ಎನ್ಐಎ ದಾಳಿ ಘಟನೆ: ಚುನಾವಣಾ ಆಯೋಗವನ್ನು ಭೇಟಿ ನೀಡಲಿರುವ ಟಿಎಂಸಿ ನಿಯೋಗ

Date:

Advertisements

ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಅಧಿಕಾರಿಗಳ ಮೇಲೆ ದಾಳಿಗೆ ಸಂಬಂಧಿಸಿದಂತೆ ಹತ್ತು ಸದಸ್ಯರ ಟಿಎಂಸಿ ನಿಯೋಗ ಚುನಾವಣಾ ಆಯೋಗದ ಸದಸ್ಯರನ್ನು ಇಂದು ಭೇಟಿ ಮಾಡಲಿದೆ.

ಕೆಲವು ದಿನಗಳ ಹಿಂದೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಲು ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾಗ ಸ್ಥಳೀಯರು ಎನ್‌ಐಎ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದರು. ಈ ಘಟನೆಯು ಟಿಎಂಸಿ ಹಾಗೂ ಬಿಜೆಪಿ ನಡುವಿನ ವಾಗ್ವಾದಕ್ಕೆ ಕಾರಣವಾಗಿತ್ತು.

ಇದು ಆಕಸ್ಮಿಕ ಘಟನೆ ಎಂದು ಟಿಎಂಸಿ ಹೇಳಿದರೆ, ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗಿತ್ತು ಎಂದು ಎನ್‌ಐಎ ಹಾಗೂ ಬಿಜೆಪಿ ಆರೋಪ ಮಾಡಿದ್ದವು.

Advertisements

ಟಿಎಂಸಿ ನಿಯೋಗ ಬಿಜೆಪಿ ಹಾಗೂ ಎನ್‌ಐಎ ವಿರುದ್ಧ ದೂರು ನೀಡುವ ಸಾಧ್ಯತೆಯಿದೆ. ಟಿಎಂಸಿ ಚುನಾವಣಾ ಆಯೋಗದ ಬಾಗಿಲು ಬಡಿಯುತ್ತಿರುವುದು ಇದೆ ಮೊದಲಲ್ಲ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

“ಕಳೆದ ವಾರ ಎರಡು ಬಾರಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ನಾವು ಭೇಟಿಯಾಗಿದ್ದೆವು. ಚುನಾವಣೆ ಎದುರಿಸಲು ಎಲ್ಲರಿಗೂ ಸಮಾನ ಅವಕಾಶ ಹಾಗೂ ಪ್ರತಿಯೊಬ್ಬರಿಗೂ ಸಮಾನ ಅವಕಾಶ ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ನಾವು ಈ ವಿಷಯವನ್ನು ಚುನಾವಣಾ ಆಯೋಗದ ಮುಂದೆ ಪ್ರಸ್ತಾಪಿಸಿದ್ದೇವೆ. ಈ ಸಮಯದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಬೇಕೆಂದು ಮಾದರಿ ನೀತಿ ಸಂಹಿತೆ ಜಾರಿಯಾದಗಿನಿಂದ ನಾವು ಹೇಳುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವುದು ಸರಿಯಲ್ಲ” ಎಂದು ನಿಯೋಗದ ಸದಸ್ಯರಲ್ಲಿ ಒಬ್ಬರಾದ ಟಿಎಂಸಿ ಸಂಸದೆ ದೋಲಾ ಸೆನ್‌ ತಿಳಿಸಿದ್ದಾರೆ.

“ಈಗಾಗಲೇ ಇಬ್ಬರು ವಿಪಕ್ಷ ಸಂಸದರು ಸೆರೆಮನೆಯಲ್ಲಿದ್ದಾರೆ. ಪಿತೂರಿಗಳು ಇನ್ನೂ ನಡೆಯುತ್ತಿವೆ.ಎನ್‌ಐಎ ನಮ್ಮ ಇಬ್ಬರು ಕಾರ್ಯಕರ್ತರನ್ನು ಬಂಧಿಸಿದೆ. ಇಂದು ನಮ್ಮ ಪಕ್ಷದ 10 ಮಂದಿ ನಿಯೋಗ ದೆಹಲಿಗೆ ತೆರಳುತ್ತಿದ್ದೇವೆ” ಎಂದು ಡೋಲಾ ಸಿಂಗ್ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X