ಸ್ವಾತಿ ಮಲಿವಾಲ್ ಪ್ರಕರಣ | ಎಫ್‌ಐಆರ್ ಬಳಿಕ ಹೊರಗಡೆ ಬಂದ ಘಟನೆಯ ಹೊಸ ವೀಡಿಯೋ!

Date:

Advertisements

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಕನಿಷ್ಠ ಏಳರಿಂದ ಎಂಟು ಬಾರಿ ನನ್ನ ಕೆನ್ನೆಗೆ ಹೊಡೆದಿದ್ದಾನೆ ಎಂದು ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಗಂಭೀರ ಆರೋಪ ಮಾಡಿದ್ದಾರೆ.

ಹಲ್ಲೆ ಸಂಬಂಧ ಸ್ವಾತಿ ಮಲಿವಾಲ್ ದೂರು ನೀಡಿದ್ದು ಎಫ್‍ಐಆರ್ ದಾಖಲಾಗಿದೆ. ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ದೌರ್ಜನ್ಯದ ಬಗ್ಗೆ ಸ್ವಾತಿ ದೂರಿನಲ್ಲಿ ವಿವರಿಸಿದ್ದಾರೆ.

“ಕೇಜ್ರಿವಾಲ್ ಅವರ ವೈಯಕ್ತಿಕ ಸಹಾಯಕ ಬಿಭವ್ ಕುಮಾರ್ ನನಗೆ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ನಾನು ಎಷ್ಟೇ ಮನವಿ ಮಾಡಿಕೊಂಡರೂ ಪದೇ ಪದೇ ನನ್ನ ಹೊಟ್ಟೆ ಮತ್ತು ಸೊಂಟಕ್ಕೆ ಒದ್ದಿದ್ದಾನೆ” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

Advertisements

ಘಟನೆಯು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿರುವ ನಡುವೆಯೇ ಸಿಎಂ ನಿವಾಸದಲ್ಲಿ ಭದ್ರತಾ ಸಿಬ್ಬಂದಿ, ಬಿಭವ್ ಕುಮಾರ್ ಹಾಗೂ ಸ್ವಾತಿ ಮಲಿವಾಲ್ ನಡುವೆ ನಡೆದಿದ್ದ ತೀವ್ರ ವಾಗ್ವಾದವನ್ನು ತೋರಿಸುವ ಹೊಸ ವೀಡಿಯೋವೊಂದು ಟ್ವಿಟ್ಟರ್ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ಇದನ್ನು ಐಎಎನ್‌ಎಸ್ ಸುದ್ದಿಸಂಸ್ಥೆ ಕೂಡ ಪ್ರಕಟಿಸಿದ್ದು, ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದೆ.

WhatsApp Image 2024 05 17 at 4.31.34 PM
ಹಲ್ಲೆ ಆರೋಪ ಎದುರಿಸುತ್ತಿರುವ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್

ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿರುವ 52 ಸೆಕೆಂಡ್‌ನ ವಿಡಿಯೋ ಕ್ಲಿಪ್‌ನಲ್ಲಿ ಭದ್ರತಾ ಸಿಬ್ಬಂದಿಗಳು ಮಲಿವಾಲ್ ಅವರನ್ನು ಆವರಣದಿಂದ ತೊರೆಯುವಂತೆ ಮನವಿ ಮಾಡುತ್ತಿರುವುದು ಕಾಣಬಹುದು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಲಿವಾಲ್, “ತೇರಿ ಭಿ ನೌಕ್ರಿ ಖಾವೂಂಗಿ… ಯೇ ಗಾಂಜಾ ಸಾಲಾ(ನಿನ್ನ ಕೆಲಸ ಸಹ ಹೋಗಬಹುದು, ಎ ಗಾಂಜಾ ಸಾಲಾ)” ಎಂದು ಹೇಳುವುದನ್ನು ಕೇಳಬಹುದು.

ಈ ವಿಡಿಯೋ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಬಂದ ಸಂಸದೆಯನ್ನು ಭದ್ರತಾ ಸಿಬ್ಬಂದಿ ತಡೆಯುತ್ತಾರೆ. ಹೀಗಾಗಿ ಅಲ್ಲಿಗೆ ಬಂದ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್, “ನೀವು ಈಗ ಭೇಟಿ ಮಾಡಲು ಸಾಧ್ಯವಿಲ್ಲ. ನೀವು ಇಲ್ಲಿಂದ ಹೊರಡಿ” ಎಂದು ಸ್ವಾತಿ ಮಲಿವಾಲ್ ಗೆ ಸೂಚಿಸುತ್ತಾರೆ.

“ಈ ವೇಳೆ, ಇಲ್ಲ ನಾನು ಇಲ್ಲಿಯೇ ಇರುತ್ತೇನೆ. ನೀವು ನನ್ನ ಮೇಲೆ ದಬ್ಬಾಳಿಕೆ ನಡೆಸಿದರೆ, ನನ್ನನ್ನು ಮುಟ್ಟಿದರೆ ನಾನು ಪೊಲೀಸರಿಗೆ ಕರೆ ಮಾಡಬೇಕಾಗುತ್ತದೆ” ಎಂದು ಸ್ವಾತಿ ಹೇಳುತ್ತಾರೆ. “ಮುಂದೆ ನಿಮ್ಮ ಕೆಲಸ ಸಹ ಹೋಗಬಹುದು ಎಂದು ಎಚ್ಚರಿಸುತ್ತಾರೆ.

ಈ ವೇಳೆ ಮಾತಿಗೆ ಮಾತು ಬೆಳೆದು ಸ್ವಾತಿ ಅವರು, ಬಿಭವ್‌ಗೆ ‘ಗಾಂಜಾ ಸಾಲಾ’ ಎಂದು ಸ್ವಾತಿ ಮಲಿವಾಲ್ ಕರೆದಿರುವಲ್ಲಿಗೆ ವಿಡಿಯೋ ಕಟ್ ಆಗುತ್ತದೆ. ಇದಾದ ನಂತರ ಹಲ್ಲೆ ನಡೆದಿರಬಹುದು ಎಂದು ವರದಿಯಾಗಿದೆ.

“ಬಿಭವ್ ಎಂಟು ಬಾರಿ ಕಪಾಳಕ್ಕೆ ಹೊಡೆದಿದ್ದಾರೆ. ನನ್ನ ಎದೆಗೆ ಕಾಲಿನಿಂದ ಒದ್ದಿದ್ದಾರೆ” ಎಂದು ಆರೋಪಿಸಿದ್ದು ಈ ಸಂಬಂಧ ಬಿಭವ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ಲದೇ, ವಿಚಾರಣೆ ಹಾಜರಾಗುವಂತೆ ಮಹಿಳಾ ಆಯೋಗ ಕೂಡ ನೋಟಿಸ್ ನೀಡಿತ್ತು. ಆದರೆ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ವಿಚಾರಣೆಗೆ ಹಾಜರಾಗಿಲ್ಲ ಎಂದು ವರದಿಯಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. A shameful report and a carefully manipulated video. Sanjay Singh, the party spokesperson has already admitted that she was assaulted. The medical examination results confirm the same.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X