ಬರೆದಿಟ್ಟುಕೊಳ್ಳಿ, ಯುಪಿ ಸಹಿತ ದೇಶದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಬಿರುಗಾಳಿ ಬರಲಿದೆ: ರಾಹುಲ್ ಗಾಂಧಿ

Date:

Advertisements

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಕನೌಜ್‌ನಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬರೆದಿಟ್ಟುಕೊಳ್ಳಿ, ಉತ್ತರ ಪ್ರದೇಶ ಸಹಿತ ದೇಶದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಬಿರುಗಾಳಿ ಬರಲಿದೆ” ಎಂದು ಭವಿಷ್ಯ ನುಡಿದಿದ್ದಾರೆ.

ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಆಪ್ ಮುಖಂಡ ಸಂಜಯ್ ಸಿಂಗ್ ಸೇರಿದಂತೆ ಹಲವರು ಭಾಗವಹಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಾನು ನಿಮಗೆ ಬರೆದುಕೊಡುತ್ತೇನೆ. ಉತ್ತರ ಪ್ರದೇಶದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಬಿರುಗಾಳಿ ಬರಲಿದೆ. ದೇಶದಲ್ಲೇ ಬಿಜೆಪಿಗೆ ಹೀನಾಯ ಸೋಲು ಉತ್ತರ ಪ್ರದೇಶದಲ್ಲಿ ಆಗಲಿದೆ. ಉತ್ತರ ಪ್ರದೇಶದ ಸಹಿತ ದೇಶದಲ್ಲಿ ಬದಲಾವಣೆಯ ಮಾಡುವ ನಿರ್ಧಾರವನ್ನು ಜನರು ಮಾಡಿದ್ದಾರೆ. ಹಾಗಾಗಿ, ‘ಇಂಡಿಯಾ’ ಮೈತ್ರಿಕೂಟದ ಬಿರುಗಾಳಿ ಬರಲಿದೆ” ಎಂದು ಹೇಳಿದರು.

“ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಂಬಾನಿ-ಅದಾನಿಯವರ ಹೆಸರು ಹೇಳಲು ಹಿಂಜರಿಯುತ್ತಿದ್ದರು. ಈಗ ಅವರಿಗೆ ಭಯ ಶುರುವಾಗಿದೆ. ಹಾಗಾಗಿ, ಅವರು ತಮ್ಮ ಮಿತ್ರರಿಬ್ಬರ ಹೆಸರನ್ನು ಎತ್ತಿದ್ದಾರೆ. ನನ್ನನ್ನು ಇಂಡಿಯಾ ಮೈತ್ರಿಕೂಟದವರು ಸುತ್ತುವರಿದಿದ್ದಾರೆ. ಹಾಗಾಗಿ, ನನ್ನನ್ನು ಕಾಪಾಡಿ ಎಂದು ಬೇಡಿಕೊಳ್ಳುತ್ತಿದ್ದಾರೆ. ನಾನು ಸೋಲುತ್ತಿದ್ದೇನೆ. ಅದಾನಿ, ಅಂಬಾನಿ ನನ್ನನ್ನು ರಕ್ಷಿಸಿ ಎಂದು ಕೂಗುತ್ತಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

Advertisements

“ನರೇಂದ್ರ ಮೋದಿಯವರು ಈ ದೇಶದ ಪ್ರಧಾನಿಯಾಗಿ ಆಯ್ಕೆಯಾಗುವುದಿಲ್ಲ. ಈ ಬಗ್ಗೆ ಗ್ಯಾರಂಟಿ ಕೊಡಬಲ್ಲೆ. ಕೊರೋನಾ ಬಗ್ಗೆ ಈ ಹಿಂದೆ ನಾನು ಹೇಳಿದ್ದು ಈಗ ಸತ್ಯವಾಗಿದೆ. ಅದೇ ರೀತಿ ಇದು ಕೂಡ ಸತ್ಯವಾಗಲಿದೆ. ಮೋದಿಯವರು ಈ ದೇಶದ ಪ್ರಧಾನಿಯಾಗುವುದಿಲ್ಲ” ಎಂದು ಮತ್ತೊಮ್ಮೆ ರಾಹುಲ್ ಗಾಂಧಿ ಆವೇಶಭರಿತರಾಗಿ ಹೇಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. if bjp keep winning by manupulating AVM machine all these year , then how will congress (INDIA alliance ) expect a victory ? why they are so confident ?

  2. Even if the I N D I A alliance gets a majority and forms a government, will it sustain for 5 years? Can India afford an unstable government?”

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X