ಕನ್ಯಾಕುಮಾರಿಯಲ್ಲಿ ಧ್ಯಾನ ಆರಂಭಿಸಿದ ಪ್ರಧಾನಿ: ಸಾಮಾಜಿಕ ಮಾಧ್ಯಮಗಳಲ್ಲಿ ಗೋ ಬ್ಯಾಕ್ ಮೋದಿ

Date:

Advertisements

ಚುನಾವಣಾ ಪ್ರಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ(ಮೇ.30) ಸಂಜೆ ತಮಿಳುನಾಡಿನ ಕನ್ಯಾಕುಮಾರಿಗೆ ಆಗಮಿಸಿದ್ದು, ಅಲ್ಲಿನ ಪ್ರಸಿದ್ಧ ವಿವೇಕಾನಂದ ಶಿಲಾ ಸ್ಮಾರಕದಲ್ಲಿ 45 ತಾಸುಗಳ ಧ್ಯಾನವನ್ನು ಆರಂಭಿಸಿದರು.

ತಿರುವನಂತಪುರದಿಂದ ಹೆಲಿಕಾಪ್ಟರ್‌ನಲ್ಲಿ ಕನ್ಯಾಕುಮಾರಿಗೆ ಆಗಮಿಸಿದ ಮೋದಿ ಭಗವತಿ ಅಮ್ಮನ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಆನಂತರ ಫೆಗ್ರಿ ದೋಣಿಯ ಮೂಲಕ ವಿವೇಕಾನಂದ ಸ್ಮಾರಕವನ್ನು ತಲುಪಿ, ಧ್ಯಾನವನ್ನು ಆರಂಭಿಸಿದರು. ಜೂನ್ 1ರವರೆಗೆ ಧ್ಯಾನವು ಮುಂದುವರಿಯಲಿದೆ.

ಧೋತಿ ಹಾಗೂ ಬಿಳಿ ಶಾಲು ಧರಿಸಿದ ಮೋದಿ ಅವರು ಧ್ಯಾನವನ್ನು ಆರಂಭಿಸುವ ಮುನ್ನ ಧ್ಯಾನ ಮಂಟಪದ ಮೆಟ್ಟಲುಗಳಲ್ಲಿ ಕುಳಿತು ಕೆಲ ಸಮಯ ಕಳೆದರು.

Advertisements

ಜೂನ್ 1ರಂದು ಮೋದಿ ಅವರು ವಿವೇಕಾನಂದ ಸ್ಮಾರಕದಿಂದ ನಿರ್ಗಮಿಸುವ ಮುನ್ನ ಸಮೀಪದಲ್ಲೇ ಇರುವ ತಿರುವಳ್ಳುವ‌ರ್ ಪ್ರತಿಮೆ ಇರುವ ಸ್ಥಳಕ್ಕೂ ಭೇಟಿ ನೀಡಲಿದ್ದಾರೆ. ವಿವೇಕಾನಂದ ಸ್ಮಾರಕ ಹಾಗೂ 133 ಅಡಿ ಎತ್ತರದ ತಿರುವಳ್ಳುವ‌ರ್ ವಿಗ್ರಹವನ್ನು ಎರಡು ಪ್ರತ್ಯೇಕವಾದ ಪುಟ್ಟ ದ್ವೀಪಗಳಲ್ಲಿ ನಿರ್ಮಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ಕನ್ಯಾಕುಮಾರಿಯಲ್ಲಿ ಮೋದಿಯವರು ಚುನಾವಣಾ ಉದ್ದೇಶದಿಂದ ಧ್ಯಾನವನ್ನು ನಡೆಸುತ್ತಿದ್ದಾರೆಂದು ಆರೋಪಿಸಿ ತಂದೈ ಪೆರಿಯಾರ್ ದ್ರಾವಿಡ ಕಳಗಂನ ಕಾರ್ಯಕರ್ತರು ಮದುರೈನಲ್ಲಿ ಕಪ್ಪು ಬಾವುಟ ಪ್ರದರ್ಶನ ನಡೆಸಿದರು.

ಜೂನ್ 1ರ ಲೋಕಸಭಾ ಚುನಾವಣೆಯ ಅಂತಿಮ ಹಾಗೂ 7ನೇ ಹಂತದ ಚುನಾವಣೆಯ ಸಂದರ್ಭ ಮೋದಿ ಅವರ ಧ್ಯಾನ ಕಾರ್ಯಕ್ರಮವನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ತಮಿಳುನಾಡು ಕಾಂಗ್ರೆಸ್‌ ಕೂಡ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ಇದಲ್ಲದೆ ಸಾಮಾಜಿಕ ಜಾಲತಾಣ ಎಕ್ಸಲ್ಲಿ ನೆಟ್ಟಿಗರಿಂದ ಗೋ ಬ್ಯಾಕ್ ಮೋದಿ ಹ್ಯಾಶ್‌ಟ್ಯಾಗ್‌ ಪೋಸ್ಟ್‌ಗಳ ಮಹಾಪೂರವೇ ಹರಿದುಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. What about Namaz? Is it allowed or stopped till voting? There should be a limit for hypocrisy. In a Hindu rashtra whose permission is required to do meditation?

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X