ಪಾಟ್ನಾ| ಮೂರು ವರ್ಷದ ಮಗು ಶವವಾಗಿ ಪತ್ತೆ; ಆಕ್ರೋಶಿತರಿಂದ ಶಾಲೆಗೆ ಬೆಂಕಿ

Date:

Advertisements

ಬಿಹಾರ ರಾಜಧಾನಿ ಪಾಟ್ನಾದ ಶಾಲೆಯೊಂದರ ಆವರಣದ ಟ್ಯಾಂಕಿನೊಳಗಡೆ ಮೂರು ವರ್ಷದ ಮಗು ಶವವಾಗಿ ಪತ್ತೆಯಾಗಿದ್ದು, ಆಕ್ರೋಶಿತರು ಶುಕ್ರವಾರ ಬೆಳಿಗ್ಗೆ ಶಾಲೆಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ದಿಘಾ ಪೊಲೀಸ್ ವ್ಯಾಪ್ತಿಯ ರಾಮ್‌ಜಿಚಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿ ಶಾಲೆಗೆ ಬೆಂಕಿ ಹಚ್ಚಿದ್ದಾರೆ.

ಮೂರು ವರ್ಷ ವಯಸ್ಸಿನ ಮಗು ಶಾಲೆಗೆ ಹೋಗಿದ್ದು, ಶಾಲಾ ಸಮಯ ಮುಗಿದು ಟ್ಯೂಷನ್‌ಗೆ ಹೋಗಿದೆ. ಸಂಜೆಯಾದರೂ ಮನೆಗೆ ಬಾರದ ಕಾರಣ ಕುಟುಂಬಸ್ಥರು ಮಗುವಿನ ಹುಡುಕಾಟ ಮಾಡಿದ್ದಾರೆ. ಇಂದು ಮುಂಜಾನೆ 3 ಗಂಟೆಗೆ ಶಾಲಾ ಆವರಣದಲ್ಲಿರುವ ಟ್ಯಾಂಕಿನೊಳಗೆ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಕಾರಿನಲ್ಲಿ ಆಕಸ್ಮಿಕ ಬೆಂಕಿ; ಚಾಲಕ ಜೀವಂತ ದಹನ  

ಇದರಿಂದ ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿ ಶಾಲೆಗೆ ಬೆಂಕಿ ಹಚ್ಚಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಘಟನೆಯ ವಿವರ ನೀಡಿದ ಪಾಟ್ನಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರ ಪ್ರಕಾಶ್, “ತಡ ರಾತ್ರಿ ನಮಗೆ ಪೋಷಕರು ಮಗು ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದು ನಮ್ಮ ತಂಡವು ಸ್ಥಳಕ್ಕೆ ತಲುಪಿ ಸಾಕ್ಷ್ಯ ಸಂಗ್ರಹಿಸಲು ಪ್ರಾರಂಭಿಸಿತು. ಸಿಸಿಟಿವಿಯಲ್ಲಿ ಮಗು ಶಾಲೆಗೆ ಪ್ರವೇಶಿಸುತ್ತಿರುವುದನ್ನು ನಾವು ನೋಡಿದ್ದೇವೆ. ಆದರೆ ಶಾಲೆಯಿಂದ ಹೊರಗೆ ಹೋಗುವುದು ಕಂಡುಬಂದಿಲ್ಲ” ಎಂದು ಹೇಳಿದರು.

“ಶವವನ್ನು ಮರೆಮಾಡಲಾಗಿದೆ, ಆದ್ದರಿಂದ ನಾವು ಇದನ್ನು ಕೊಲೆ ಪ್ರಕರಣವಾಗಿ ತನಿಖೆ ನಡೆಸುತ್ತೇವೆ, ಈ ಪ್ರಕರಣಕ್ಕೆ ಸಂಬಂಧಿಸಿ ನಾವು ಮೂವರನ್ನು ಬಂಧಿಸಿದ್ದೇವೆ” ಎಂದು ಮಾಹಿತಿ ನೀಡಿದರು.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X