ದುರಹಂಕಾರಿಗಳಿಗೆ ಭಗವಾನ್ ರಾಮ 241ಕ್ಕೆ ನಿಲ್ಲಿಸಿದ್ದಾನೆ: ಬಿಜೆಪಿ ವಿರುದ್ಧ ಆರ್‌ಎಸ್‌ಎಸ್‌ ನಾಯಕ ವಾಗ್ದಾಳಿ

Date:

ಬಿಜೆಪಿಯ ವಿರುದ್ಧ ಆರ್‌ಎಸ್‌ಎಸ್‌ ನಾಯಕರೊಬ್ಬರು ವಾಗ್ದಾಳಿ ನಡೆಸಿದ್ದು, ಆಡಳಿತ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಅವರ ದುರಹಂಕಾರವೇ ಕಾರಣ ಎಂದು ದೂರಿದ್ದಾರೆ.

ರಾಜಸ್ಥಾನದ ಜೈಪುರದ ಕನೋಟಾದಲ್ಲಿ ಮಾತನಾಡಿದ ಇಂದ್ರೇಶ್ ಕುಮಾರ್,ಭಗವಾನ್‌ ರಾಮನನ್ನು ಪೂಜಿಸಿದವರು ಕ್ರಮೇಣ ದುರಹಂಕಾರಿಗಳಾದರು. ದೊಡ್ಡ ಪಕ್ಷ ಎಂದು ಹೇಳಿಕೊಳ್ಳುವ ದುರಹಂಕಾರಿಗಳಾದವರನ್ನು ರಾಮ 241ಕ್ಕೆ ನಿಲ್ಲಿಸಿದ್ದಾನೆ ಎಂದು ಹೇಳಿದ್ದಾರೆ.

ಇಂದ್ರೇಶ್ ಕುಮಾರ್ ಅವರು ಆರ್‌ಎಸ್‌ಎಸ್‌ನ ರಾಷ್ಟ್ರೀಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಹುಮತ ಸಂಖ್ಯೆ ಪಡೆಯಲು ವಿಫಲರಾಗಿ 241 ಸಂಖ್ಯೆಗೆ ಸೀಮಿತವಾದ ನಂತರ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಳೆದ ಒಂದು ದಶಕದಿಂದ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಇದೇ ಸಂದರ್ಭದಲ್ಲಿ ಇಂಡಿಯಾ ಒಕ್ಕೂಟದ ವಿರುದ್ಧವು ಮಾತನಾಡಿರುವ ಇಂದ್ರೇಶ್ ಕುಮಾರ್, ರಾಮನ ಮೇಲೆ ನಂಬಿಕೆಯಿಲ್ಲದವರಿಗೆ ಅವರು ಒಟ್ಟಾದರೂ 234ಕ್ಕೆ ತಡೆದಿದ್ದಾನೆ. ದೇವರ ನ್ಯಾಯ ನೈಜವಾದುದಾಗಿದೆ ಹಾಗೂ ಸಂತಸದಾಯಕವಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಇತ್ತೀಚಿಗಷ್ಟೆ ಆಕ್ರೋಶ ಹೊರಹಾಕಿದ್ದರು. ನಿಜವಾದ ಸೇವಕರಿಗೆ ಅಹಂಕಾರವಿರುವುದಿಲ್ಲ. ಆತ ಕೆಲಸ ಮಾಡುವಾಗ ನಮ್ರತೆಯನ್ನು ಅನುಸರಿಸುತ್ತಾನೆ. ನಾನೇ ಈ ಕೆಲಸ ಮಾಡಿದೆ ಎನ್ನುವ ಅಹಂಕಾರ ಆತನಿಗಿರುವುದಿಲ್ಲ. ಅಂತಹವರನ್ನು ನಿಜವಾದ ಸೇವಕ ಎಂದು ಕರೆಯಲಾಗುತ್ತದೆ ಎಂದಿದ್ದರು.

ಈ ಹೇಳಿಕೆ ನೀಡಿದ ಕೆಲವು ದಿನಗಳ ನಂತರ ಆರ್‌ಎಸ್‌ಎಸ್‌ ನಾಯಕರು ಬಿಜೆಪಿಯನ್ನು ಟೀಕಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯ ಮಲ್ಯ- ಕಳ್ಳನೋ, ಸುಳ್ಳನೋ, ವಂಚಕನೋ ಅಥವಾ ಸಂತನೋ?

ವಿಜಯ ಮಲ್ಯ ಮೇಲಿರುವುದು ಸಾಲ ತೀರಿಸದ ಆರೋಪವೊಂದೇ ಅಲ್ಲ. ಅವರ ಮೇಲೆ...

ವಿಚಿತ್ರ-ವಿಕೃತ ಘಟನೆ: ವರದಕ್ಷಿಣೆಯಾಗಿ ‘ಕಿಡ್ನಿ’ ಕೊಡುವಂತೆ ಸೊಸೆಗೆ ಅತ್ತೆ-ಮಾವ ಕಿರುಕುಳ

ಭಾರತದಲ್ಲಿ ಮಹಿಳೆಯರ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳು ಇದ್ದರೂ, ಅತ್ಯಾಚಾರ, ಬಾಲ್ಯವಿವಾಹ ಹಾಗೂ...

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬ: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ರಾಕೆಟ್‌ನಲ್ಲಿ ಆಮ್ಲಜನಕ ಸೋರಿಕೆ, ಭಾರತದ ಶುಭಾಂಶು ಇರುವ ಅಂತರಿಕ್ಷಯಾನ ಮುಂದೂಡಿಕೆ

ತಾಂತ್ರಿಕ ದೋಷದಿಂದಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ತಂಡ ತೆರಳಬೇಕಿದ್ದ...

Download Eedina App Android / iOS

X