ಕೋವಿಡ್ ಲಸಿಕೆಗೂ ಹಠಾತ್ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ: ಆರೋಗ್ಯ ಸಚಿವಾಲಯ

Date:

Advertisements

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ನಡೆಸಿದ ಅಧ್ಯಯನಗಳ ವರದಿಯು COVID-19 ಲಸಿಕೆ ಮತ್ತು ದೇಶದಲ್ಲಿನ ಹಠಾತ್ ಸಾವುಗಳಿಗೂ ಯಾವುದೇ ನೇರ ಸಂಬಂಧವಿಲ್ಲ ಎಂದು ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ಕಳೆದ ಮೂರ್ನಾಲ್ಕು ವರ್ಷಗಳಿಂದ ಸಂಭವಿಸುತ್ತಿರುವ ಹಠಾತ್ ಸಾವುಗಳ ಕುರಿತು ದೇಶದ ಹಲವಾರು ಸಂಸ್ಥೆಗಳ ಮೂಲಕ ತನಿಖೆ ನಡೆಸಿದ್ದೇವೆ. ಈ ಅಧ್ಯಯನಗಳು COVID-19 ಲಸಿಕೆ ಮತ್ತು ದೇಶದಲ್ಲಿನ ಹಠಾತ್ ಸಾವುಗಳ ವರದಿಗಳ ನಡುವೆ ಯಾವುದೇ ನೇರ ಸಂಬಂಧವಿಲ್ಲ ಎಂಬುದನ್ನು ನಿರ್ಣಯಿಸಿವೆ” ಎಂದು ಹೇಳಿದೆ.

“ICMR ಮತ್ತು NCDC ನಡೆಸಿದ ಅಧ್ಯಯನಗಳು ಭಾರತದಲ್ಲಿನ COVID-19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸುತ್ತವೆ. ಲಸಿಕೆಗಳ ಗಂಭೀರ ಅಡ್ಡಪರಿಣಾಮಗಳಿಗೆ ಅತ್ಯಂತ ಕಡಿಮೆ ನಿದರ್ಶನಗಳಿವೆ. ಹಠಾತ್ ಹೃದಯಘಾತ ಸಾವುಗಳು ತಳಿಶಾಸ್ತ್ರ (ಜೆನೆಟಿಕ್), ಜೀವನಶೈಲಿ, ಮೊದಲೇ ಇದ್ದ ಅನಾರೋಗ್ಯ ಪರಿಸ್ಥಿತಿ ಹಾಗೂ ಕೊರೋನಾ ನಂತರದ ಸಮಸ್ಯೆಗಳು ಕಾರಣವಾಗಿರಬಹುದು ಅಧ್ಯಯನ ತಿಳಿಸಿದೆ” ಎಂದು ಸಚಿವಾಲಯ ಹೇಳಿದೆ.

Advertisements

“ಎರಡೂ ಸಂಸ್ಥೆಗಳು ಹಠಾತ್ ಸಾವುಗಳ ಹಿಂದಿನ ಕಾರಣಗಳನ್ನು ಅರ್ಥಮಾಡಿಕೊಳ್ಳಲು ಕೆಲಸ ಮಾಡುತ್ತಿವೆ. ವಿಶೇಷವಾಗಿ 18 ರಿಂದ 45 ವರ್ಷ ವಯಸ್ಸಿನ ಯುವ ವಯಸ್ಕರ ಸಾವಿನ ಬಗ್ಗೆ ಅಧ್ಯಕ್ಷಯ ನಡೆಸುತ್ತಿವೆ. ಅದಕ್ಕಾಗಿ, ವಿಭಿನ್ನ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಂಡಿವೆ” ಎಂದು ತಿಳಿಸಿದೆ.

“ICMRನ ರಾಷ್ಟ್ರೀಯ ಸಾಂಕ್ರಾಮಿಕ ರೋಗಶಾಸ್ತ್ರ ಸಂಸ್ಥೆ (NIE) ನಡೆಸಿದ ಮೊದಲ ಅಧ್ಯಯನವು 2021ರ ಅಕ್ಟೋಬರ್‌ನಿಂದ 2023ರ ಮಾರ್ಚ್‌ವರೆಗೆ ನಡೆದಿದೆ. ಎರಡನೇ ಅಧ್ಯಯನವನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನಡೆಸಿದೆ. ಎರಡೂ ಅಧ್ಯಯನಗಳ ದತ್ತಾಂಶಗಳ ವಿಶ್ಲೇಷಣೆಯಲ್ಲಿ ಯುವಜನರು ಹೃದಯಾಘಾತ ಅಥವಾ ಮಯೋಕಾರ್ಡಿಯಲ್ ಇನ್ಫಾರ್ಕ್ಷನ್‌ನಿಂದ (MI) ಹಠಾತ್ತನೆ ಸಾವನ್ನಪ್ಪುತ್ತಿದ್ದಾರೆ. ಇವುಗಳಲ್ಲಿ ಹೆಚ್ಚಿನ ಸಾವುಗಳಿಗೆ ಜೀನೆಟಿಕ್ ಮ್ಯೂಟೇಶನ್ಸ್‌ ಸಂಭವನೀಯ ಕಾರಣವಾಗಿದೆ ಎಂಬುದನ್ನು ಸೂಚಿಸಿವೆ” ಎಂದು ಸಚಿವಾಲಯ ವಿವರಿಸಿದೆ.

“ಈ ಎರಡು ಅಧ್ಯಯನಗಳು, ಭಾರತದಲ್ಲಿನ ಯುವಜನರಲ್ಲಿ ಸಂಭವಿಸುತ್ತಿರುವ ಹಠಾತ್ ಸಾವುಗಳಲ್ಲಿ ಕೋವಿಡ್-19 ಲಸಿಕೆ ಪಾತ್ರವಿಲ್ಲ. ಲಸಿಕೆಯು ಯುವಜನರ ಸಾವುಗಳ ವಿಚಾರವಾಗಿ ಅಪಾಯವನ್ನು ಹೆಚ್ಚಿಸುವುದಿಲ್ಲ. ಆದರೆ ಆಧಾರವಾಗಿರುವ ಆರೋಗ್ಯ ಸಮಸ್ಯೆಗಳು, ಆನುವಂಶಿಕ ಪ್ರವೃತ್ತಿ ಹಾಗೂ ಅಪಾಯಕಾರಿ ಜೀವನಶೈಲಿಯ ಆಯ್ಕೆಗಳು ಈ ಸಾವುಗಳಲ್ಲಿ ಪಾತ್ರವಹಿಸುತ್ತವೆ” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X