ರಂಜಾನ್ ವೇಳೆ ಗಾಜಾದ ಮೇಲೆ ಬಾಂಬ್ ಹಾಕಬೇಡಿ ಎಂದು ಹೇಳಿದ್ದೆ ಎಂದ ಮೋದಿ: ನೆಟ್ಟಿಗರಿಂದ ತರಾಟೆ

Date:

Advertisements

ಪ್ರಧಾನಿ ನರೇಂದ್ರ ಮೋದಿ ಮಾಧ್ಯಮವೊಂದಕ್ಕೆ ಇಸ್ರೇಲ್‌ – ಗಾಜಾದ ಬಗ್ಗೆ ನೀಡಿರುವ ಹೇಳಿಕೆಯೊಂದು ಎಲ್ಲೆಡೆ ವೈರಲ್‌ ಆಗುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿಯನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

”ಅದು ರಂಜಾನ್‌ ತಿಂಗಳ ಸಂದರ್ಭವಾಗಿತ್ತು. ನಾನು ನನ್ನ ವಿಶೇಷ ರಾಯಭಾರಿಯನ್ನು ಇಸ್ರೇಲ್‌ಗೆ ಕಳುಹಿಸಿ ಅಲ್ಲಿನ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ರಂಜಾನ್‌ನ ಸಂದರ್ಭದಲ್ಲಿ ಗಾಜಾದ ಮೇಲೆ ಬಾಂಬ್‌ ಹಾಕಬೇಡಿ ಎಂದು ತಿಳಿಸುವಂತೆ ಹೇಳಿದ್ದೆ. ಅವರು ಅದನ್ನು ಅನುಸರಿಸಲು ಎಲ್ಲ ಪ್ರಯತ್ನಗಳನ್ನು ಮಾಡಿದರು. ಆದರೆ ಕೊನೆಯಲ್ಲಿ ಎರಡು ಮೂರು ದಿನಗಳ ಕಾಲ ಹೋರಾಟ ನಡೆಯಿತು” ಎಂದು ಸಂದರ್ಶನವೊಂದರಲ್ಲಿ ಪ್ರಧಾನಿ ಹೇಳಿದ್ದರು.

ಪ್ರಧಾನಿ ನೀಡಿದ ಈ ಹೇಳಿಕೆ ಎಲ್ಲೆಡೆ ಟ್ರೋಲ್‌ಗೆ ಒಳಗಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿಯ ಹೇಳಿಕೆಯನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು ಇವರು ಮಣಿಪುರ ಒಂದನ್ನು ಬಿಟ್ಟು ಪ್ರಪಂಚದ ಎಲ್ಲ ರಾಷ್ಟ್ರಗಳ ಯುದ್ಧಗಳನ್ನು ನಿಲ್ಲಿಸಿದ್ದಾರೆ ಎಂದು ಟೀಕಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಈಶಾನ್ಯ ರಾಜ್ಯ ಆಂತರಿಕ ಸಂಘರ್ಷದಿಂದ ಗಲಭೆಗಳು ಉಂಟಾಗಿ ನೂರಾರು ಜನರು ಪ್ರಾಣ ಕಳೆದುಕೊಂಡರು. ಸಾವಿರಾರು ಜನ ತಮ್ಮ ಸ್ವಂತ ಆಸ್ತಿಪಾಸ್ತಿ ಬಿಟ್ಟು ಬೇರೆಡೆ ತಮ್ಮ ನೆಲೆ ಬದಲಾಯಿಸಿದರು. ಭಾರತ ಇತಿಹಾಸದಲ್ಲಿಯೇ ಇಂತಹ ಘೋರ ಘಟನೆ ನಡೆದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ಮಣಿಪುರದ ಬಗ್ಗೆ ಒಂದು ಮಾತು ಆಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ದೇಶವೇ ಮಣಿಪುರದ ಆಂತರಿಕ ಸಂಘರ್ಷದ ಬಗ್ಗೆ ಕಂಬನಿ ಮಿಡಿದರೂ ಪ್ರಧಾನಿ ಏಕೆ ಮಾತನಾಡಲಿಲ್ಲ ಕೆಲವರು ಪ್ರಶ್ನಿಸಿದ್ದಾರೆ. ಮತ್ತೂ ಕೆಲವರು ಮಣಿಪುರವು ಪ್ರಧಾನಿಯ ಪಠ್ಯದ ವಿಷಯದಲ್ಲಿ ಇಲ್ಲ ಎಂದು ಕುಟುಕಿದ್ದಾರೆ. ಇನ್ನೂ ಕೆಲವರು ಬಹುಶಃ ನಡ್ಡಾ ಹಾಗೂ ಅಮಿತ್‌ ಶಾ ಅವರನ್ನು ಇಸ್ರೇಲ್‌ಗೆ ಯುದ್ಧ ನಿಲ್ಲಿಸಲು ಕಳಿಸಿರಬೇಕು ಎಂದು ಕುಹುಕವಾಡಿದ್ದಾರೆ.

ಅದಲ್ಲದೆ ಮಾಧ್ಯಮದಲ್ಲಿ ಸಂದರ್ಶನದಲ್ಲಿ ಕುಳಿತು ಪ್ರಶ್ನೆ ಕೇಳುತ್ತಿದ್ದ ನಾಲ್ವರು ಪತ್ರಕರ್ತರು ಕೂಡ ಮೋದಿಯನ್ನು ಆರಾಧಿಸುವ ಗೋಧಿ ಮಾಧ್ಯಮ ಪತ್ರಕರ್ತರಾಗಿದ್ದು, ಇಂತಹ ಪತ್ರಕರ್ತರು ಸರ್ಕಾರದ ದುರಾಡಳಿತವನ್ನು ಪ್ರಶ್ನಿಸುವುದನ್ನು ಬಿಟ್ಟು ಪ್ರಧಾನಿಯ ಸುಳ್ಳುಗಳಿಗೆ ತಲೆಯಾಡಿಸುತ್ತಿರುವುದನ್ನು ಕೂಡ ಹಲವರು ಟ್ರೋಲ್‌ ಮಾಡಿದ್ದಾರೆ.

https://x.com/VeeryaSorry/status/1791338756500533492

 

 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X