ಮಹಾರಾಷ್ಟ್ರ | ಭೀಕರ ಬಸ್‌ ದುರಂತ; ಮೂವರು ಮಕ್ಕಳು ಸೇರಿ 25 ಜನ ಸಜೀವ ದಹನ

Date:

  • ಮಹಾರಾಷ್ಟ್ರದ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಬಸ್ ದುರಂತ
  • ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ, ರಾಜ್ಯ ಸರ್ಕಾರದಿಂದ ₹5 ಲಕ್ಷ ಪರಿಹಾರ

ಮಹಾರಾಷ್ಟ್ರದಲ್ಲಿ ಶನಿವಾರ ಬೆಳಗ್ಗೆ ಭೀಕರ ದುರಂತ ಸಂಭವಿಸಿದ್ದು, ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ 25 ಜನ ಸಾವನ್ನಪ್ಪಿದ್ದಾರೆ.

- Advertisement -

ಈ ಬಸ್‌ನಲ್ಲಿ ಒಟ್ಟು 32 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 25 ಜನ ಸಾವನ್ನಪ್ಪಿದ್ದು, ಶವಗಳನ್ನು ಹೊರತೆಗೆಯಲಾಗಿದೆ. 6 ರಿಂದ 8 ಜನ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಿವೈಎಸ್ಪಿ ಬಾಬುರಾವ್ ಮಹಾಮುನಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ನಾಗ್ಪುರದಿಂದ ಪುಣೆಗೆ ಹೋಗುತ್ತಿದ್ದ ಈ ಬಸ್ ಸಮೃದ್ಧಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ, ಮುಂಜಾನೆ 2 ಗಂಟೆಗೆ ಭೀಕರ ಅಪಘಾತ ಸಂಭವಿಸಿದೆ. ಟೈರ್ ಸ್ಪೋಟಗೊಂಡ ಬಳಿಕ ಬಸ್‌ ಹೆದ್ದಾರಿಯಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ನಂತರ ಬಸ್‌ನ ಡೀಸೆಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿಕೊಂಡಿದೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಬಸ್‌ನಲ್ಲಿ ಇಬ್ಬರು ಚಾಲಕರಿದ್ದು, ಈ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. ಟೈರ್ ಒಡೆದು ಬಸ್‌ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ” ಎಂದು ಗಾಯಾಳು ಬಸ್‌ ಚಾಲಕ ಹೇಳಿದ್ದಾರೆ.

ಚಾಲಕ ನಿದ್ರೆಗೆ ಜಾರಿದ ಕಾರಣ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ವರದಿ ತಿಳಿಸಿದೆ.

ಕೇಂದ್ರದಿಂದ ₹2 ಲಕ್ಷ, ರಾಜ್ಯ ಸರ್ಕಾರದಿಂದ ₹5 ಲಕ್ಷ ಪರಿಹಾರ

ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತಲಾ ₹5 ಲಕ್ಷ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಲಾ ₹2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

“ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಬಸ್‌ನ ಭೀಕರ ಅಪಘಾತ ಅತ್ಯಂತ ದುಃಖ ತಂದಿದೆ. ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದೇನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ವಿದ್ಯಾರ್ಥಿಗಳಿಗೆ ಜುಲೈ 15ರವರೆಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ

ಗಣ್ಯರ ಕಂಬನಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, “ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತ ತೀವ್ರ ದುಃಖ ತಂದಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಲಿ. ಗಾಯಾಳುಗಳಿಗೆ ಸ್ಥಳೀಯ ಆಡಳಿತ ಮಂಡಳಿ ನೆರವು ನೀಡುತ್ತಿದೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ನೀಡಲಾಗುವುದು” ಎಂದು ತಿಳಿಸಿದ್ದಾರೆ.

“ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 25 ಮಂದಿ ಸಜೀವ ದಹನವಾಗಿರುವ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...