ನೋಟು ಅಮಾನ್ಯೀಕರಣ ಯಶಸ್ವಿಯಾಗಿದ್ದರೆ ಅಕ್ರಮ ಹಣ ವರ್ಗಾವಣೆ ಇನ್ನು ಏಕೆ ಚಾಲ್ತಿಯಲ್ಲಿದೆ? ಸುಪ್ರಿಯಾ ಸುಳೆ ಪ್ರಶ್ನೆ

Date:

Advertisements

ನೋಟು ಅಮಾನ್ಯೀಕರಣದ ಇಷ್ಟು ವರ್ಷಗಳ ನಂತರ ಪೇಟಿಎಂ ಮೂಲಕ ಹಣ ವಂಚನೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿ ಎಂದರೆ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ಎನ್‌ಸಿಪಿ (ಶರದ್ ಪವಾರ್ ಬಣ) ಸಂಸದೆ ಸುಪ್ರಿಯಾ ಸುಳೆ ಬುಧವಾರ ಲೋಕಸಭೆಯಲ್ಲಿ ಸರಕಾರವನ್ನು ಪ್ರಶ್ನಿಸಿದ್ದಾರೆ.

ಕೇಂದ್ರ ತನಿಖಾ ಅನೇಕ ದಾಳಿಗಳಲ್ಲಿ ವಶಪಡಿಸಿಕೊಳ್ಳುತ್ತಿರುವ ನಗದು ಮೂಲದ ಬಗ್ಗೆಯೂ ಅವರು ಸರ್ಕಾರವನ್ನು ಸುಪ್ರಿಯಾ ಪ್ರಶ್ನಿಸಿದರು.

“ನೋಟು ರದ್ದತಿ ಸಂಭವಿಸಿದಾಗ, ಪೇಟಿಎಂನ ದೊಡ್ಡ ಜಾಹೀರಾತುಗಳನ್ನು ಪ್ರದರ್ಶಿಸಲಾಯಿತು. ಇಂದು ಪೇಟಿಎಂ ವಿರುದ್ಧ ಗರಿಷ್ಠ ಹೋರಾಟ ನಡೆಸುತ್ತಿರುವವರು ಯಾರು? ಪೇಟಿಎಂ ಮೂಲಕ ಗರಿಷ್ಠ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಸರ್ಕಾರವೇ ಹೇಳುತ್ತಿದೆ. ಇವೆಲ್ಲ ನಡೆಯುವಾಗ ಸರ್ಕಾರ ಇಷ್ಟು ವರ್ಷಗಳ ಕಾಲ ಏನು ಮಾಡುತ್ತಿತ್ತು. ಹಾಗಾದರೆ ನೋಟು ರದ್ದತಿ ಮಾಡಿರುವುದು ತಪ್ಪೇ ಅಥವಾ ಪೇಟಿಎಂನ ತಪ್ಪೇ ಅಥವಾ ತಂತ್ರಜ್ಞಾನ ತಪ್ಪಾಗಿದೆಯೆ? ಎಂದು ಕೆಂದ್ರವನ್ನು ಸುಪ್ರಿಯಾ ತರಾಟೆಗೆ ತೆಗೆದುಕೊಂಡರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ

“ಅಷ್ಟೊಂದು ನಗದು ವಸೂಲಿಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ಚಲಾವಣೆಯಲ್ಲಿರುವ ಈ ನಗದು ಎಲ್ಲಿಂದ ಬಂತು? ನೋಟು ಅಮಾನ್ಯೀಕರಣ ಮಾಡಿದ್ದರೆ, ನೀವು ವಶಪಡಿಸಿಕೊಂಡ ಹಣ ಎಲ್ಲಿಂದ ಬಂತು? ಇವೆಲ್ಲವುಗಳಿಗೂ ಸರ್ಕಾರವೇ ಉತ್ತರಿಸಬೇಕಾಗಿದೆ” ಎಂದು ಸುಳೆ ಹೇಳಿದರು.

ಹಲವು ನಿಯಮಗಳನ್ನು ಉಲ್ಲಂಘಿಸಿದ ಕಾರಣ ಆರ್‌ಬಿಐ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಪರವಾನಗಿಯನ್ನು ರದ್ದುಗೊಳಿಸಿದೆ. ಫೆ.29ರ ನಂತರ ಪೇಟಿಎಂ ಪೇಮೆಂಟ್‌ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.

ಆರ್‌ಬಿಐ ನಿಷೇಧಿಸಿದ ನಂತರ ಪೇಟಿಎಂ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸದ ಜಾರಿ ನಿರ್ದೇಶನಾಲಯದ ವಿಶ್ವಾಸಾರ್ಹತೆಯ ಬಗ್ಗೆ ಸುಪ್ರಿಯಾ ಸುಳೆ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X