ಪಶ್ಚಿಮ ಬಂಗಾಳ | ಬುಡಕಟ್ಟು ಬಾಲಕನ ಥಳಿಸಿ ಹತ್ಯೆ: 7 ಟಿಎಂಸಿ ನಾಯಕರ ಬಂಧನ

Date:

Advertisements

ಪಶ್ಚಿಮ ಬಂಗಾಳ ಪಶ್ಚಿಮ ಮೇದಿನಿಪುರ್‌ ಜಿಲ್ಲೆಯ ಸಬಾಂಗ್‌ ಪ್ರದೇಶದ ಹಳ್ಳಿಯೊಂದರಲ್ಲಿ ಕಳ್ಳತನದ ಆರೋಪದ ಮೇಲೆ ಮಂಗಳವಾರ ರಾತ್ರಿ ಲೋಧಾ ಶಬರ್ ಸಮುದಾಯದ 13 ವರ್ಷದ ಬುಡಕಟ್ಟು ಸಮುದಾಯದ ಬಾಲಕನನ್ನು ಹತ್ಯೆಗೈದ ಆರೋಪದಲ್ಲಿ ಟಿಎಂಸಿಯ ಸ್ಥಳೀಯ ಮುಖಂಡ ಮತ್ತು ಆರು ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಸೆ.27ರಂದು ಬುಧವಾರ ಸಬಾಂಗ್‌ನ ಬೋರೋಚರಾ ಗ್ರಾಮದ ನಿವಾಸಿ, ಲೋಧಾ ಶಬರ್ ಸಮುದಾಯದ ಬಾಲಕ ಸುಭಾ ನಾಯಕ್ ಎಂಬಾತನನ್ನು ಆಹಾರ ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಮರಕ್ಕೆ ಕಟ್ಟಿಹಾಕಿ ಹಾಕಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು.

ಅಂಗಡಿಯಿಂದ ಆಹಾರದ ಪೊಟ್ಟಣಗಳು ಕಾಣೆಯಾಗಿದ್ದ ಆರೋಪದ ಮೇಲೆ ಸೆ.26 ರಂದು ಮಂಗಳವಾರ ರಾತ್ರಿ ಸ್ಥಳೀಯ ತೃಣಮೂಲ ನಾಯಕರು ತಾವೆ ಸ್ಥಳೀಯ ನ್ಯಾಯಲಯ ಸ್ಥಾಪಿಸಿಕೊಂಡು ಬಾಲಕ ಸುಭಾ ನಾಯಕ್‌ನನ್ನು ಕಳ್ಳತನದ ಅಪರಾಧಿ ಎಂದು ಘೋಷಿಸಿ ಆತನ ಮೇಲೆ ಥಳಿಸಬೇಕೆಂದು ಆದೇಶ ನೀಡಿದರು.

Advertisements

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಸುಭಾ ನಾಯಕ್ ಮೃತಪಟ್ಟಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌ನ ಪಂಚಾಯತ್ ಸದಸ್ಯ ಮೊನೊರಂಜನ್ ಮಾಲ್ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ.

ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಆದರೆ ಪ್ರಾಥಮಿಕ ತನಿಖೆಯ ಪ್ರಕಾರ ನಾವು ಕೊಲೆ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಪಶ್ಚಿಮ ಬಂಗಾಳ ಮೇದಿನಿಪುರ ವಿಭಾಗದ ಎಸ್ಪಿ ಧೃತಿಮಾನ್ ಸರ್ಕಾರ್ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಭಾರೀ ಪೊಲೀಸ್ ಭದ್ರತೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಗುಜರಾತ್‌: ಕಳ್ಳತನದ ಶಂಕೆಯಲ್ಲಿ ದಲಿತ ಎಂಜಿನಿಯರ್‌ಗೆ ಸಹೋದ್ಯೋಗಿಗಳಿಂದ ಥಳಿತ

ಕೇಂದ್ರ ಸರ್ಕಾರದಿಂದ ಗುರುತಿಸಲ್ಪಟ್ಟ 75 ದುರ್ಬಲ ಸಮುದಾಯಗಳಲ್ಲಿ ಪಟ್ಟಿ ಮಾಡಲಾದ ಲೋಧಾ ಶಬರ್ ಸಮುದಾಯಕ್ಕೆ ಸೇರಿದ ವಲಸೆ ಕಾರ್ಮಿಕರ ಮಗ, ಸುಭಾ ನಾಯಕ್ ಈಗಾಗಲೇ ತಂದೆತಾಯಿಯನ್ನು ಕಳೆದುಕೊಂಡು ಬೊರೊಚಹರಾ ಗ್ರಾಮದಲ್ಲಿ ಸಂಬಂಧಿಕರ ನೆರವಿನಿಂದ ಒಂಟಿಯಾಗಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

“ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕ ಮನೋರಂಜನ್ ಮಾಲ್ ಬಾಲಕನನ್ನು ಫುಟ್ಬಾಲ್‌ನಂತೆ ಒದೆಯುತ್ತಿದ್ದರು. ಆತ ಹಸಿವಿನಿಂದ ಬಳಲುತ್ತಿದ್ದ. ಪದೇ ಪದೇ ನೀರಿಗಾಗಿ ಬೇಡುತ್ತಿದ್ದ. ಆದರೆ, ಅವರು ಮಾತ್ರ ‘ನೀವು ಕಳ್ಳರು, ನಿಮಗೆ ತಕ್ಕ ಪಾಠ ಕಲಿಸಬೇಕು’ ಎಂದು ಹೇಳುತ್ತಾ ಆತನನ್ನು ಹೊಡೆಯುತ್ತಲೇ ಇದ್ದರು” ಎಂದು ಹೆಸರೇಳಲು ಬಯಸದ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿರುವ ಸ್ಥಳೀಯ ರಾಜಕೀಯ ನಾಯಕರು, ಸುಭಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಲು ಯತ್ನಿಸಿದ್ದರು ಎಂದು ಕೂಡಾ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X