ಲೈಂಗಿಕ ಚಿತ್ರಹಿಂಸೆ ನೀಡುತ್ತಿದ್ದ ವಿಕೃತಕಾಮಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಮೂವರು ಅಪ್ರಾಪ್ತೆಯರು

Date:

Advertisements

ಲೈಂಗಿಕವಾಗಿ ಚಿತ್ರಹಿಂಸೆ ನೀಡುತ್ತಿದ್ದ 25 ವರ್ಷದ ವಿಕೃತಕಾಮಿಯೊಬ್ಬನನ್ನು ಮೂವರು ಅಪ್ರಾಪ್ತೆಯರು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆಗ್ನೇಯ ದೆಹಲಿಯ ಹಜರತ್‌ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದೆ.

ಪೊಲೀಸ್ ವರದಿಗಳ ಪ್ರಕಾರ, ಹತ್ಯೆಯಾದ ಯುವಕನಿಂದ ಮೂವರು ಅಪ್ರಾಪ್ತೆಯರು ಲೈಂಗಿಕ ಕಿರುಕುಳ ಅನುಭವಿಸುತ್ತಿದ್ದರು. ಇದಕ್ಕಾಗಿ ಕೊಲೆಯ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

“ಡಿ.23ರಂದು ರಾತ್ರಿ ನಡೆದ ಘಟನೆಯ ಮಾಹಿತಿ ಪಡೆದ ನಂತರ 16 ರಿಂದ 17 ವರ್ಷದೊಳಗಿನ ಮೂವರು ಬಾಲಕಿಯರನ್ನು ಬಂಧಿಸಲಾಗಿದೆ. ಮೂವರು ಆರೋಪಿಗಳು ಯುವಕನನ್ನು ಕಲ್ಲು, ದೊಣ್ಣೆಗಳಿಂದ ಜಜ್ಜಿ ಹತ್ಯೆ ಮಾಡಿದ ನಂತರ ಆತನ ಮೃತದೇಹವನ್ನು ಹುಲ್ಲು ಮತ್ತು ಬಟ್ಟೆಗಳನ್ನು ಬಳಸಿ ಸುಟ್ಟಿದ್ದಾರೆ, ಕುಶ್ರೊ ಉದ್ಯಾನದಲ್ಲಿ ಮೃತದೇಹ ಪತ್ತೆಯಾಗಿದೆ” ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

“ಮೃತದೇಹವನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಕೊಲೆ ಮತ್ತು ಸಾಕ್ಷ್ಯವನ್ನು ಮರೆಮಾಚಿದ್ದ ಅಂಶಗಳನ್ನು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಆರೋಪಿಗಳು ಡಿಸೆಂಬರ್ 21 ರಂದು ರಾತ್ರಿ ವ್ಯಕ್ತಿಯನ್ನು ಕೊಲೆ ಮಾಡಿ ದೇಹವನ್ನು ಒಣ ಹುಲ್ಲು ಮತ್ತು ಬಟ್ಟೆ ಮೂಲಕ ಸುಟ್ಟು ಹಾಕಲು ಪ್ರಯತ್ನಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ಕೊಲೆಗೆ ಬಳಸಿದ ಆಯುಧಗಳಾದ ಕಲ್ಲುಗಳು ಮತ್ತು ದೊಣ್ಣೆಯನ್ನು ವಶಪಡಿಸಿಕೊಂಡಿದ್ದೇವೆ. ಮೃತನು ತುಂಬಾ ಕೆಟ್ಟ ಸ್ವಭಾವದವನು ಎಂದು ಹಜರತ್ ನಿಜಾಮುದ್ದೀನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತೆ ಲೈಂಗಿಕ ಶೋಷಣೆಗೆ ಒಳಗಾದ ಆರೋಪಿಗಳಲ್ಲಿ ಒಬ್ಬಕೆಯು ಕೊಲೆ ಯೋಜನೆ ರೂಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X