ದೆಯ ನಿಯಮಗಳಿಗೆ ಸಂಬಂಧಿಸಿ ಸಲ್ಲಿಸಲಾಗಿರುವ ಅರ್ಜಿಗೆ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಸೇರಿದಂತೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರನ್ನೊಳಗೊಂಡ ಪೀಠವು ಇಂದು ತಡೆಯಾಜ್ಞೆಯ ಮನವಿಯ ಕುರಿತು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದ್ದು, ಏಪ್ರಿಲ್ 2ರೊಳಗೆ ಅದರ ಉತ್ತರವನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ.

“ತಡೆಯಾಜ್ಞೆ ಅರ್ಜಿಗಳ ಬಗ್ಗೆ ಏಪ್ರಿಲ್ 2ರೊಳಗೆ ಐದು ಪುಟಗಳಿಗೆ ಸೀಮಿತವಾದ ಉತ್ತರವನ್ನು ಕೇಂದ್ರ ಸರ್ಕಾರವು ಸಲ್ಲಿಕೆ ಮಾಡಬೇಕು. ಪ್ರತಿವಾದಿಗಳು ಏಪ್ರಿಲ್ 8ರೊಳಗೆ ಅರ್ಜಿಗೆ 5 ಪುಟಗಳ ಉತ್ತರವನ್ನು ನೀಡಲಿ. ನಂತರ ಏಪ್ರಿಲ್ 9ರಂದು ಮುಂದಿನ ವಿಚಾರಣೆ ನಾವು ನಡೆಸುತ್ತೇವೆ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

Advertisements

ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ತಡೆ ಕೋರಿ ಸಲ್ಲಿಸಿರುವ ಮನವಿಗೆ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ಕೋರಿದರು. ಇದಕ್ಕೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ವಿರೋಧಿಸಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ನಗರ್ತಪೇಟೆ ಘಟನೆಗೆ ಕೋಮು ಬಣ್ಣ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು 

ಕೊನೆಗೆ ಮೂವರು ನ್ಯಾಯಾಧೀಶರಿದ್ದ ನ್ಯಾಯ ಪೀಠವು, ಮೂರು ವಾರಗಳ ನಂತರ ಪ್ರಕ್ರಿಯೆಗಳನ್ನು ಪಟ್ಟಿ ಮಾಡುವಂತೆ ನಿರ್ದೇಶನ ನೀಡಿ, ಅರ್ಜಿಯನ್ನು ಏಪ್ರಿಲ್ 9ಕ್ಕೆ ಮತ್ತೆ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ತಿಳಿಸಿತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X