ಧಾಟಿ ಬದಲಿಸಿದ ಸುಪ್ರೀಂ | ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮಾತು ಆಲಿಸಲು ಅಧಿಕಾರಿಗಳಿಗೆ ಸಲಹೆ

Date:

ವಿದ್ಯಾರ್ಥಿ ಪ್ರತಿಭಟನೆಗಳನ್ನು ನಿರ್ವಹಿಸುವ ವೇಳೆ ಪೊಲೀಸ್ ಅಧಿಕಾರಿಗಳು ಅತ್ಯಂತ ಸಂಯಮದಿಂದ ವರ್ತಿಸಬೇಕು. ಬಲಪ್ರಯೋಗಕ್ಕಿಂತ ಪ್ರತಿಭಟನಾಕಾರರು ಏನು ಹೇಳುತ್ತಿದ್ದಾರೆ, ಏಕೆ ಪ್ರತಿಭಟಿಸುತ್ತಿದ್ದಾರೆ ಎಂಬುದನ್ನು ಆಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

- Advertisement -

ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ವೇಳೆ ಕಲ್ಲು ತೂರಾಟ ಸೇರಿದಂತೆ ಹಿಂಸಾಚಾರ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಸಿಜೆಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಮೆರವಣಿಗೆಗಳು ನಡೆಯುವಾಗ ಭದ್ರತಾ ಪಡೆಗಳೂ ಸಂಯಮ ಪ್ರದರ್ಶಿಸಬೇಕು. ಯುವಕರು ಹಿಂಸೆಗೆ ಇಳಿಯದಂತೆ ಅಧಿಕಾರಿಗಳು ಅತ್ಯಂತ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಹಿಂಸೆಗೆ ಪ್ರತಿಯಾಗಿ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಪ್ರತಿಭಟನಾಕಾರರ ಮಾತು ಆಲಿಸುವುದೇ ಅತ್ಯಂತ ಶಕ್ತಿಯುತ ಮಾರ್ಗ” ಎಂದು ನ್ಯಾಯಪೀಠ ಹೇಳಿತು.

ಇನ್ನೊಂದೆಡೆ ಕ್ರಮ ಕೈಗೊಳ್ಳುವುದನ್ನು ಪೊಲೀಸ್‌ ಅಧಿಕಾರಿಗಳ ವಿವೇಚನೆಗೆ ಬಿಡುವುದು ಸರಿ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. “ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗಿಂತ ಅವರಿಗೆ ಚೆನ್ನಾಗಿ ಗೊತ್ತಿದೆ. ವಾದವನ್ನು ಆಲಿಸಿದ್ದೇವೆ. ಕೇಂದ್ರ ಸರ್ಕಾರದ ನಿಲುವು ಸೇರಿದಂತೆ ಇತರ ಅಂಶಗಳನ್ನು ಪರಿಗಣಿಸಿ ಸೂಕ್ತ ಸಂದರ್ಭದಲ್ಲಿ ವಿಚಾರಣೆ ನಡೆಸುತ್ತೇವೆ” ಎಂದು ತಿಳಿಸಿದೆ.

ಇದನ್ನೂ ಓದಿ: ನಮ್ಮ ಬೆನ್ನು ಹತ್ತಿ ಬೇಟೆಯಾಡುವುದನ್ನು ಇನ್ನಾದರೂ ನಿಲ್ಲಿಸಿ: ಪ್ರಧಾನಿ ನಿಂದನೆ ಆರೋಪ ಹೊತ್ತ ಬಾಲೆಯ ತಾಯಿ ಕಳಕಳಿ

ಇದೇ ವೇಳೆ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪದ ವಿರುದ್ಧ ನಡೆದ ವಿದ್ಯಾರ್ಥಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ಬಿಹಾರ ಮತ್ತು ಅಸ್ಸಾಂನಲ್ಲಿ ದಾಖಲಿಸಲಾಗಿದ್ದ ಎಫ್‌ಐಆರ್‌ಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಸಿಜೆಪಿ ಇತ್ತೀಚೆಗೆ ಹೇಳಿಕೊಂಡಿತ್ತು. ರಾತ್ರಿ ನಡೆದ ಮಾತುಕತೆಯ ಬಳಿಕ ಈ ಭರವಸೆ ದೊರೆತಿದ್ದು, ಪ್ರತಿಭಟನೆಗೆ ಸಂಬಂಧಿಸಿದಂತೆ ಹೊಸ ಕ್ರಿಮಿನಲ್ ಪ್ರಕರಣಗಳನ್ನೂ ದಾಖಲಿಸದಿರಲು ಕೇಂದ್ರ ಸರ್ಕಾರ ಒಪ್ಪಿದೆ ಎಂದು ಸಿಜೆಪಿ ಹೇಳಿತ್ತು.

ಇದೇ ಪ್ರಕರಣದ ಕುರಿತು ಜುಲೈ ನಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ವಿರುದ್ಧ ತುರ್ತು ವಿಚಾರಣೆ ನಡೆಸುವಂತೆ ವಕೀಲರೊಬ್ಬರು ಮೌಖಿಕವಾಗಿ ಮನವಿ ಮಾಡಿದ್ದರು. ಆಗ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ತುರ್ತು ವಿಚಾರಣೆಗೆ ಒಪ್ಪಿರಲಿಲ್ಲ. ಅಲ್ಲದೆ, ಪ್ರತಿಭಟನೆಯ ವಿಡಿಯೊಗಳನ್ನು ನೋಡುವ ಅಗತ್ಯವಿಲ್ಲ, ತುರ್ತು ಹಂತದಲ್ಲಿ ಅಂತಹ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂಬ ನಿಲುವು ವ್ಯಕ್ತಪಡಿಸಿದ್ದರು. ಇದರಿಂದ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಬಳಿಕ ಸ್ಪಷ್ಟನೆ ನೀಡಿ, ತಾವು ಯಾವುದೇ ಅರ್ಜಿಯನ್ನು ವಿಚಾರಣೆಗೆ ನಿರಾಕರಿಸಿಲ್ಲ. ನ್ಯಾಯಾಲಯದ ಮುಂದೆ ಯಾವುದೇ ಅಧಿಕೃತ ರಿಟ್ ಅರ್ಜಿಯೇ ಸಲ್ಲಿಕೆಯಾಗಿರಲಿಲ್ಲ. ಕೇವಲ ಒಂದು ಮನವಿ ಪತ್ರ ಮಾತ್ರ ಬಂದಿತ್ತು. ತಾವು ವಿಚಾರಣೆ ನಿರಾಕರಿಸಿದ್ದೇವೆ ಎಂಬ ಮಾಧ್ಯಮ ವರದಿಗಳು ತಪ್ಪು ಎಂದಿದ್ದರು. ಮತ್ತೊಂದು ವಿಚಾರಣೆಯಲ್ಲಿ “ಅತಿಯಾದ ಬಲಪ್ರಯೋಗ ಮಾಡಿದ ಪೊಲೀಸ್ ಅಧಿಕಾರಿಗಳನ್ನೂ ರಕ್ಷಿಸಬಾರದು; ವಿದ್ಯಾರ್ಥಿ ಪ್ರತಿಭಟನೆಯ ಹೆಸರಿನಲ್ಲಿ ಅಪರಾಧ ಎಸಗಿದವರನ್ನೂ ರಕ್ಷಿಸಬಾರದು” ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈಗ ಅಧಿಕಾರಿಗಳು ಸಂಯಮದಿಂದಿರಬೇಕು ಎಂದಿದೆ. ಒಂದೇ ಪ್ರಕರಣದ ಕುರಿತು ಆರಂಭದಲ್ಲಿ ತುರ್ತು ವಿಚಾರಣೆಗೆ ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಟೀಕೆ ವ್ಯಕ್ತವಾದ ಬೆನ್ನಲ್ಲೇ ಒಂದೊಂದೇ ನಿಲುವನ್ನು ಬದಲಾಯಿಸಿದೆ.  

ನೀಟ್ ಪರೀಕ್ಷಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಸಿಜೆಪಿ ಆಗ್ರಹಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...