‘ಅಗ್ನಿಪಥ್’ ಯೋಜನೆಯ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

Date:

Advertisements

ಸ್ವೇಚ್ಛಾನುಸಾರ ಆರಂಭಿಸಿದ ಯೋಜನೆಯಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿ ಇತರ ಪರಿಗಣನೆಗಳಿಗಿಂತ ಹೆಚ್ಚಾಗಿರುತ್ತದೆ’ ಎಂದು ‘ಅಗ್ನಿಪಥ್’ ಯೋಜನೆಗೆ ಮಾನ್ಯತೆ ನೀಡಿದ ಸುಪ್ರೀಂ ಕೋರ್ಟ್‌

ವಿವಾದ ಸೃಷ್ಟಿಸಿದ್ದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ಸಿಂಧುತ್ವವನ್ನು ಸುಪ್ರೀಂಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ಎರಡು ಅರ್ಜಿಗಳನ್ನು ತಿರಸ್ಕರಿಸಿ ಯೋಜನೆಗೆ ಮಾನ್ಯತೆ ನೀಡಿದ ಸುಪ್ರೀಂ ಕೋರ್ಟ್‌, “ಇದು ಸ್ವೇಚ್ಛಾನುಸಾರ ಆರಂಭಿಸಿದ ಯೋಜನೆಯಲ್ಲ. ಸಾರ್ವಜನಿಕ ಹಿತಾಸಕ್ತಿ ಇತರ ಪರಿಗಣನೆಗಳಿಗಿಂತ ಹೆಚ್ಚಾಗಿರುತ್ತದೆ. ‘ಅಗ್ನಿಪಥ್’ ಯೋಜನೆಗೆ ಮೊದಲು ರಕ್ಷಣಾ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳ ನೇಮಕಾತಿಯಲ್ಲಿ ಪಟ್ಟಭದ್ರ ಹಿತಾಸಕ್ತಿ ಹೊಂದಿರಲಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಫೆಬ್ರವರಿಯಲ್ಲಿ ದೆಹಲಿ ಹೈಕೋರ್ಟ್ ಯೋಜನೆಯ ಮಾನ್ಯತೆಯನ್ನು ಎತ್ತಿಹಿಡಿದಿತ್ತು. ದೆಹಲಿ ಹೈಕೋರ್ಟ್ ತನ್ನ ತೀರ್ಪಿನಲ್ಲಿ, “ಅಗ್ನಿಪಥ್ ಯೋಜನೆಯನ್ನು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ರೂಪಿಸಲಾಗಿದೆ. ರಕ್ಷಣಾ ಪಡೆಗಳು ಹೆಚ್ಚು ಸಿಬ್ಬಂದಿಯನ್ನು ಹೊಂದಿರುವಂತೆ ಯೋಜನೆ ರೂಪಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿತ್ತು.

Advertisements
Bose Military School

ನಂತರ ಗೋಪಾಲ ಕೃಷ್ಣನ್ ಮತ್ತು ವಕೀಲ ಎಂ ಎಲ್ ಶರ್ಮಾ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಪ್ರಧಾನಿ ಮೋದಿಯವರ ‘ಅರಣ್ಯಾಸಕ್ತಿ’; ಅರಣ್ಯ ಸಂರಕ್ಷಣಾ ಕಾಯ್ದೆಯ ತಿದ್ದುಪಡಿ ಮಸೂದೆ ಹೇಳುವುದೇನು?

 “ನಾವು ಹೈಕೋರ್ಟ್ ತೀರ್ಪಿನಲ್ಲಿ ಬದಲಾವಣೆ ತರಲು ಬಯಸುವುದಿಲ್ಲ. ಹೈಕೋರ್ಟ್ ತೀರ್ಪು ನೀಡುವ ಮೊದಲು ಈ ವಿಚಾರದ ಎಲ್ಲಾ ಅಂಶಗಳನ್ನೂ ಪರಿಗಣಿಸಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಆದರೆ ಭಾರತೀಯ ವಾಯುಸೇನೆಯಲ್ಲಿ ಅಗ್ನಿಪಥ್ ಯೋಜನೆಯನ್ನು ಆರಂಭಿಸುವ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್‌ ಏಪ್ರಿಲ್ 17ಕ್ಕೆ ವಿಚಾರಣೆಗೆ ಮುಂದೂಡಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡದಲ್ಲಿ ಭಾರೀ ಮಳೆ; ರುದ್ರಪ್ರಯಾಗ, ಕೇದಾರನಾಥದಲ್ಲಿ ಆತಂಕ

ಉತ್ತರಾಖಂಡದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ರುದ್ರಪ್ರಯಾಗದಲ್ಲಿ ಅಲಕನಂದಾ...

ಛತ್ತೀಸ್‌ಗಢ | ಭೀಕರ ಅಪಘಾತ: ಮೂವರ ಸಾವು, ಆರು ಮಂದಿಗೆ ಗಾಯ

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿ,...

ಎರಡು ದಶಕಗಳ ನಂತರ ‘ಮರಾಠಿ ವಿಜಯ’ ರ್‍ಯಾಲಿ ನೆಪದಲ್ಲಿ ಒಂದಾದ ರಾಜ್, ಉದ್ಧವ್ ಠಾಕ್ರೆ

ಸುಮಾರು ಎರಡು ದಶಕಗಳಿಂದ ಪ್ರತ್ಯೇಕವಾಗಿ ಸಂಘಟನೆ ಕಟ್ಟುತ್ತಾ ಬಂದಿದ್ದ ಠಾಕ್ರೆ ಸಹೋದರರಾದ...

‘ಜಾತ್ಯತೀತತೆ, ಸಮಾಜವಾದವೇ ನಮ್ಮ ಸಂವಿಧಾನದ ತಳಹದಿ’ ಎಂದಿದ್ದರು ಅಂಬೇಡ್ಕರ್; ಇಲ್ಲಿದೆ ಪುರಾವೆ!

ಇಂಗ್ಲಿಷ್ ಕಾದಂಬರಿಕಾರರಾದ ಮುಲ್ಕ್ ರಾಜ್ ಆನಂದ್‍ರವರು, 1950ರ ಮೇ ತಿಂಗಳ ಒಂದು...

Download Eedina App Android / iOS

X