ಅತ್ಯಾಚಾರ ಪ್ರಕರಣ: ‘ತೆಹಲ್ಕಾ’ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಜೈಲು ಶಿಕ್ಷೆ

Date:

ತಮ್ಮ ಕಿರಿಯ ಸಹೋದ್ಯೋಗಿಯ ಮೇಲೆ ಅತ್ಯಾಚಾರವೆಸಗಿದ 13 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ತೆಹಲ್ಕಾ’ ನಿಯತಕಾಲಿಕೆಯ ಸಂಸ್ಥಾಪಕ ತರುಣ್ ತೇಜ್‌ಪಾಲ್ ಅವರಿಗೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. 2021ರಲ್ಲಿ ವಿಚಾರಣಾ ನ್ಯಾಯಾಲಯವು ತೇಜ್‌ಪಾಲ್ ಅವರನ್ನು ದೋಷಮುಕ್ತಗೊಳಿಸಿ ನೀಡಿದ್ದ ತೀರ್ಪನ್ನು ರದ್ದುಗೊಳಿಸಿರುವ ಹೈಕೋರ್ಟ್, ಮುಂದಿನ ಎರಡು ವಾರಗಳೊಳಗೆ ಗೋವಾ ಪೊಲೀಸರ ಮುಂದೆ ಶರಣಾಗುವಂತೆ ಅವರಿಗೆ ಸೂಚಿಸಿದೆ. ಈ ತೀರ್ಪಿನ ಬೆನ್ನಲ್ಲೇ ತೇಜ್‌ಪಾಲ್ ಅವರು ಶಿಕ್ಷೆಯ ಆದೇಶಕ್ಕೆ ತಡೆಯಾಜ್ಞೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -

ಈ ಪ್ರಕರಣವು ನವೆಂಬರ್ 2023ರಂದು ನಡೆದಿದ್ದು, ಗೋವಾದ ಬಂಬೋಲಿಮ್‌ನಲ್ಲಿರುವ ಗ್ರ್ಯಾಂಡ್ ಹಯಾತ್ ರೆಸಾರ್ಟ್‌ನಲ್ಲಿ ಆಯೋಜಿಸಲಾಗಿದ್ದ ‘ಥಿಂಕ್‌ಫೆಸ್ಟ್’ (ThinkFest) ಕಾರ್ಯಕ್ರಮದ ವೇಳೆ, ತೇಜ್‌ಪಾಲ್ ಅವರು ಲಿಫ್ಟ್‌ನಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತೆಹಲ್ಕಾದ ಮಾಜಿ ಉದ್ಯೋಗಿಯೊಬ್ಬರು ಆರೋಪಿಸಿದ್ದರು. ಈ ಸಂಬಂಧ ನವೆಂಬರ್ ೩೦, ೨೦೧೩ರಂದು ತೇಜ್‌ಪಾಲ್ ಅವರನ್ನು ಬಂಧಿಸಲಾಗಿತ್ತು. ತದನಂತರ, ಒಂದು ವರ್ಷದೊಳಗೆ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನ್ಯಾಯಮೂರ್ತಿಗಳಾದ ಡಾ. ನೀಲಾ ಗೋಖಲೆ ಮತ್ತು ಅಮಿತ್ ಜಮ್ಸಂಡೇಕರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ನಂಬಿಕೆ ಅಥವಾ ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಯಿಂದ ಅತ್ಯಾಚಾರವೆಸಗಿದ ಆರೋಪದಡಿ (ಐಪಿಸಿ ಸೆಕ್ಷನ್ 376(2)(f) ಮತ್ತು 376(2)(k)) ತಲಾ ೧೦ ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ ರೂ. ೫ ಲಕ್ಷ ದಂಡ ವಿಧಿಸಲಾಗಿದೆ. ಅಲ್ಲದೆ, ಲೈಂಗಿಕ ಕಿರುಕುಳ ಮತ್ತು ಮಹಿಳೆಯ ಮೇಲಿನ ಹಲ್ಲೆಗೆ ಸಂಬಂಧಿಸಿದ ಸೆಕ್ಷನ್‌ಗಳಾದ 354, 354A, ಮತ್ತು 354B ಅಡಿಯಲ್ಲಿ ಕ್ರಮವಾಗಿ 1 ವರ್ಷ (ರೂ. 10,000 ದಂಡ), ಮತ್ತೊಂದು 1 ವರ್ಷ ಹಾಗೂ 3 ವರ್ಷಗಳ ಶಿಕ್ಷೆಯನ್ನು ಪ್ರಕಟಿಸಲಾಗಿದೆ. ಈ ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ನಡೆಯಲಿರುವುದರಿಂದ, ತೇಜ್‌ಪಾಲ್ ಅವರು ಗರಿಷ್ಠ 10 ವರ್ಷಗಳ ಕಾಲ ಜೈಲುವಾಸ ಅನುಭವಿಸಬೇಕಾಗುತ್ತದೆ.

ನ್ಯಾಯಾಲಯದಲ್ಲಿ ಹಾಜರಿದ್ದ 62 ವರ್ಷದ ತೇಜ್‌ಪಾಲ್, ತಾನೇ ಈ ಪ್ರಕರಣದ ಸಂತ್ರಸ್ತನಾಗಿದ್ದು, ತನಗೆ ವಯಸ್ಸಾಗಿರುವುದರಿಂದ ಮತ್ತು ಪತ್ನಿ ಇರುವುದರಿಂದ ಮೃದು ಧೋರಣೆ ತೋರುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಎಂಟು ವಾರಗಳ ಕಾಲಾವಕಾಶ ನೀಡುವಂತೆ ಅವರ ಪರ ವಕೀಲ ಅಬಾದ್ ಪೋಂಡಾ ಕೋರಿದರು ಹಾಗೂ ಸಂತ್ರಸ್ತೆಯು 1 ಲಕ್ಷ ರೂ. ಫೆಲೋಶಿಪ್ ಪಡೆಯುವ ಉದ್ದೇಶದಿಂದ ಈ ಕಥೆ ಕಟ್ಟಿದ್ದಾರೆ ಎಂದು ವಾದಿಸಿದರು.

ಆದರೆ, ತೇಜ್‌ಪಾಲ್ ಅವರ ಮನವಿಯನ್ನು ಸರ್ಕಾರದ ಪರ ವಕೀಲ (ಸಾಲಿಸಿಟರ್ ಜನರಲ್) ತುಷಾರ್ ಮೆಹ್ತಾ ಅವರು ತೀವ್ರವಾಗಿ ವಿರೋಧಿಸಿದರು. ಆರೋಪಿಯು ಸಂತ್ರಸ್ತೆಗೆ ತಂದೆಯ ಸಮಾನರಾಗಿದ್ದು, ಮಗಳ ವಯಸ್ಸಿನ ಯುವತಿಯ ಮೇಲೆ ಈ ಕೃತ್ಯವೆಸಗಿದ್ದಾರೆ ಎಂದು ವಾದಿಸಿದ ಅವರು, ಮಹಿಳೆ ‘ಬೇಡ’ ಎಂದರೆ ಅದರ ಅರ್ಥ ಬೇಡ ಎಂದೇ ಆಗಿದೆ ಎಂಬ ಸ್ಪಷ್ಟ ಸಂದೇಶವನ್ನು ಸಮಾಜಕ್ಕೆ ರವಾನಿಸಲು ಇದೊಂದು ಕಠಿಣ ಉದಾಹರಣೆಯಾಗಬೇಕು ಎಂದರು. ಹಿಂದಿನ ವಿಚಾರಣಾ ನ್ಯಾಯಾಲಯವು ಸಂತ್ರಸ್ತೆಯ ನಡವಳಿಕೆಯನ್ನು ಮಾತ್ರ ವಿಶ್ಲೇಷಿಸಿತ್ತೇ ಹೊರತು, ಘಟನೆಯ ಬಳಿಕ ತೇಜ್‌ಪಾಲ್ ಕಳುಹಿಸಿದ್ದ ‘ಕ್ಷಮೆಯಾಚನೆಯ ಇ-ಮೇಲ್’ ಅನ್ನು ಸಾಕ್ಷ್ಯವಾಗಿ ಪರಿಗಣಿಸಿರಲಿಲ್ಲ ಎಂದು ಮೆಹ್ತಾ ಅವರು ಹೈಕೋರ್ಟ್ ಗಮನಕ್ಕೆ ತಂದರು. ಈ ಎಲ್ಲ ವಾದಗಳನ್ನು ಪುರಸ್ಕರಿಸಿದ ಹೈಕೋರ್ಟ್ ತೇಜ್‌ಪಾಲ್ ಅವರನ್ನು ದೋಷಿ ಎಂದು ತೀರ್ಮಾನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...