ತಮಿಳುನಾಡು | 60 ವರ್ಷಗಳ ಬಳಿಕ DMKಗೆ ಗುಡ್‌ಬೈ ಹೇಳಿದ ಮುಸ್ಲಿಂ ಲೀಗ್

Date:

ತಮಿಳುನಾಡು ರಾಜಕೀಯದಲ್ಲಿ ದಶಕಗಳಿಂದ ಬೇರೂರಿದ್ದ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದೆ. ಸುಮಾರು 60 ವರ್ಷಗಳಿಂದ DMK ನೇತೃತ್ವದ ಮೈತ್ರಿಕೂಟದೊಂದಿಗೆ ಗುರುತಿಸಿಕೊಂಡಿದ್ದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML), ಇದೀಗ ಅಧಿಕೃತವಾಗಿ ಮೈತ್ರಿಕೂಟದಿಂದ ಹೊರಬಂದಿದೆ.

- Advertisement -

ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಉದಯವು ರಾಜ್ಯದ ರಾಜಕೀಯ ಲೆಕ್ಕಾಚಾರಗಳನ್ನು ಸಂಪೂರ್ಣವಾಗಿ ಬದಲಿಸುತ್ತಿದೆ. ಈ ಹಿಂದೆ DMKಗೆ ಬೆಂಬಲ ನೀಡುತ್ತಿದ್ದ ಅಲ್ಪಸಂಖ್ಯಾತ ಮತದಾರರು, ಈ ಬಾರಿ TVK ಕಡೆಗೆ ವಾಲಿದ್ದು, IUML ಮೈತ್ರಿಕೂಟ ತೊರೆಯಲು ಪ್ರಮುಖ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಪಕ್ಷದ ರಾಜ್ಯ ಸಾಮಾನ್ಯ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. DMK ಜೊತೆಗಿನ ದಶಕಗಳ ಸಂಬಂಧವನ್ನು ಕಡಿದುಕೊಳ್ಳುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂಬುದನ್ನು ನಂತರದ ಹಂತದಲ್ಲಿ ತೀರ್ಮಾನಿಸಲಾಗುವುದು ಎಂದು ಪಕ್ಷ ತಿಳಿಸಿದೆ.

ಈ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ IUML ರಾಷ್ಟ್ರೀಯ ಅಧ್ಯಕ್ಷ ಕೆ ಎಂ ಖಾದರ್ ಮೊಹಿದೀನ್, “ನಾವು ಸುಮಾರು 60 ವರ್ಷಗಳ ಕಾಲ DMK ಜೊತೆಗಿದ್ದೆವು. ಆದರೆ ಈಗ ರಾಜಕೀಯ ಸನ್ನಿವೇಶಗಳು ಬದಲಾಗಿವೆ. ದ್ರಾವಿಡ ಮಾದರಿಯ ಆಡಳಿತ ಮುಂದುವರಿಯುತ್ತದೆ ಎಂದು ನಾವು ಭಾವಿಸಿದ್ದೆವು, ಆದರೆ ಜನರ ತೀರ್ಪು ಭಿನ್ನವಾಗಿತ್ತು. TVK ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದಿದ್ದಾಗ, ರಾಜ್ಯದಲ್ಲಿ ರಾಜಕೀಯ ಸ್ಥಿರತೆ ಕಾಪಾಡಲು ಮತ್ತು ರಾಷ್ಟ್ರಪತಿ ಆಳ್ವಿಕೆಯನ್ನು ತಪ್ಪಿಸಲು ನಾವು TVK ಸರ್ಕಾರಕ್ಕೆ ಬೆಂಬಲ ನೀಡಿದ್ದೆವು,” ಎಂದು ವಿವರಿಸಿದರು.

2026ರ ವಿಧಾನಸಭಾ ಚುನಾವಣೆಯಲ್ಲಿ IUML, DMK ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿ ಎರಡು ಸ್ಥಾನಗಳನ್ನು ಗೆದ್ದಿತ್ತು. ಆದರೆ ಫಲಿತಾಂಶದ ನಂತರ, ಪಕ್ಷವು TVK ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿ, ಸಚಿವ ಸಂಪುಟದಲ್ಲೂ ಸ್ಥಾನ ಪಡೆದಿತ್ತು.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೊಂದು ಬೆಲೆ ಏರಿಕೆ ಬಿಸಿ; ಸರ್ಕಾರಿ ಬಸ್ ಟಿಕೆಟ್ ದರ ಏರಿಕೆಗೆ ಪ್ರಸ್ತಾವನೆ

IUML ನಿರ್ಗಮನವು DMKಗೆ ದೊಡ್ಡ ಆಘಾತವಾಗಿದೆ. ಈಗಾಗಲೇ ಕಾಂಗ್ರೆಸ್, ಎಡಪಕ್ಷಗಳು ಮತ್ತು ವಿಡುತಲೈ ಚಿರುತೈಗಳ ಕಚ್ಚಿ (VCK)ಗಂಳು DMK ಮೈತ್ರಿಕೂಟದಿಂದ ಹೊರಬಂದಿವೆ. ಸದ್ಯ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK) ಕೂಡ ಮೈತ್ರಿಯಿಂದ ಹೊರಬರುವ ಬಗ್ಗೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

ಈ ರಾಜಕೀಯ ಬೆಳವಣಿಗೆಗಳು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮಿಳುನಾಡಿನ ರಾಜಕೀಯ ಚಿತ್ರಣವನ್ನು ಹೇಗೆ ಬದಲಿಸಲಿದೆ ಎಂಬುದು ಕುತೂಹಲ ಮೂಡಿಸಿದೆ. DMK ನಾಯಕಿ ಕನಿಮೊಳಿ ಅವರು ಪಕ್ಷದ ತಳಮಟ್ಟದ ಸಂಘಟನೆ ಬಲಪಡಿಸುವಂತೆ ಇತ್ತೀಚೆಗೆ ಕಾರ್ಯಕರ್ತರಿಗೆ ಕರೆ ನೀಡಿದ್ದು, ಈ ಬೆಳವಣಿಗೆಯನ್ನು ಅವರು ಮೊದಲೇ ಊಹಿಸಿದ್ದರು ಎಂಬುದು ಸ್ಪಷ್ಟವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು...

ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ...