ನಾಗಾಲ್ಯಾಂಡ್‌ | ಭಾರೀ ಮಳೆಗೆ ಮೂವರು ಬಲಿ: ವಿಮಾನ ಹಾರಾಟ ಸ್ಥಗಿತ

Date:

Advertisements

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಗಾಲ್ಯಾಂಡ್‌ನಾದ್ಯಂತ ಪ್ರವಾಹ ಉಂಟಾಗಿದ್ದು ಮೂವರು ಬಲಿಯಾಗಿದ್ದಾರೆ. ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ದಿಮಾಪುರದಲ್ಲಿ ಮನೆಯೊಂದರಲ್ಲಿ ಮಳೆ ವೇಳೆ ವಿದ್ಯುತ್ ಅವಘಡ ಸಂಭವಿಸಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಪ್ರವಾಹದ ನೀರು ವಸತಿ ಪ್ರದೇಶಗಳಿಗೆ ನುಗ್ಗಿದ್ದು, ಎದೆಯೆತ್ತರದವರೆಗೆ ತುಂಬಿರುವ ನೀರಿನಲ್ಲೇ ಜನರು ಓಡಾಟ ನಡೆಸುತ್ತಿದ್ದಾರೆ. ಬರ್ಮಾ ಕ್ಯಾಂಪ್ ಮತ್ತು ಕುಡಾ ಗ್ರಾಮದಲ್ಲಿ ಪ್ರವಾಹ ಹೆಚ್ಚಾಗಿದೆ.

ಇದನ್ನು ಓದಿದ್ದೀರಾ? ನಾಗಾಲ್ಯಾಂಡ್‌, ಅರುಣಾಚಲದಲ್ಲಿ 6 ತಿಂಗಳು ಎಎಫ್‌ಎಸ್‌ಪಿಎ ಸ್ಥಾನಮಾನ ವಿಸ್ತರಣೆ

Advertisements

ಭಾರೀ ಮಳೆಯಿಂದಾಗಿ ರನ್‌ವೇ ಮತ್ತು ಪಾರ್ಕಿಂಗ್ ಪ್ರದೇಶಗಳು ಜಲಾವೃತವಾಗಿದ್ದು, ದಿಮಾಪುರ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಕಾರ್ಯಾಚರಣೆಯನ್ನು ಭಾನುವಾರ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ನೇರವಾಗಿ ವಿಮಾನಯಾನ ಸಂಸ್ಥೆಗಳಿಂದ ಹೆಚ್ಚಿನ ಮಾಹಿತಿಯನ್ನು ಪಡೆಯುವಂತೆ ಸೂಚಿಸಲಾಗಿದೆ. ದಿಮಾಪುರವನ್ನು ಕೊಹಿಮಾದೊಂದಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 29 ಕೂಡ ಪ್ರವಾಹದಿಂದ ತುಂಬಿದೆ.

ಭೂಕುಸಿತ ಉಂಟಾಗಿ ನಾಲ್ಕು ಪಥದ ಹೆದ್ದಾರಿಯ ಕೆಲವು ಭಾಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ವಾಹನ ಸಂಚಾರಕ್ಕೆ ತೀವ್ರ ಪರಿಣಾಮ ಬೀರಿವೆ. ದಿಮಾಪುರ, ಕೊಹಿಮಾ ಮತ್ತು ನಿಯುಲ್ಯಾಂಡ್ ಜಿಲ್ಲೆಗಳು ಹೆಚ್ಚು ಹಾನಿಗೊಳಗಾಗಿವೆ. ಸೇತುವೆಗಳು ಮುಳುಗಿದ್ದು, ಮನೆಗಳು, ಭತ್ತದ ಗದ್ದೆಗಳಿಗೆ ಹಾನಿಯಾಗಿದೆ. ನಿಯುಲ್ಯಾಂಡ್ ಜಿಲ್ಲೆಯಲ್ಲಿ, 70 ಹಳ್ಳಿಗಳು ಪ್ರವಾಹಕ್ಕೆ ಸಿಲುಕಿದ್ದು, ಜನರು ದೋಣಿ ಬಳಸಿ ಸಂಚರಿಸುತ್ತಿದ್ದಾರೆ. ಸದ್ಯ 52 ಜನರನ್ನು ರಕ್ಷಿಸಲಾಗಿದೆ.

ಇದನ್ನು ಓದಿದ್ದೀರಾ? ಇಳಿ ಹೊತ್ತಿಗೆ ತಂಪಾದ ಇಳೆ; ಗುಡುಗು-ಮಿಂಚುಗಳಿಂದ ಕೂಡಿದ ಮಳೆ

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ದಿಮಾಪುರ ಉಪ ಆಯುಕ್ತ ಡಾ. ಟಿನೋಜೋಂಗ್ಶಿ ಚಾಂಗ್, “ನಿನ್ನೆ ರಾತ್ರಿಯಿಂದ ಮತ್ತೆ ಮಳೆಯಾಗಿಲ್ಲ. ಅದರಿಂದಾಗಿ ನೀರಿನ ಮಟ್ಟ ಕ್ರಮೇಣ ಕಡಿಮೆಯಾಗಲಿದೆ. ಆದರೂ ಮುಂದಿನ ದಿನಗಳಲ್ಲಿ ಮಳೆ ಅಧಿಕವಾಗುವ ನಿರೀಕ್ಷೆಯಿರುವ ಕಾರಣ ಅಧಿಕಾರಿಗಳು ಜಾಗರೂಕರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ವಾರದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಪರಿಸ್ಥಿತಿಯನ್ನು ನಿರ್ಣಯಿಸಲು ಸ್ಥಳೀಯ ಆಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಇಂದು ಸಮನ್ವಯ ಸಭೆ ನಡೆಸಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X