ಇವಿಎಂಗಳನ್ನೇ ತರಿಸಿಕೊಂಡು ಮತಗಳ ಮರು ಎಣಿಕೆ ನಡೆಸಿದ ಸುಪ್ರೀಂ ಕೋರ್ಟ್‌!

Date:

Advertisements

ಹರಿಯಾಣದ ಗ್ರಾಮ ಪಂಚಾಯತ್ ಒಂದರ ಚುನಾವಣೆಯ ಎಲೆಕ್ಟ್ರಾನಿಕ್ ಮತ ಯಂತ್ರಗಳು (ಇವಿಎಂಗಳು) ಮತ್ತು ಇತರ ದಾಖಲೆಗಳನ್ನು ತರಿಸಿ ಸುಪ್ರೀಂ ಕೋರ್ಟ್ ಮರು ಎಣಿಕೆ ನಡೆಸಿದೆ. ಹರಿಯಾಣದ ಪಾಣಿಪತ್ ಜಿಲ್ಲೆಯ ಬುವಾನಾ ಲಖು ಗ್ರಾಮದ ಗ್ರಾಮ ಪಂಚಾಯತ್‌ನ ಅಧ್ಯಕ್ಷರ ಆಯ್ಕೆಯ ಬಗ್ಗೆ ವಿವಾದ ಉದ್ಭವಿಸಿದ ನಂತರ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ಅವರು ಎರಡೂ ಪಕ್ಷಗಳ ಸಮ್ಮುಖದಲ್ಲಿ ಮರುಎಣಿಕೆಯನ್ನು ನಡೆಸಿದ್ದು, ಸಂಪೂರ್ಣ ಪ್ರಕ್ರಿಯೆಯನ್ನು ವೀಡಿಯೊಗ್ರಾಫ್ ಮಾಡಲಾಗಿದೆ. 2022ರ ನವೆಂಬರ್ 2ರಂದು ಬುವಾನಾ ಲಖು ಗ್ರಾಮದ ಅಧ್ಯಕ್ಷರ ಹುದ್ದೆಗೆ ಚುನಾವಣೆ ನಡೆಸಲಾಗಿದ್ದು ಕುಲದೀಪ್ ಸಿಂಗ್ ಅವರನ್ನು ಅಧ್ಯಕ್ಷ ಎಂದು ಘೋಷಿಸಲಾಗಿದೆ.

ಇದನ್ನು ಓದಿದ್ದೀರಾ? ಸುಪ್ರೀಂ ಕೋರ್ಟ್‌ | ಬ್ಯಾಲೆಟ್‌ ಪೇಪರ್‌ ಮತದಾನ ಮರುಜಾರಿ ಕೋರಿದ್ದ ಅರ್ಜಿ ವಜಾ

Advertisements

ಆದರೆ ಫಲಿತಾಂಶಗಳನ್ನು ಪ್ರಶ್ನಿಸಿ ಕುಲದೀಪ್ ಅವರ ಪ್ರತಿಸ್ಪರ್ಧಿ ಮೋಹಿತ್ ಕುಮಾರ್ ಮೇಲ್ಮನವಿ ಸಲ್ಲಿಸಿದ್ದಾರೆ. ಏಪ್ರಿಲ್ 22ರಂದು ಚುನಾವಣಾ ನ್ಯಾಯಮಂಡಳಿಯು ಮತಗಟ್ಟೆ ಸಂಖ್ಯೆ 69 ರ ಮತಗಳ ಮರು ಎಣಿಕೆಗೆ ಆದೇಶಿಸಿತ್ತು. ಈ ಹಿನ್ನೆಲೆ ಮೇ 7ರಂದು ಮತಗಳ ಮರು ಎಣಿಕೆ ಮಾಡಲು ನಿರ್ದೆಶಿಸಲಾಗಿದೆ.

ಆದರೆ ಚುನಾವಣಾ ನ್ಯಾಯಮಂಡಳಿಯ ಈ ಆದೇಶವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ದುಗೊಳಿಸಿತು. ಅದಾದ ಬಳಿಕ ಮೋಹಿತ್ ಕುಮಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿಎಂಗಳು ಮತ್ತು ಇತರ ದಾಖಲೆಗಳನ್ನು ಹಾಜರುಪಡಿಸುವಂತೆ ನಿರ್ದೇಶಿಸಿತು. ಹಾಗೆಯೇ ಕೇವಲ ಒಂದು ಮತಗಟ್ಟೆಯ ಬದಲು ಎಲ್ಲಾ ಮತಗಟ್ಟೆಗಳ ಮತಗಳ ಮರು ಎಣಿಕೆಗೆ ಆದೇಶಿಸಿತು.

ಆದೇಶದ ಪ್ರಕಾರವಾಗಿ ಆಗಸ್ಟ್ 6ರಂದು ಪ್ರತಿನಿಧಿಗಳು ಮತ್ತು ಸಹಾಯಕ ವಕೀಲರ ಸಮ್ಮುಖದಲ್ಲಿ ಮರು ಎಣಿಕೆ ನಡೆದಿದೆ. 65ರಿಂದ 70 ಮತಗಟ್ಟೆಗಳನ್ನು ಮರುಎಣಿಕೆ ಮಾಡಲಾಗಿದ್ದು, ಮೇಲ್ಮನವಿದಾರ ಮೋಹಿತ್ ಕುಮಾರ್ 1,051 ಮತಗಳನ್ನು ಪಡೆದಿದ್ದಾರೆ ಮತ್ತು ಪ್ರತಿವಾದಿ ಕುಲದೀಪ್ ಸಿಂಗ್ 1,000 ಮತ ಪಡೆದಿದ್ದಾರೆ ಎಂಬುದು ಖಚಿತವಾಗಿದೆ. ಆ ಕುರಿತು ರಿಜಿಸ್ಟ್ರಾರ್ ಅವರು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.

ಇದಾದ ಬಳಿಕ ನ್ಯಾಯಪೀಠವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಆದೇಶವನ್ನು ರದ್ದುಗೊಳಿಸಿತು ಮತ್ತು ಮೋಹಿತ್ ಕುಮಾರ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಲು ಅರ್ಹರು ಎಂದು ಘೋಷಿಸಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X