ಅಸ್ಸಾಂನಲ್ಲಿ ವಲಸಿಗರಿಗೆ ಪೌರತ್ವ: ಸೆಕ್ಷನ್ 6A ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್

Date:

Advertisements

ಅಸ್ಸಾಂ ಒಪ್ಪಂದದ ಪ್ರಕಾರ ವಲಸಿಗರಿಗೆ ಪೌರತ್ವ ನೀಡುವ 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6A ದ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

ಈ ಸೆಕ್ಷನ್ ನಡಿ 1966 ಜನವರಿ 1 ಹಾಗೂ 1971ಮಾರ್ಚ್‌ 25ರ ನಡುವೆ ಅಸ್ಸಾಂಗೆ ಪ್ರವೇಶಿಸಿದ ವಲಸಿಗರಿಗೆ ಭಾರತದ ಪೌರತ್ವ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳುತ್ತದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂ ದ್ರಚೂಡ್, ನ್ಯಾಯಮೂರ್ತಿಗಳಾದ ಸೂರ್ಯಕಾಂತ, ಎಂ .ಎಂ ಸುಂದರೇಶ್, ಜೆ.ಬಿ. ಪಾರ್ದೀವಾಲ ಹಾಗೂ ಮನೋಜ್ ಮಿಶ್ರಾ ಅವರಿದ್ದ ಸಾಂವಿಧಾನಿಕ ಪೀಠ 4:1ರ ಬಹುಮತದಲ್ಲಿ ಗುರುವಾರ ತೀರ್ಪು ಪ್ರಕಟಿಸಿತು. ನ್ಯಾಯಮೂರ್ತಿ ಪಾರ್ದೀವಾಲ ಅವರು ಭಿನ್ನ ತೀರ್ಪು ನೀಡಿದರು. ಈ ಸೆಕ್ಷನ್ ಅಸಂವಿಧಾನಿಕ ಎಂದು ಅವರು ತೀರ್ಪಿನಲ್ಲಿ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾರಾಷ್ಟ್ರ, ಝಾರ್ಖಂಡ್ ಚುನಾವಣೆ- ಬಿಜೆಪಿ ಪಾಲಿಗೆ ವರವೇ ಅಥವಾ ಶಾಪವೇ?

ಅಸ್ಸಾಂ ಒಪ್ಪಂದವು ಅನಧಿಕೃತ ವಲಸೆ ಸಮಸ್ಯೆಗೆ ರಾಜಕೀಯ ಪರಿಹಾರವಾಗಿತ್ತು. ಸೆಕ್ಷನ್ 6A ಶಾಸನಾತ್ಮಕ ಪರಿಹಾರವಾಗಿದೆ’ ಎಂದು ಸಿಜೆಐ ಚಂದ್ರಚೂಡ್ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ. ಅಸ್ಸಾಂನಲ್ಲಿ ಸ್ಥಳೀಯ ಜನಸಂಖ್ಯೆಯಲ್ಲಿ ವಲಸಿಗರ ಪ್ರಮಾಣವು ಇತರ ಗಡಿ ರಾಜ್ಯಗಳಿಗಿಂತ ಹೆಚ್ಚಾಗಿದೆ. ಹೀಗಾಗಿ ಬಾಂಗ್ಲಾದೇಶದೊಂದಿಗೆ ಹೆಚ್ಚಿನ ಗಡಿಯನ್ನು ಹಂಚಿಕೊಂಡಿರುವ ಇತರ ರಾಜ್ಯಗಳಿಗಿಂತ ಅಸ್ಸಾಂಅನ್ನು ಪ್ರತ್ಯೇಕಿಸುವುದು ವಿವೇಕಯುತವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಬಾಂಗ್ಲಾದೇಶ ವಿಮೋಚನಾ ಯುದ್ಧ ಕೊನೆಗೊಂಡ ದಿನವಾಗಿರುವುದರಿಂದ 1971ರ ಮಾರ್ಚ್ 25ಅನ್ನು ಕೊನೆಯ ದಿನಾಂಕ ಎಂದು ನಿಗದಿಪಡಿಸಿರುವುದು ಕೂಡ ತಾರ್ಕಿಕವಾಗಿದೆ ಎಂದು ಬಹುಮತದ ತೀರ್ಪು ನೀಡಿದ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X