ತಮಿಳುನಾಡು | ಹಾಲಿ ಸರ್ಕಾರದಿಂದ ರಾಜ್ಯ ಮಾದಕ ದ್ರವ್ಯಗಳ ತಾಣವಾಗಿದೆ : ಪಳನಿಸ್ವಾಮಿ ಟೀಕೆ

Date:

ತಮಿಳುನಾಡಿನ ಹಾಲಿ ಡಿಎಂಕೆ ಸರ್ಕಾರ ರಾಜ್ಯವನ್ನು ಮಾದಕ ದ್ರವ್ಯಗಳ ತಾಣವನ್ನಾಗಿ ಮಾಡಿದೆ ಎಂದು ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ (ಇಪಿಎಸ್) ಟೀಕಿಸಿದ್ದಾರೆ.

- Advertisement -

ಸಿಎಂ ಎಂ.ಕೆ. ಸ್ಟಾಲಿನ್ ನೇತೃತ್ವದ ಸರ್ಕಾರ ಜನಸಾಮಾನ್ಯರನ್ನು ರಕ್ಷಿಸುತ್ತಿದೆಯೇ ಅಥವಾ ಸಮಾಜವಿರೋಧಿ ಶಕ್ತಿಗಳಿಗೆ ಉತ್ತೇಜಿಸುತ್ತಿದೆಯೇ ಎನ್ನುವ ಸಂಶಯ ವ್ಯಕ್ತವಾಗುತ್ತಿದೆ ಎಂದವರು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

2021ರಲ್ಲಿ ಸ್ಟಾಲಿನ್ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯದಲ್ಲಿ ಗಾಂಜಾ, ಅಕ್ರಮ ಮದ್ಯ ಮಾರಾಟ ಹಾಗೂ ಡ್ರಗ್ ಮಾಫಿಯಾ ಏರಿಕೆಯಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕೂಡ ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ಮಾಧ್ಯಮ ವರದಿಗಳಿಂದ ಸಾಬೀತಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕುಸಿತ:

ಕಳೆದ ಐದು ವರ್ಷಗಳ ಡಿಎಂಕೆ ಆಡಳಿತಾವಧಿಯಲ್ಲಿ ಸುಮಾರು 30 ಲಾಕಪ್ ಸಾವುಗಳು ನಡೆದಿವೆ.

ಕಳೆದ ಎರಡು ತಿಂಗಳಲ್ಲೇ ನಾಲ್ವರು ದಲಿತ ಯುವಕರು ಪೊಲೀಸ್ ವಶದಲ್ಲಿ ಸಾವನ್ನಪ್ಪಿರುವುದು ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳು ಹಿಂದೆಂದೂ ಕಾಣದ ರೀತಿಯಲ್ಲಿ ಹೆಚ್ಚಿವೆ ಎಂದು ಅವರು ಆರೋಪ ಹೊರಿಸಿದ್ದಾರೆ.

ಜನವಿರೋಧಿ ಆಡಳಿತದಿಂದ ರಾಜ್ಯವನ್ನು ಮುಕ್ತಗೊಳಿಸಬೇಕಾದ ಸಮಯ ಬಂದಿದೆ. ಮುಂಬರುವ ದಿನಗಳಲ್ಲಿ ಈ ಅಸಮರ್ಥ ಸರ್ಕಾರವನ್ನು ಕಿತ್ತೊಗೆಯುವ ಮೂಲಕ ಶಾಂತಿ ಮತ್ತು ಸುರಕ್ಷತೆಯನ್ನು ಮರುಸ್ಥಾಪಿಸಲು ಜನರು ಕೈಜೋಡಿಸಬೇಕು ಎಂದು ಜನತೆಗೆ ಕರೆ ನೀಡಿದ್ದಾರೆ.

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...