ಛತ್ತೀಸ್‌ಗಢ | ಭೀಕರ ಅಪಘಾತ: ಮೂವರ ಸಾವು, ಆರು ಮಂದಿಗೆ ಗಾಯ

Date:

Advertisements

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮಂಗಳವಾರ ಛತ್ತೀಸ್‌ಗಢ ರಾಜಧಾನಿಯಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಕೆಂಡ್ರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಗದಲ್‌ಪುರದಿಂದ (ಬಸ್ತರ್) ರಾಯ್‌ಪುರಕ್ಕೆ ಹೋಗುತ್ತಿದ್ದ ಬಸ್‌ ಹೈವಾ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಶಿವಮೊಗ್ಗ | ಭೀಕರ ಅಪಘಾತ ಇಬ್ಬರು ಮೃತ್ಯು

Advertisements

ಸ್ಥಳಕ್ಕೆ ಅಭಾನ್‌ಪುರದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅಭಾನ್‌ಪುರ ಪಟ್ಟಣ ನಿರೀಕ್ಷಕ ಸಿದ್ದೇಶ್ವರ ಪ್ರತಾಪ್, “ಲಾರಿಯನ್ನು ಹಿಂದಿಕ್ಕಲು ಪ್ರಯತ್ನಿಸುತ್ತಾ ವೇಗವಾಗಿ ಚಲಿಸುತ್ತಿದ್ದ ಬಸ್ ಟ್ರಕ್‌ಗೆ ಎಡಭಾಗದಿಂದ ಡಿಕ್ಕಿ ಹೊಡೆದಿದೆ. ರಾಯಲ್ ಟ್ರಾವೆಲ್ಸ್‌ನ ಬಸ್ ರಾಯ್‌ಪುರಕ್ಕೆ ತೆರಳುತ್ತಿತ್ತು. ಆರು ಮಂದಿ ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ” ಹೇಳಿದ್ದಾರೆ.

ಮೃತರೆಲ್ಲರೂ ಬಸ್‌ನ ಮುಂಭಾಗದ ಎಡಭಾಗದಲ್ಲಿ ಕುಳಿತಿದ್ದರು ಎಂದು ಹೇಳಲಾಗಿದೆ. ಈ ಭಾಗ ಸಂಪೂರ್ಣವಾಗಿ ಹಾನಿಗೊಂಡಿದೆ. ಮೃತರನ್ನು ಅಜರ್ ಅಲಿ(30), ಬಲರಾಮ್ ಪಟೇಲ್(46) ಮತ್ತು ಬರ್ಖಾ ಠಾಕೂರ್(31) ಎಂದು ಗುರುತಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ...

Download Eedina App Android / iOS

X