ಅದಾನಿ ಸಮೂಹ ಘೋಷಿಸಿದ್ದ 100 ಕೋಟಿ ರೂ. ದೇಣಿಗೆ ತಿರಸ್ಕರಿಸಿದ ತೆಲಂಗಾಣ ಸರ್ಕಾರ

Date:

Advertisements

ಯಂಗ್ ಇಂಡಿಯಾ ಕೌಶಲಾಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಅದಾನಿ ಸಮೂಹ ಘೋಷಿಸಿದ್ದ 100 ಕೋಟಿ ರೂಪಾಯಿ ದೇಣಿಗೆಯನ್ನು ತೆಲಂಗಾಣ ಸರ್ಕಾರ ತಿರಸ್ಕರಿಸಿದೆ.

ಅಮೆರಿಕದಲ್ಲಿ ಭಾರತೀಯ ಬಿಲಿಯನೇರ್ ಗೌತಮ್ ಅದಾನಿ ವಿರುದ್ಧ ಲಂಚದ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆ ಅದಾನಿ ಗ್ರೂಪ್‌ನಲ್ಲಿ ತಮ್ಮ ಸರ್ಕಾರ ಯಾವುದೇ ಹಣ ಸ್ವೀಕರಿಸುವುದಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಏನಿದು ಅದಾನಿ ಲಂಚದ ಹಗರಣ: ಇಲ್ಲಿದೆ ಸಂಪೂರ್ಣ ಮಾಹಿತಿ

Advertisements

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇವಂತ್ ರೆಡ್ಡಿ, “ನನ್ನ ಅಥವಾ ನಮ್ಮ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಯಾವುದೇ ಚರ್ಚೆಯಲ್ಲಿ, ಯಾವುದೇ ಸಂದರ್ಭದಲ್ಲಿ ತೊಡಗಿಕೊಳ್ಳಲು ನಾನು ಮತ್ತು ನನ್ನ ಸಚಿವ ಸಂಪುಟದ ಸದಸ್ಯರುಗಳು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

“ಯಾವುದೇ ಚರ್ಚೆಯಲ್ಲಿ ಸಿಲುಕುವುದು ಬೇಡವೆಂದು ನಮ್ಮ ಸರ್ಕಾರದ ಪರವಾಗಿ ನಮ್ಮ ಅಧಿಕಾರಿ ಜಯೇಶ್ ರಂಜನ್ ಅದಾನಿಗೆ ಪತ್ರ ಬರೆದಿದ್ದಾರೆ. ಪ್ರಸ್ತುತ ವಿವಾದಗಳು ಇರುವಾಗ ತೆಲಂಗಾಣ ಸರ್ಕಾರವು ಅದಾನಿ ಸಂಸ್ಥೆಯಿಂದ 100 ಕೋಟಿ ರೂಪಾಯಿ ದೇಣಿಗೆ ಪಡೆಯಲು ಸಿದ್ಧವಿಲ್ಲ ಎಂದು ತಿಳಿಸಿದ್ದೇವೆ” ಎಂದರು.

ತೆಲಂಗಾಣ ಸರ್ಕಾರದ ವಿಶೇಷ ಮುಖ್ಯ ಕಾರ್ಯದರ್ಶಿ ಜಯೇಶ್ ರಂಜನ್ ಅವರು ಅದಾನಿ ಫೌಂಡೇಶನ್‌ನ ಅಧ್ಯಕ್ಷೆ ಪ್ರೀತಿ ಅದಾನಿ ಅವರಿಗೆ ಪತ್ರವನ್ನು ಬರೆದಿದ್ದಾರೆ. ಈ ಪತ್ರದಲ್ಲಿ ವಿಶ್ವವಿದ್ಯಾಲಯವು ಇತ್ತೀಚೆಗೆ ಆದಾಯ ತೆರಿಗೆಯ ಸೆಕ್ಷನ್ 80ಜಿ ಅಡಿಯಲ್ಲಿ ವಿನಾಯಿತಿ ಪಡೆದಿದೆ ಎಂದು ಉಲ್ಲೇಖಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X