ಶಿಕ್ಷಕನ ಕ್ರೌರ್ಯ; ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Date:

Advertisements

ಶಾಲೆಯಲ್ಲಿ ಶಿಕ್ಷಕರೊಬ್ಬರು ಕೋಲಿನಿಂದ ಥಳಿಸಿದ್ದರ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬ ಎಡಗಣ್ಣಿನ ದೃಷ್ಟಿ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.

ಆದಿತ್ಯ ಕುಶ್ವಾಹ ಎಂಬ ಬಾಲಕನಿಗೆ ಎರಡು ಬಾರಿ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದರೂ, ಆತನ ದೃಷ್ಟಿ ಮರಳಿ ಬಂದಿಲ್ಲ. ಆತನ ತಾಯಿ ನ್ಯಾಯಕ್ಕಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮೊರೆ ಹೋಗಿದ್ದಾರೆ. ಶಿಕ್ಷಕ ಶೈಲೇಂದ್ರ ತಿವಾರಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಮಾರ್ಚ್ 9ರಂದು ಘಟನೆ ನಡೆದಿದ್ದು, ಘಟನೆ ಬಗ್ಗೆ ವಿದ್ಯಾರ್ಥಿ ವಿವರಿಸಿದ್ದಾನೆ. “ಶಾಲೆಯ ಹೊರಗೆ ಆಡುತ್ತಿದ್ದ ಕೆಲವು ವಿದ್ಯಾರ್ಥಿಗಳನ್ನು ಕರೆಯಲು ಶಿಕ್ಷಕರು ಹೇಳಿದರು. ಆದರೆ, ಕರೆದರೂ ವಿದ್ಯಾರ್ಥಿಗಳು ಬರಲಿಲ್ಲ. ಅವರು ಬಾರದ ಬಗ್ಗೆ ಶಿಕ್ಷಕರಿಗೆ ತಿಳಿಸಿದೆ. ಸಿಟ್ಟಾದ ಶಿಕ್ಷಕ, ನನಗೆ ದೊಣ್ಣೆಯಿಂದ ಹೊಡೆದರು. ಪೆಟ್ಟಾದ ಬಳಿಕ ಚಿಕಿತ್ಸೆಗಾಗಿ ಕರೆದೋಯ್ದರು. ‘ಐ ಡ್ರಾಪ್ಸ್’ ಹಾಕಿ ತರಗತಿಯಲ್ಲಿ ಮಲಗಿಸಿದರು. ಈಗ, ನನಗೆ ಎಡಗಣ್ಣಿನ ದೃಷ್ಟಿ ಕಾಣಿಸುತ್ತಿಲ್ಲ” ಎಂದು ತಿಳಿಸಿದ್ದಾರೆ.

Advertisements

ಆದಿತ್ಯನ ತಾಯಿ ಶ್ರೀಮತಿ ಮಾತನಾಡಿ, “ನನ್ನ ಮಗ ನೇವಾರಿಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಾನೆ. ಅತನ ಮೇಲೆ ಶಿಕ್ಷಕ ದೊಣ್ಣೆ ಎಸೆದಿದ್ದಾರೆ. ಅದು ಬಾಲಕನ ಕಣ್ಣಿಗೆ ಬಿದ್ದು, ರಕ್ತಸ್ರಾವವಾಗಿದೆ. ನಾವು ಪೊಲೀಸರಿಗೆ ದೂರು ನೀಡಲು ತೆರಳಿದ್ದೆವು. ಆದರೆ ಅವರು ದೂರು ದಾಖಲಿಕೊಳ್ಳಲಿಲ್ಲ. ಶಿಕ್ಷಣ ಇಲಾಖೆಯ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಈ ಮಧ್ಯೆ, ಪ್ರಕರಣವನ್ನು ಮುಚ್ಚಿಹಾಕಲು ಆರೋಪಿ ಶಿಕ್ಷಕ, ಬಾಲಕನ ಕುಟುಂಬಕ್ಕೆ 10 ಲಕ್ಷ ರೂ. ನೀಡುವ ಆಮಿಷವೊಡ್ಡಿದ್ದರು. ಆದರೆ, ನೀಡಲು ಮುಂದಾದರು, ಆದರೆ ಅವರು ನಿರಾಕರಿಸಿದರು.

ಮಕ್ಕಳ ಕಲ್ಯಾಣ ಸಮಿತಿಯ ಮಧ್ಯಪ್ರವೇಶದ ನಂತರ, ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದಕ್ಕೆ ಸಂಬಂಧಿಸಿದ ಸೆಕ್ಷನ್ ಅಡಿಯಲ್ಲಿ ಶಿಕ್ಷಕನ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿ ಕಮಲೇಂದ್ರ ಕುಶ್ವಾಹ ಮಾತನಾಡಿ, ಸ್ಥಳೀಯ ಶಿಕ್ಷಣಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಘಟನೆಯ ಬಗ್ಗೆ ಗಮನಹರಿಸಿದ್ದು, ವರದಿ ನೀಡುವಂತೆ ಬ್ಲಾಕ್ ಶಿಕ್ಷಣಾಧಿಕಾರಿಗೆ ತಿಳಿಸಲಾಗಿದ್ದು, ವರದಿ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X