ತೆಲಂಗಾಣ ಸುರಂಗ ಕುಸಿತ: 10 ದಿನ ಕಳೆದರೂ ಪತ್ತೆಯಾಗದ 8 ಕಾರ್ಮಿಕರು

Date:

Advertisements

ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗಿ 10 ದಿನ ಕಳೆದರೂ 8 ಕಾರ್ಮಿಕರು ಪತ್ತೆಯಾಗಿಲ್ಲ.

ದೋಮಲಪೆಂಟಾ ಬಳಿಯ ಶ್ರೀಶೈಲಂ ಆಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿತ್ತು. ಈ ವೇಳೆ ಕುಸಿತದಲ್ಲಿ 8 ಮಂದಿ ಕಾರ್ಮಿಕರು ಸಿಲುಕಿದ್ದರು. ಈಗಾಗಲೇ 48 ಕಾರ್ಮಿಕರನ್ನು ರಕ್ಷಿಸಲಾಗಿದೆ.

ಈ ಕುರಿತು ಎನ್‌ಡಿಆರ್‌ಎಫ್ ಕಮಾಂಡೆಂಟ್ ವಿವಿಎನ್ ಪ್ರಸನ್ನ ಕುಮಾರ್ ಮಾತನಾಡಿ, ಸುರಂಗ ಕುಸಿತದ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಸೇರಿದಂತೆ ಉತ್ತರಾಖಂಡದ ರ‍್ಯಾಟ್ ಮೈನರ್, 300 ಸಿಬ್ಬಂದಿ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಕಳೆದ 10 ದಿನಗಳಿಂದ ಹಗಲು, ರಾತ್ರಿ ಕಾರ್ಯಾಚರಣೆ ನಡೆದಿದ್ದು, ಇಲ್ಲಿಯವರೆಗೂ ಯಾವುದೇ ಕಾರ್ಮಿಕರು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಹೆಸರಲ್ಲಿ ಬಿಜೆಪಿ ಅಧಿಕ ಪ್ರಸಂಗ

ಸದ್ಯ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ಅತ್ಯುತ್ತಮ ಪ್ರಯತ್ನ ಮಾಡುತ್ತಿದೆ. ಇನ್ನೂ ಹೈದರಾಬಾದ್‌ನ ರಾಷ್ಟ್ರೀಯ ಭೂಭೌತ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಸುರಂಗದೊಳಗೆ ನೆಲಕ್ಕೆ ನುಗ್ಗುವ ರಾಡಾರ್ ಸಮೀಕ್ಷೆಯನ್ನು ನಡೆಸಿದ್ದಾರೆ. ಸಮೀಕ್ಷೆ ಬಳಿಕ ಗುರುತಿಸಿದ ಸ್ಥಳಗಳನ್ನು ರಕ್ಷಣಾ ತಂಡಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನೂ ಘಟನಾ ಸ್ಥಳಕ್ಕೆ ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಭಾನುವಾರ ಭೇಟಿ ನೀಡಿ, ಸಿಲುಕಿಕೊಂಡಿರುವ ಕಾರ್ಮಿಕರ ಮಾಹಿತಿ ಪಡೆದುಕೊಂಡರು ಮತ್ತು ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಬೆಂಬಲ ನೀಡುವ ಕುರಿತು ತಿಳಿಸಿದರು.

ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು 8 ಮಂದಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿತ್ತು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X